<p><strong>ಬೆಂಗಳೂರು: </strong>ರಾಜ್ಯ ಸರ್ಕಾರ ಮಂಡಿಸಿದ ಭೂ ಸುಧಾರಣಾ ಕಾಯ್ದೆ (ಎರಡನೇ ತಿದ್ದುಪಡಿ)–2020 ಮಸೂದೆಗೆ ವಿಧಾನಸೌಧದ ಹೊರಗೆ ತೀವ್ರ ವಿರೋಧ ವ್ಯಕ್ತಪಡಿಸಿ ಪ್ರತಿಭಟನೆ ನಡೆಸಿದ್ದ ಜೆಡಿಎಸ್ ಸದಸ್ಯರು, ವಿಧಾನಪರಿಷತ್ನಲ್ಲಿ ಬೆಂಬಲ ನೀಡುವ ಮೂಲಕ ಮಸೂದೆ ಅಂಗೀಕಾರಕ್ಕೆ ಕೈ ಜೋಡಿಸಿದರು.</p>.<p>ಮಸೂದೆಯ ಮೇಲೆ ಪರಿಷತ್ನಲ್ಲಿ ಮಂಗಳವಾರ ನಡೆದ ‘ವಿಭಜನೆ ಮತ’ ಸಂದರ್ಭದಲ್ಲಿ ಮರಿತಿಬ್ಬೇಗೌಡ ಬಿಟ್ಟು ಉಳಿದ ಎಲ್ಲ ಜೆಡಿಎಸ್ ಸದಸ್ಯರು ಬೆಂಬಲ ಸೂಚಿಸಿದರು. ಕಾಂಗ್ರೆಸ್ ಸದಸ್ಯರು ವಿರೋಧಿಸಿದರು. ಮಸೂದೆ ಪರ 37 ಹಾಗೂ ವಿರುದ್ಧ 21 ಮತಗಳು ಬಿದ್ದವು.</p>.<p>ಹಿಂದಿನ ಅಧಿವೇಶನದಲ್ಲಿ ಮಸೂದೆಗೆ ಅಂಗೀಕಾರ ದೊರೆತಿರಲಿಲ್ಲ. ಈ ಮಸೂದೆಯ ಮೇಲಿನ ಚರ್ಚೆಯ ಬಳಿಕ, ಅನುಮೋದನೆ ನೀಡುವಂತೆ ಕಂದಾಯ ಸಚಿವ ಆರ್. ಅಶೋಕ ಮನವಿ ಮಾಡಿಸಿದರು. ಮಸೂದೆಯನ್ನು ಧ್ವನಿಮತದ ಬದಲು, ಮತಕ್ಕೆ ಹಾಕುವಂತೆ ಕಾಂಗ್ರೆಸ್ ಸದಸ್ಯರು ಒತ್ತಾಯಿಸಿದರು. ಅದಕ್ಕೆ ಒಪ್ಪಿದ ಸಭಾಪತಿ ‘ವಿಭಜನೆ ಮತ’ ಮುಂದಾದರು.</p>.<p>ಅದಕ್ಕೂ ಮೊದಲು ನಡೆದ ಚರ್ಚೆಗೆ ಉತ್ತರ ನೀಡಿದ ಸಚಿವ ಅಶೋಕ, ‘ಕೃಷಿಯಲ್ಲಿ ಆಸಕ್ತಿ ಇರುವ ಯುವ ಸಮುದಾಯದವರನ್ನು ಕೃಷಿ ಕ್ಷೇತ್ರದತ್ತ ಸೆಳೆಯುವ ಕಾರ್ಯಕ್ಕೆ ಸರ್ಕಾರ ಮುಂದಾಗಿದ್ದು, ಈ ಉದ್ದೇಶದಿಂದ ಭೂ ಸುಧಾರಣಾ ಕಾಯ್ದೆಗೆ ತಿದ್ದುಪಡಿ ತರಲಾಗಿದೆ’ ಎಂದು ಸಮರ್ಥಿಸಿದರು.</p>.<p><strong>ನಗೆಗಡಲು: </strong>ಸದಸ್ಯರ ಮತ ವಿಭಜನೆ ನಡೆಸಿದ ಸಂದರ್ಭ ಪರ ಹಾಗೂ ವಿರುದ್ಧ ತಲೆ ಎಣಿಕೆ ನಡೆಸಿದ ಸಭಾಪತಿ ಪ್ರತಾಪ್ ಚಂದ್ರ ಶೆಟ್ಟಿ, ಎಡಭಾಗದ ನಾಲ್ಕನೇ ಸಾಲು ಎನ್ನುವ ಬದಲು ಎಡಭಾಗದ ನಾಲ್ಕನೇ ಸೋಲು ಎಂದು ಬಾಯ್ತಪ್ಪಿ ಹೇಳಿದಾಗ ಇಡೀ ಸದನ ನಗೆಗಡಲಲ್ಲಿ ತೇಲಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ರಾಜ್ಯ ಸರ್ಕಾರ ಮಂಡಿಸಿದ ಭೂ ಸುಧಾರಣಾ ಕಾಯ್ದೆ (ಎರಡನೇ ತಿದ್ದುಪಡಿ)–2020 ಮಸೂದೆಗೆ ವಿಧಾನಸೌಧದ ಹೊರಗೆ ತೀವ್ರ ವಿರೋಧ ವ್ಯಕ್ತಪಡಿಸಿ ಪ್ರತಿಭಟನೆ ನಡೆಸಿದ್ದ ಜೆಡಿಎಸ್ ಸದಸ್ಯರು, ವಿಧಾನಪರಿಷತ್ನಲ್ಲಿ ಬೆಂಬಲ ನೀಡುವ ಮೂಲಕ ಮಸೂದೆ ಅಂಗೀಕಾರಕ್ಕೆ ಕೈ ಜೋಡಿಸಿದರು.</p>.<p>ಮಸೂದೆಯ ಮೇಲೆ ಪರಿಷತ್ನಲ್ಲಿ ಮಂಗಳವಾರ ನಡೆದ ‘ವಿಭಜನೆ ಮತ’ ಸಂದರ್ಭದಲ್ಲಿ ಮರಿತಿಬ್ಬೇಗೌಡ ಬಿಟ್ಟು ಉಳಿದ ಎಲ್ಲ ಜೆಡಿಎಸ್ ಸದಸ್ಯರು ಬೆಂಬಲ ಸೂಚಿಸಿದರು. ಕಾಂಗ್ರೆಸ್ ಸದಸ್ಯರು ವಿರೋಧಿಸಿದರು. ಮಸೂದೆ ಪರ 37 ಹಾಗೂ ವಿರುದ್ಧ 21 ಮತಗಳು ಬಿದ್ದವು.</p>.<p>ಹಿಂದಿನ ಅಧಿವೇಶನದಲ್ಲಿ ಮಸೂದೆಗೆ ಅಂಗೀಕಾರ ದೊರೆತಿರಲಿಲ್ಲ. ಈ ಮಸೂದೆಯ ಮೇಲಿನ ಚರ್ಚೆಯ ಬಳಿಕ, ಅನುಮೋದನೆ ನೀಡುವಂತೆ ಕಂದಾಯ ಸಚಿವ ಆರ್. ಅಶೋಕ ಮನವಿ ಮಾಡಿಸಿದರು. ಮಸೂದೆಯನ್ನು ಧ್ವನಿಮತದ ಬದಲು, ಮತಕ್ಕೆ ಹಾಕುವಂತೆ ಕಾಂಗ್ರೆಸ್ ಸದಸ್ಯರು ಒತ್ತಾಯಿಸಿದರು. ಅದಕ್ಕೆ ಒಪ್ಪಿದ ಸಭಾಪತಿ ‘ವಿಭಜನೆ ಮತ’ ಮುಂದಾದರು.</p>.<p>ಅದಕ್ಕೂ ಮೊದಲು ನಡೆದ ಚರ್ಚೆಗೆ ಉತ್ತರ ನೀಡಿದ ಸಚಿವ ಅಶೋಕ, ‘ಕೃಷಿಯಲ್ಲಿ ಆಸಕ್ತಿ ಇರುವ ಯುವ ಸಮುದಾಯದವರನ್ನು ಕೃಷಿ ಕ್ಷೇತ್ರದತ್ತ ಸೆಳೆಯುವ ಕಾರ್ಯಕ್ಕೆ ಸರ್ಕಾರ ಮುಂದಾಗಿದ್ದು, ಈ ಉದ್ದೇಶದಿಂದ ಭೂ ಸುಧಾರಣಾ ಕಾಯ್ದೆಗೆ ತಿದ್ದುಪಡಿ ತರಲಾಗಿದೆ’ ಎಂದು ಸಮರ್ಥಿಸಿದರು.</p>.<p><strong>ನಗೆಗಡಲು: </strong>ಸದಸ್ಯರ ಮತ ವಿಭಜನೆ ನಡೆಸಿದ ಸಂದರ್ಭ ಪರ ಹಾಗೂ ವಿರುದ್ಧ ತಲೆ ಎಣಿಕೆ ನಡೆಸಿದ ಸಭಾಪತಿ ಪ್ರತಾಪ್ ಚಂದ್ರ ಶೆಟ್ಟಿ, ಎಡಭಾಗದ ನಾಲ್ಕನೇ ಸಾಲು ಎನ್ನುವ ಬದಲು ಎಡಭಾಗದ ನಾಲ್ಕನೇ ಸೋಲು ಎಂದು ಬಾಯ್ತಪ್ಪಿ ಹೇಳಿದಾಗ ಇಡೀ ಸದನ ನಗೆಗಡಲಲ್ಲಿ ತೇಲಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>