ನ್ಯಾಯ ಕೊಡಿಸುತ್ತೇನೆ:‘ಜಮೀನಿನ ಸಂಬಂಧ ಬಡಜನರು ಹೈಕೋರ್ಟ್ಗೂ ಮೊರೆ ಹೋಗಿದ್ದರು. ನ್ಯಾಯಾಲಯ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಆದೇಶಿಸಿದೆ. ಈ ಆದೇಶದನ್ವಯ ಜಿಲ್ಲಾಧಿಕಾರಿ, ಉಪ ವಿಭಾಗಾಧಿಕಾರಿ ಸ್ಥಳಕ್ಕೆ ಭೇಟಿ ನೀಡಿ ಬಡವರಿಗೆ ಜಮೀನು ಬಿಟ್ಟುಕೊಡುವಂತೆ ಸೂಚಿಸಿದ್ದರು. ಆದರೆ, ಜಮೀನು ಬಿಟ್ಟುಕೊಡದೆ ಬಚ್ಚೇಗೌಡರ ಕುಟುಂಬ ಅನ್ಯಾಯ ಎಸಗುತ್ತಿದೆ. ನಾನು ಬಡವರ ಪರ ಹೋರಾಟಕ್ಕೆ ಸಿದ್ಧ’ ಎಂದು ಸಚಿವ ಎಂ.ಟಿ.ಬಿ. ನಾಗರಾಜ್ ‘ಪ್ರಜಾವಾಣಿ’ಗೆ ತಿಳಿಸಿದರು.