ವಿಳಂಬ ಮಾಡಿಲ್ಲ: ಸೀಮಾಂತ್ಕುಮಾರ್ ಸಿಂಗ್
‘ವಿಜಯಲಕ್ಷ್ಮಿ ನೀಡಿರುವ ದೂರಿನ ಬಳಿಕ ಕಾನೂನಿನ ಅನ್ವಯ ತಕ್ಷಣ ಎಫ್ಐಆರ್ ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಗಿದೆ’ ಎಂದು ಸೀಮಾಂತ್ ಕುಮಾರ್ ಸಿಂಗ್ ಪ್ರತಿಕ್ರಿಯಿಸಿದ್ದಾರೆ. ‘ಎಲ್ಲರ ರಕ್ಷಣೆಗೆ ಪೊಲೀಸರು ಇದ್ದಾರೆ. ಈ ಪ್ರಕರಣದಲ್ಲಿಯೂ ಕಾನೂನಾತ್ಮಕವಾಗಿ ಎಫ್ಐಆರ್ ದಾಖಲಿಸಿಕೊಂಡು ಡಿಸಿಪಿ ಹಂತದ ಅಧಿಕಾರಿಯಿಂದಲೇ ತನಿಖೆ ಮಾಡಲಾಗುತ್ತಿದೆ. ಕೆಲವೊಮ್ಮೆ ತಕ್ಷಣಕ್ಕೆ ಆರೋಪಿಗಳ ಪತ್ತೆ ಸಾಧ್ಯವಾಗುವುದಿಲ್ಲ. ಅದನ್ನು ಹೊರತುಪಡಿಸಿದರೆ ಬೇರೆ ಯಾವುದೊ ಉದ್ದೇಶದಿಂದ ತನಿಖೆ ವಿಳಂಬವಾಗುತ್ತಿಲ್ಲ. ಆ ರೀತಿ ಮಾಡಿದರೆ ತನಿಖಾಧಿಕಾರಿಗಳ ಮೇಲೆ ಕ್ರಮ ಕೈಗೊಳ್ಳಲಾಗುತ್ತದೆ’ ಎಂದು ಅವರು ತಿಳಿಸಿದರು.