<p><strong>ಗದಗ</strong>: ‘ರಾಜ್ಯದಲ್ಲಿ ದ್ವಿಭಾಷಾ ಅಥವಾ ತ್ರಿಭಾಷಾ ಸೂತ್ರದ ಕುರಿತು ಚರ್ಚೆ ನಡೆಯುತ್ತಿದೆ. ಆದರೆ, ಈವರೆಗೆ ತೀರ್ಮಾನ ಕೈಗೊಂಡಿಲ್ಲ. ಇದರಲ್ಲಿ ಮುಖ್ಯಮಂತ್ರಿಯವರ ನಿರ್ಣಯವೇ ಅಂತಿಮ’ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದರು.</p>.<p>‘ರಾಷ್ಟ್ರೀಯ ಶಿಕ್ಷಣ ನೀತಿಯನ್ನು ರಾಜ್ಯ ಸರ್ಕಾರ ಒಪ್ಪುವುದಿಲ್ಲ. ಪ್ರತ್ಯೇಕ, ರಾಜ್ಯ ಶಿಕ್ಷಣ ನೀತಿಯನ್ನು (ಎಸ್ಇಪಿ) ಪ್ರೋತ್ಸಾಹಿಸುತ್ತದೆ. ಹಾಗಾಗಿ ಎಸ್ಇಪಿ ಸಮಿತಿಯಲ್ಲಿ ದ್ವಿಭಾಷಾ, ತ್ರಿಭಾಷಾ ಸೂತ್ರದ ಬಗ್ಗೆ ಚರ್ಚಿಸಲಾಗುವುದು’ ಎಂದು ಶುಕ್ರವಾರ ಅವರು ಸುದ್ದಿಗಾರರಿಗೆ ತಿಳಿಸಿದರು.</p>.<p>‘ಹಿರಿಯ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ ಕುರಿತ ಪ್ರಕರಣ ಸುಪ್ರೀಂ ಕೋರ್ಟ್ನಲ್ಲಿದೆ. ಮಹಿಳಾ ಅಭ್ಯರ್ಥಿಗಳು ನೇಮಕಾತಿ ಸಂದರ್ಭದಲ್ಲಿ ಪತಿ ಅಥವಾ ತಂದೆಯ ಆದಾಯ ಪ್ರಮಾಣಪತ್ರ ಲಗತ್ತಿಸಬೇಕಾ ಎಂಬ ಪ್ರಕರಣ ಇದಾಗಿದೆ. ಕೋರ್ಟ್ ಆದೇಶವನ್ನು ಇಲಾಖೆ ಪಾಲಿಸಲಿದೆ’ ಎಂದರು.</p>.<p>‘ಮುಂದೆ ಈ ರೀತಿಯ ಸಮಸ್ಯೆ ಎದುರಾಗಬಾರದು ಎಂಬ ಕಾರಣಕ್ಕೆ ಹೊಸ ಶಿಕ್ಷಕರ ನೇಮಕಾತಿ ಸಂಬಂಧ ಕಾನೂನು ಇಲಾಖೆ ಅಭಿಪ್ರಾಯ ಕೇಳಲಾಗಿದೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗದಗ</strong>: ‘ರಾಜ್ಯದಲ್ಲಿ ದ್ವಿಭಾಷಾ ಅಥವಾ ತ್ರಿಭಾಷಾ ಸೂತ್ರದ ಕುರಿತು ಚರ್ಚೆ ನಡೆಯುತ್ತಿದೆ. ಆದರೆ, ಈವರೆಗೆ ತೀರ್ಮಾನ ಕೈಗೊಂಡಿಲ್ಲ. ಇದರಲ್ಲಿ ಮುಖ್ಯಮಂತ್ರಿಯವರ ನಿರ್ಣಯವೇ ಅಂತಿಮ’ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದರು.</p>.<p>‘ರಾಷ್ಟ್ರೀಯ ಶಿಕ್ಷಣ ನೀತಿಯನ್ನು ರಾಜ್ಯ ಸರ್ಕಾರ ಒಪ್ಪುವುದಿಲ್ಲ. ಪ್ರತ್ಯೇಕ, ರಾಜ್ಯ ಶಿಕ್ಷಣ ನೀತಿಯನ್ನು (ಎಸ್ಇಪಿ) ಪ್ರೋತ್ಸಾಹಿಸುತ್ತದೆ. ಹಾಗಾಗಿ ಎಸ್ಇಪಿ ಸಮಿತಿಯಲ್ಲಿ ದ್ವಿಭಾಷಾ, ತ್ರಿಭಾಷಾ ಸೂತ್ರದ ಬಗ್ಗೆ ಚರ್ಚಿಸಲಾಗುವುದು’ ಎಂದು ಶುಕ್ರವಾರ ಅವರು ಸುದ್ದಿಗಾರರಿಗೆ ತಿಳಿಸಿದರು.</p>.<p>‘ಹಿರಿಯ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ ಕುರಿತ ಪ್ರಕರಣ ಸುಪ್ರೀಂ ಕೋರ್ಟ್ನಲ್ಲಿದೆ. ಮಹಿಳಾ ಅಭ್ಯರ್ಥಿಗಳು ನೇಮಕಾತಿ ಸಂದರ್ಭದಲ್ಲಿ ಪತಿ ಅಥವಾ ತಂದೆಯ ಆದಾಯ ಪ್ರಮಾಣಪತ್ರ ಲಗತ್ತಿಸಬೇಕಾ ಎಂಬ ಪ್ರಕರಣ ಇದಾಗಿದೆ. ಕೋರ್ಟ್ ಆದೇಶವನ್ನು ಇಲಾಖೆ ಪಾಲಿಸಲಿದೆ’ ಎಂದರು.</p>.<p>‘ಮುಂದೆ ಈ ರೀತಿಯ ಸಮಸ್ಯೆ ಎದುರಾಗಬಾರದು ಎಂಬ ಕಾರಣಕ್ಕೆ ಹೊಸ ಶಿಕ್ಷಕರ ನೇಮಕಾತಿ ಸಂಬಂಧ ಕಾನೂನು ಇಲಾಖೆ ಅಭಿಪ್ರಾಯ ಕೇಳಲಾಗಿದೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>