<p><strong>ಬೆಂಗಳೂರು</strong>: ಕಾಫಿ, ಏಲಕ್ಕಿ, ಕಾಳುಮೆಣಸು ಬೆಳೆಗಾರರು ಅನಧಿಕೃತವಾಗಿ ಸಾಗುವಳಿ ಮಾಡುತ್ತಿರುವ ಸರ್ಕಾರಿ ಜಮೀನುಗಳನ್ನು ಅವರಿಗೆ ಗುತ್ತಿಗೆಗೆ ನೀಡಲು ಕರ್ನಾಟಕ ಭೂಕಂದಾಯ ಕಾಯ್ದೆಗೆ ತಿದ್ದುಪಡಿ ತರಲಾಗುವುದು ಎಂದು ಕಂದಾಯ ಸಚಿವ ಆರ್. ಅಶೋಕ ತಿಳಿಸಿದರು.</p>.<p>ಸುದ್ದಿಗಾರರ ಜತೆ ಸೋಮವಾರ ಮಾತನಾಡಿದ ಅವರು, 'ವಾಣಿಜ್ಯ ಬೆಳೆ ಬೆಳೆಯುವ ಕೃಷಿಕರು ಸುಮಾರು ಒಂದು ಲಕ್ಷ ಎಕರೆಗೂ ಹೆಚ್ಚು ವಿಸ್ತೀರ್ಣದ ಸರ್ಕಾರಿ ಜಮೀನುಗಳನ್ನು ಅನಧಿಕೃತವಾಗಿ ಸಾಗುವಳಿ ಮಾಡುತ್ತಿದ್ದಾರೆ. ಭೂಕಂದಾಯ ಕಾಯ್ದೆಗೆ ತಿದ್ದುಪಡಿ ತಂದು ಈ ಜಮೀನುಗಳನ್ನು ಅವರಿಗೆ ದೀರ್ಘಾವಧಿಗೆ ಗುತ್ತಿಗೆಗೆ ನೀಡಲು ಅವಕಾಶ ಕಲ್ಪಿಸಲಾಗುವುದು. ಈ ತಿಂಗಳಲ್ಲಿ ನಡೆಯುವ ವಿಧಾನಮಂಡಲದ ಅಧಿವೇಶನದಲ್ಲಿ ತಿದ್ದುಪಡಿ ಮಸೂದೆ ಮಂಡಿಸಲಾಗುವುದು' ಎಂದರು.</p>.<p>ಚಿಕ್ಕಮಗಳೂರು ಜಿಲ್ಲೆಯಲ್ಲಿ 45,000 ಎಕರೆ, ಹಾಸನ ಜಿಲ್ಲೆಯಲ್ಲಿ 30,000 ಎಕರೆ ಮತ್ತು ಕೊಡಗು ಜಿಲ್ಲೆಯಲ್ಲಿ 9,000 ಎಕರೆ ಸರ್ಕಾರಿ ಜಮೀನುಗಳನ್ನು ವಾಣಿಜ್ಯ ಬೆಳೆಗಾರರು ಅನಧಿಕೃತವಾಗಿ ಸಾಗುವಳಿ ಮಾಡುತ್ತಿದ್ದಾರೆ. ಗುತ್ತಿಗೆಗೆ ನೀಡುವ ಮೂಲಕ ಈ ಜಮೀನುಗಳ ಮೇಲಿನ ಸರ್ಕಾರದ ಹಕ್ಕನ್ನು ಖಾತರಿಪಡಿಸಲಾಗುವುದು ಎಂದು ತಿಳಿಸಿದರು.</p>.<p>6 ಲಕ್ಷ ಹೆಕ್ಟೇರ್ ಸರ್ಕಾರಿ ಜಮೀನು ಶೀಘ್ರದಲ್ಲಿ ಡೀಮ್ಡ್ ಅರಣ್ಯದ ವ್ಯಾಪ್ತಿಯಿಂದ ಹೊರ ಬರಲಿವೆ. ಅವುಗಳನ್ನು ಶಾಲೆ, ಕಾಲೇಜು, ಆಸ್ಪತ್ರೆ ಮತ್ತಿತರ ಸಾರ್ವಜನಿಕ ಉದ್ದೇಶಕ್ಕೆ ಆದ್ಯತೆ ಮೇಲೆ ಹಂಚಿಕೆ ಮಾಡಲಾಗುವುದು ಎಂದರು.