<p><strong>ಬೆಂಗಳೂರು:</strong> ಸರ್ಕಾರಿ ಪದವಿ ಕಾಲೇಜುಗಳಲ್ಲಿಉತ್ತೀರ್ಣರಾದ ಪದವಿ ತರಗತಿಗಳ ಎಲ್ಲ ವಿದ್ಯಾರ್ಥಿಗಳಿಗೂ ಲ್ಯಾಪ್ಟಾಪ್ ನೀಡಲು ಚಿಂತನೆ ನಡೆಸಲಾಗುತ್ತಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ಹೇಳಿದರು.</p>.<p>‘ಪ್ರಥಮ ಪದವಿ ತರಗತಿಗಳ 1 ಲಕ್ಷಕ್ಕಿಂತ ಅಧಿಕ ವಿದ್ಯಾರ್ಥಿಗಳಿಗೆ ಸಹ ಶೀಘ್ರ ಲ್ಯಾಪ್ಟಾಪ್ ನೀಡಲಾಗುವುದು. ಎರಡು ಮತ್ತು ಮೂರನೇ ವರ್ಷಗಳಲ್ಲಿ ವ್ಯಾಸಂಗ ಮಾಡುತ್ತಿರುವ, ಎಲ್ಲಾ ವಿಷಯಗಳಲ್ಲಿ ಉತ್ತೀರ್ಣರಾಗಿರುವ ವಿದ್ಯಾರ್ಥಿಗಳಿಗೆ ಸಹ ಲ್ಯಾಪ್ಟಾಪ್ ನೀಡುವ ಕುರಿತು ಇದೀಗ ಪರಿಶೀಲನೆ ನಡೆಯುತ್ತಿದೆ, ಈ ಬಗ್ಗೆ ಶೀಘ್ರ ನಿರ್ಧಾರ ಕೈಗೊಳ್ಳಲಾಗುವುದು, ಈಗಾಗಲೇ ನೀಡಿದ ಲ್ಯಾಪ್ಟಾಪ್ ಹಿಂದಕ್ಕೆ ಪಡೆಯುವುದಿಲ್ಲ’ ಎಂದು ಅವರು ಬುಧವಾರ ಇಲ್ಲಿ ಸುದ್ದಿಗಾರರಿಗೆ ತಿಳಿಸಿದರು.</p>.<p>ವೈದ್ಯಕೀಯ ಸೀಟು ಶುಲ್ಕ ನಿಗದಿಗೆ ಸಂಬಂಧಿಸಿದಂತೆ ಪರಿಶೀಲನೆ ನಡೆಸಿ ಶಿಫಾರಸು ಮಾಡಲು ನ್ಯಾಯಮೂರ್ತಿ<br />ಯೊಬ್ಬರನ್ನು ನೇಮಕ ಮಾಡುವ ನಿಟ್ಟಿನಲ್ಲಿ ಹೈಕೋರ್ಟ್ ರಿಜಿಸ್ಟ್ರಾರ್ ಅವರಿಗೆ ಈಗಾಗಲೇ 4 ಬಾರಿ ಪತ್ರ ಬರೆಯಲಾಗಿದೆ ಎಂದರು.</p>.<p><strong>ದುಡ್ಡು ಠೇವಣಿಗೆ ಟೆಂಡರ್:</strong> ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (ಕೆಇಎ) ಬಳಿ₹ 300 ಕೋಟಿ ಸಂಗ್ರಹ ಠೇವಣಿ ಇದ್ದು, ಈ ವರ್ಷದಿಂದ ಟೆಂಡರ್ ಕರೆದು ಅದನ್ನು ಬ್ಯಾಂಕ್ನಲ್ಲಿ ಇರಿಸಲಾಗುತ್ತದೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಸರ್ಕಾರಿ ಪದವಿ ಕಾಲೇಜುಗಳಲ್ಲಿಉತ್ತೀರ್ಣರಾದ ಪದವಿ ತರಗತಿಗಳ ಎಲ್ಲ ವಿದ್ಯಾರ್ಥಿಗಳಿಗೂ ಲ್ಯಾಪ್ಟಾಪ್ ನೀಡಲು ಚಿಂತನೆ ನಡೆಸಲಾಗುತ್ತಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ಹೇಳಿದರು.</p>.<p>‘ಪ್ರಥಮ ಪದವಿ ತರಗತಿಗಳ 1 ಲಕ್ಷಕ್ಕಿಂತ ಅಧಿಕ ವಿದ್ಯಾರ್ಥಿಗಳಿಗೆ ಸಹ ಶೀಘ್ರ ಲ್ಯಾಪ್ಟಾಪ್ ನೀಡಲಾಗುವುದು. ಎರಡು ಮತ್ತು ಮೂರನೇ ವರ್ಷಗಳಲ್ಲಿ ವ್ಯಾಸಂಗ ಮಾಡುತ್ತಿರುವ, ಎಲ್ಲಾ ವಿಷಯಗಳಲ್ಲಿ ಉತ್ತೀರ್ಣರಾಗಿರುವ ವಿದ್ಯಾರ್ಥಿಗಳಿಗೆ ಸಹ ಲ್ಯಾಪ್ಟಾಪ್ ನೀಡುವ ಕುರಿತು ಇದೀಗ ಪರಿಶೀಲನೆ ನಡೆಯುತ್ತಿದೆ, ಈ ಬಗ್ಗೆ ಶೀಘ್ರ ನಿರ್ಧಾರ ಕೈಗೊಳ್ಳಲಾಗುವುದು, ಈಗಾಗಲೇ ನೀಡಿದ ಲ್ಯಾಪ್ಟಾಪ್ ಹಿಂದಕ್ಕೆ ಪಡೆಯುವುದಿಲ್ಲ’ ಎಂದು ಅವರು ಬುಧವಾರ ಇಲ್ಲಿ ಸುದ್ದಿಗಾರರಿಗೆ ತಿಳಿಸಿದರು.</p>.<p>ವೈದ್ಯಕೀಯ ಸೀಟು ಶುಲ್ಕ ನಿಗದಿಗೆ ಸಂಬಂಧಿಸಿದಂತೆ ಪರಿಶೀಲನೆ ನಡೆಸಿ ಶಿಫಾರಸು ಮಾಡಲು ನ್ಯಾಯಮೂರ್ತಿ<br />ಯೊಬ್ಬರನ್ನು ನೇಮಕ ಮಾಡುವ ನಿಟ್ಟಿನಲ್ಲಿ ಹೈಕೋರ್ಟ್ ರಿಜಿಸ್ಟ್ರಾರ್ ಅವರಿಗೆ ಈಗಾಗಲೇ 4 ಬಾರಿ ಪತ್ರ ಬರೆಯಲಾಗಿದೆ ಎಂದರು.</p>.<p><strong>ದುಡ್ಡು ಠೇವಣಿಗೆ ಟೆಂಡರ್:</strong> ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (ಕೆಇಎ) ಬಳಿ₹ 300 ಕೋಟಿ ಸಂಗ್ರಹ ಠೇವಣಿ ಇದ್ದು, ಈ ವರ್ಷದಿಂದ ಟೆಂಡರ್ ಕರೆದು ಅದನ್ನು ಬ್ಯಾಂಕ್ನಲ್ಲಿ ಇರಿಸಲಾಗುತ್ತದೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>