ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ‘ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಜನ ತಮ್ಮ ಹಣ ತೆಗೆದುಕೊಳ್ಳುವುದರಿಂದ ಹಿಡಿದು ಆಸ್ಪತ್ರೆಯಲ್ಲಿ ಚಿಕಿತ್ಸೆ, ಆಮ್ಲಜನಕ, ಔಷಧ ಪಡೆಯಲು ಮಾತ್ರವಲ್ಲದೆ, ಕೊನೆಗೆ ಶವಸಂಸ್ಕಾರಕ್ಕೂ ಸರದಿಯಲ್ಲಿ ನಿಲ್ಲುವಂಥ ದುಸ್ಥಿತಿ ನಿರ್ಮಾಣವಾಯಿತು. ಈ ಸಮಸ್ಯೆಗಳಿಂದ ಮುಕ್ತಿ ಸಿಗಬೇಕಾದರೆ ಈ ಸರ್ಕಾರವನ್ನು ಕಿತ್ತೊಗೆಯಬೇಕು’ ಎಂದು ವಾಗ್ದಾಳಿ ನಡೆಸಿದರು.