</p>.<p>ತಜ್ಞರ ತಂಡದಿಂದ ಅಧ್ಯಯನ: ಕೊಡಗು ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳ ಗಡಿ ಭಾಗದಲ್ಲಿ ಪದೇ ಪದೇ ಭೂಕಂಪನ ಆಗುತ್ತಿರುವ ಪ್ರದೇಶದಲ್ಲಿ ಹೈದರಾಬಾದ್ ನ ತಜ್ಞರ ತಂಡದಿಂದ ಅಧ್ಯಯನ ನಡೆಸಲಾಗುವುದು. ಈ ತಂಡವು ಒಂದು ವಾರ ಆ ಭಾಗದಲ್ಲಿ ವಾಸ್ತವ್ಯ ಹೂಡಿ ಅಧ್ಯಯನ ನಡೆಸಲಿದೆ ಎಂದು ಅಶೋಕ ಹೇಳಿದರು.</p>.<p>'ನಾನು ಕೂಡ ಅಧಿಕಾರಿಗಳ ತಂಡದೊಂದಿಗೆ ಕೊಡಗು, ದಕ್ಷಿಣ ಕನ್ನಡ ಜಿಲ್ಲೆಗಳ ಗಡಿಭಾಗಕ್ಕೆ ಭೇಟಿನೀಡುತ್ತೇನೆ. ಒಂದು ದಿನ ಅಲ್ಲಿಯೇ ವಾಸ್ತವ್ಯ ಮಾಡಿ, ಪರಿಸ್ಥಿತಿ ಅವಲೋಕಿಸುತ್ತೇನೆ' ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಕಾಫಿ, ಏಲಕ್ಕಿ, ಕಾಳುಮೆಣಸು ಬೆಳೆಗಾರರು ಅನಧಿಕೃತವಾಗಿ ಸಾಗುವಳಿ ಮಾಡುತ್ತಿರುವ ಸರ್ಕಾರಿ ಜಮೀನುಗಳನ್ನು ಅವರಿಗೆ ಗುತ್ತಿಗೆಗೆ ನೀಡಲು ಕರ್ನಾಟಕ ಭೂಕಂದಾಯ ಕಾಯ್ದೆಗೆ ತಿದ್ದುಪಡಿ ತರಲಾಗುವುದು ಎಂದು ಕಂದಾಯ ಸಚಿವ ಆರ್. ಅಶೋಕ ತಿಳಿಸಿದರು.</p>.<p>ಸುದ್ದಿಗಾರರ ಜತೆ ಸೋಮವಾರ ಮಾತನಾಡಿದ ಅವರು, 'ವಾಣಿಜ್ಯ ಬೆಳೆ ಬೆಳೆಯುವ ಕೃಷಿಕರು ಸುಮಾರು ಒಂದು ಲಕ್ಷ ಎಕರೆಗೂ ಹೆಚ್ಚು ವಿಸ್ತೀರ್ಣದ ಸರ್ಕಾರಿ ಜಮೀನುಗಳನ್ನು ಅನಧಿಕೃತವಾಗಿ ಸಾಗುವಳಿ ಮಾಡುತ್ತಿದ್ದಾರೆ. ಭೂಕಂದಾಯ ಕಾಯ್ದೆಗೆ ತಿದ್ದುಪಡಿ ತಂದು ಈ ಜಮೀನುಗಳನ್ನು ಅವರಿಗೆ ದೀರ್ಘಾವಧಿಗೆ ಗುತ್ತಿಗೆಗೆ ನೀಡಲು ಅವಕಾಶ ಕಲ್ಪಿಸಲಾಗುವುದು. ಈ ತಿಂಗಳಲ್ಲಿ ನಡೆಯುವ ವಿಧಾನಮಂಡಲದ ಅಧಿವೇಶನದಲ್ಲಿ ತಿದ್ದುಪಡಿ ಮಸೂದೆ ಮಂಡಿಸಲಾಗುವುದು' ಎಂದರು.