<p><strong>ಬೆಂಗಳೂರು:</strong> ಕರ್ನಾಟಕ ಭೂಸುಧಾರಣೆ (ಎರಡನೇ ತಿದ್ದುಪಡಿ) ಸುಗ್ರೀವಾಜ್ಞೆ 2020ಕ್ಕೆ ರಾಜ್ಯಪಾಲರು ಅಂಕಿತ ನೀಡಿದ್ದಾರೆ.</p>.<p>ಕರ್ನಾಟಕ ಭೂಸುಧಾರಣಾ ಕಾಯ್ದೆ 1961ರ ಕಲಂ 63ರ ಅಡಿ ಕೃಷಿಭೂಮಿ ಹೊಂದುವ ಗರಿಷ್ಠ ಮಿತಿಯನ್ನು 108 ಎಕರೆಗೆ ಇಳಿಸು<br />ವುದಾಗಿ ಕಂದಾಯ ಸಚಿವ ಆರ್.ಅಶೋಕ ಅವರು ವಿಧಾನಸಭೆಯಲ್ಲಿ ಭರವಸೆ ನೀಡಿದ್ದರು. ಆದರೆ, ಅದರ ಪ್ರಸ್ತಾಪ ಸುಗ್ರೀವಾಜ್ಞೆಯಲ್ಲಿ ಇಲ್ಲ.</p>.<p>ಕಳೆದ ವಿಧಾನಮಂಡಲ ಅಧಿವೇಶನದಲ್ಲಿ ಈ ತಿದ್ದುಪಡಿ ಮಸೂದೆಗೆ ವಿಧಾನಸಭೆ ಒಪ್ಪಿಗೆ ನೀಡಿದ್ದರೂ ವಿಧಾನಪರಿಷತ್ತಿನಲ್ಲಿ ಮಂಡನೆಯಾಗದ ಕಾರಣ, ಮಸೂದೆ ಅನೂರ್ಜಿತಗೊಂಡಿತು.</p>.<p>ಅಧಿವೇಶನದ ಬಳಿಕ ಸಚಿವ ಸಂಪುಟ ಸಭೆಯಲ್ಲಿ ಮಸೂದೆಗೆ ಮತ್ತೊಮ್ಮೆ ಒಪ್ಪಿಗೆ ನೀಡಿ, ರಾಜ್ಯಪಾಲರಿಗೆ ಕಳುಹಿಸಲಾಗಿತ್ತು. ಈ ಕಾಯ್ದೆಯಡಿ ನೀರಾವರಿ ಪ್ರದೇಶದ ಜಮೀನುಹೊರತುಪಡಿಸಿ, ಇತರ ಕೃಷಿಭೂಮಿಯನ್ನು ಕೃಷಿಕರಲ್ಲದವರಿಗೂ ಖರೀದಿಸಲು ಅವಕಾಶನೀಡಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಕರ್ನಾಟಕ ಭೂಸುಧಾರಣೆ (ಎರಡನೇ ತಿದ್ದುಪಡಿ) ಸುಗ್ರೀವಾಜ್ಞೆ 2020ಕ್ಕೆ ರಾಜ್ಯಪಾಲರು ಅಂಕಿತ ನೀಡಿದ್ದಾರೆ.</p>.<p>ಕರ್ನಾಟಕ ಭೂಸುಧಾರಣಾ ಕಾಯ್ದೆ 1961ರ ಕಲಂ 63ರ ಅಡಿ ಕೃಷಿಭೂಮಿ ಹೊಂದುವ ಗರಿಷ್ಠ ಮಿತಿಯನ್ನು 108 ಎಕರೆಗೆ ಇಳಿಸು<br />ವುದಾಗಿ ಕಂದಾಯ ಸಚಿವ ಆರ್.ಅಶೋಕ ಅವರು ವಿಧಾನಸಭೆಯಲ್ಲಿ ಭರವಸೆ ನೀಡಿದ್ದರು. ಆದರೆ, ಅದರ ಪ್ರಸ್ತಾಪ ಸುಗ್ರೀವಾಜ್ಞೆಯಲ್ಲಿ ಇಲ್ಲ.</p>.<p>ಕಳೆದ ವಿಧಾನಮಂಡಲ ಅಧಿವೇಶನದಲ್ಲಿ ಈ ತಿದ್ದುಪಡಿ ಮಸೂದೆಗೆ ವಿಧಾನಸಭೆ ಒಪ್ಪಿಗೆ ನೀಡಿದ್ದರೂ ವಿಧಾನಪರಿಷತ್ತಿನಲ್ಲಿ ಮಂಡನೆಯಾಗದ ಕಾರಣ, ಮಸೂದೆ ಅನೂರ್ಜಿತಗೊಂಡಿತು.</p>.<p>ಅಧಿವೇಶನದ ಬಳಿಕ ಸಚಿವ ಸಂಪುಟ ಸಭೆಯಲ್ಲಿ ಮಸೂದೆಗೆ ಮತ್ತೊಮ್ಮೆ ಒಪ್ಪಿಗೆ ನೀಡಿ, ರಾಜ್ಯಪಾಲರಿಗೆ ಕಳುಹಿಸಲಾಗಿತ್ತು. ಈ ಕಾಯ್ದೆಯಡಿ ನೀರಾವರಿ ಪ್ರದೇಶದ ಜಮೀನುಹೊರತುಪಡಿಸಿ, ಇತರ ಕೃಷಿಭೂಮಿಯನ್ನು ಕೃಷಿಕರಲ್ಲದವರಿಗೂ ಖರೀದಿಸಲು ಅವಕಾಶನೀಡಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>