ಚಿಕ್ಕಮಗಳೂರು: ‘ಹುಲಿ ಸಂರಕ್ಷಿತ ಪ್ರದೇಶ ಮತ್ತು ಆನೆಕಾರಿಡಾರ್ನ ಬಫರ್ ವಲಯದಲ್ಲಿ ಲೇಔಟ್ ನಿರ್ಮಿಸು ತ್ತಿರುವುದನ್ನುಸರ್ಕಾರ ಗಂಭೀರವಾಗಿ ಪರಿಗಣಿಸಿದೆ’ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ.ಜಾರ್ಜ್ ತಿಳಿಸಿದರು.
ತರೀಕೆರೆಯಲ್ಲಿ ಮಾತನಾಡಿದ ಅವರು, ‘ಲೇಔಟ್ ನಿರ್ಮಾಣವಾಗುತ್ತಿರುವುದು ಗಮನಕ್ಕೆ ಬಂದಿತ್ತು. ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿಗೆ ಸೂಚನೆ ನೀಡಿದ್ದೆ.ಈಗ ಅವರು ನೋಟಿಸ್ ನೀಡಿದ್ದಾರೆ, ಮುಂದಿನ ಪ್ರಕ್ರಿಯೆಗಳು ನಡೆಯಲಿವೆ’ ಎಂದರು.
‘ಹುಲಿ ಸಂರಕ್ಷಿತ ಪ್ರದೇಶ ಮಾತ್ರವಲ್ಲ, ಭೂಸುಧಾರಣ ಕಾಯ್ದೆಯನ್ನೂ ಉಲ್ಲಂಘಿಸಲಾಗಿದೆ. ಕಂದಾಯ ಮತ್ತು ಅರಣ್ಯ ಸಚಿವರೊಂದಿಗೂ ಈ ಬಗ್ಗೆ ಚರ್ಚೆ ನಡೆಸಿದ್ದೇನೆ’ ಮಾಹಿತಿ ನೀಡಿದರು.
ಯಾವುದೇ ಕಾರಣಕ್ಕೂ ಪರಿಸರ ಹಾನಿಗೆ ಅವಕಾಶ ನೀಡುವುದಿಲ್ಲ. ನಿರ್ದಾಕ್ಷಿಣ್ಯ ಕ್ರಮಕೈಗೊಳ್ಳಲಾಗುವುದು’ ಎಂದು ಅವರು ಎಚ್ಚರಿಕೆ ನೀಡಿದರು.