</p>.<p>ಚಿಕ್ಕಮಗಳೂರು ಜಿಲ್ಲೆಯಲ್ಲಿ 45,000 ಎಕರೆ, ಹಾಸನ ಜಿಲ್ಲೆಯಲ್ಲಿ 30,000 ಎಕರೆ ಮತ್ತು ಕೊಡಗು ಜಿಲ್ಲೆಯಲ್ಲಿ 9,000 ಎಕರೆ ಸರ್ಕಾರಿ ಜಮೀನುಗಳನ್ನು ವಾಣಿಜ್ಯ ಬೆಳೆಗಾರರು ಅನಧಿಕೃತವಾಗಿ ಸಾಗುವಳಿ ಮಾಡುತ್ತಿದ್ದಾರೆ. ಗುತ್ತಿಗೆಗೆ ನೀಡುವ ಮೂಲಕ ಈ ಜಮೀನುಗಳ ಮೇಲಿನ ಸರ್ಕಾರದ ಹಕ್ಕನ್ನು ಖಾತರಿಪಡಿಸಲಾಗುವುದು ಎಂದು ತಿಳಿಸಿದರು.</p>.<p>6 ಲಕ್ಷ ಹೆಕ್ಟೇರ್ ಸರ್ಕಾರಿ ಜಮೀನು ಶೀಘ್ರದಲ್ಲಿ ಡೀಮ್ಡ್ ಅರಣ್ಯದ ವ್ಯಾಪ್ತಿಯಿಂದ ಹೊರ ಬರಲಿವೆ. ಅವುಗಳನ್ನು ಶಾಲೆ, ಕಾಲೇಜು, ಆಸ್ಪತ್ರೆ ಮತ್ತಿತರ ಸಾರ್ವಜನಿಕ ಉದ್ದೇಶಕ್ಕೆ ಆದ್ಯತೆ ಮೇಲೆ ಹಂಚಿಕೆ ಮಾಡಲಾಗುವುದು ಎಂದರು.</p>.<p>ತಜ್ಞರ ತಂಡದಿಂದ ಅಧ್ಯಯನ: ಕೊಡಗು ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳ ಗಡಿ ಭಾಗದಲ್ಲಿ ಪದೇ ಪದೇ ಭೂಕಂಪನ ಆಗುತ್ತಿರುವ ಪ್ರದೇಶದಲ್ಲಿ ಹೈದರಾಬಾದ್ ನ ತಜ್ಞರ ತಂಡದಿಂದ ಅಧ್ಯಯನ ನಡೆಸಲಾಗುವುದು. ಈ ತಂಡವು ಒಂದು ವಾರ ಆ ಭಾಗದಲ್ಲಿ ವಾಸ್ತವ್ಯ ಹೂಡಿ ಅಧ್ಯಯನ ನಡೆಸಲಿದೆ ಎಂದು ಅಶೋಕ ಹೇಳಿದರು.</p>.<p>'ನಾನು ಕೂಡ ಅಧಿಕಾರಿಗಳ ತಂಡದೊಂದಿಗೆ ಕೊಡಗು, ದಕ್ಷಿಣ ಕನ್ನಡ ಜಿಲ್ಲೆಗಳ ಗಡಿಭಾಗಕ್ಕೆ ಭೇಟಿನೀಡುತ್ತೇನೆ. ಒಂದು ದಿನ ಅಲ್ಲಿಯೇ ವಾಸ್ತವ್ಯ ಮಾಡಿ, ಪರಿಸ್ಥಿತಿ ಅವಲೋಕಿಸುತ್ತೇನೆ' ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>