<p><strong>ಮೈಸೂರು</strong>: ಉಪಚುನಾವಣೆ ಫಲಿತಾಂಶದ ಬಳಿಕ ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಮಾಡಲಾಗುತ್ತದೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಬುಧವಾರ ಇಲ್ಲಿ ಹೇಳಿದರು.</p>.<p>‘ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಲು ತಯಾರಿ ನಡೆದಿದೆ. ದೆಹಲಿಯಿಂದ ನನಗೆ ಲಭಿಸಿರುವ ಮಾಹಿತಿಯಂತೆ ಈ ಮಾತು ಹೇಳಿದ್ದೇನೆ. ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಬಿಜೆಪಿಯಲ್ಲಿ ಮೊದಲಿನಿಂದಲೂ ಚರ್ಚೆ ನಡೆಯುತ್ತಾ ಇದೆ. ಆ ಚರ್ಚೆ ಈಗ ಇನ್ನಷ್ಟು ಗಟ್ಟಿಗೊಂಡಿದೆ’ ಎಂದು ತಿಳಿಸಿದರು.</p>.<p class="Subhead"><strong>ಗೆಲ್ಲುವ ವಿಶ್ವಾಸ:</strong> ‘ಶಿರಾ ಮತ್ತು ಆರ್.ಆರ್.ನಗರದಲ್ಲಿ ನಾವು ಗೆಲ್ಲುವ ಸಾಧ್ಯತೆ ಇದೆ. ನನಗೆ ದೊರೆತ ಮಾಹಿತಿಯಂತೆ ಮತಗಳು ಕಾಂಗ್ರೆಸ್ ಪರವಾಗಿ ಬಿದ್ದಿವೆ. ಶಿರಾದಲ್ಲಿ ಕಳೆದ ಸಲ ಅಪಪ್ರಚಾರದ ಕಾರಣ ನಮ್ಮ ಅಭ್ಯರ್ಥಿ ಸೋತಿದ್ದರು. ಈ ಸಲ ಜನರು ಕಾಂಗ್ರೆಸ್ಗೆ ಮತ ಹಾಕಿದ್ದಾರೆ’ ಎಂದರು.</p>.<p class="Subhead">ಶಾಲೆಗಳ ಆರಂಭ ಬೇಡ: ‘ಈ ವರ್ಷ ಶಾಲೆಗಳನ್ನು ಆರಂಭಿಸುವುದುಬೇಡ ಎಂಬುದು ನನ್ನ ವೈಯಕ್ತಿಕ ಅಭಿಪ್ರಾಯ. ಆನ್ಲೈನ್ನಲ್ಲೇ ಪಾಠ ಮುಂದುವರಿಸಿ ಎಲ್ಲರನ್ನೂ ಉತ್ತೀರ್ಣಗೊಳಿಸಲಿ. ಕೊರೊನಾದಿಂದ ಸಂಪೂರ್ಣವಾಗಿ ಮುಕ್ತವಾದ ಬಳಿಕವೇ ಶಾಲೆಗಳು ಪ್ರಾರಂಭವಾಗಲಿ’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು</strong>: ಉಪಚುನಾವಣೆ ಫಲಿತಾಂಶದ ಬಳಿಕ ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಮಾಡಲಾಗುತ್ತದೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಬುಧವಾರ ಇಲ್ಲಿ ಹೇಳಿದರು.</p>.<p>‘ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಲು ತಯಾರಿ ನಡೆದಿದೆ. ದೆಹಲಿಯಿಂದ ನನಗೆ ಲಭಿಸಿರುವ ಮಾಹಿತಿಯಂತೆ ಈ ಮಾತು ಹೇಳಿದ್ದೇನೆ. ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಬಿಜೆಪಿಯಲ್ಲಿ ಮೊದಲಿನಿಂದಲೂ ಚರ್ಚೆ ನಡೆಯುತ್ತಾ ಇದೆ. ಆ ಚರ್ಚೆ ಈಗ ಇನ್ನಷ್ಟು ಗಟ್ಟಿಗೊಂಡಿದೆ’ ಎಂದು ತಿಳಿಸಿದರು.</p>.<p class="Subhead"><strong>ಗೆಲ್ಲುವ ವಿಶ್ವಾಸ:</strong> ‘ಶಿರಾ ಮತ್ತು ಆರ್.ಆರ್.ನಗರದಲ್ಲಿ ನಾವು ಗೆಲ್ಲುವ ಸಾಧ್ಯತೆ ಇದೆ. ನನಗೆ ದೊರೆತ ಮಾಹಿತಿಯಂತೆ ಮತಗಳು ಕಾಂಗ್ರೆಸ್ ಪರವಾಗಿ ಬಿದ್ದಿವೆ. ಶಿರಾದಲ್ಲಿ ಕಳೆದ ಸಲ ಅಪಪ್ರಚಾರದ ಕಾರಣ ನಮ್ಮ ಅಭ್ಯರ್ಥಿ ಸೋತಿದ್ದರು. ಈ ಸಲ ಜನರು ಕಾಂಗ್ರೆಸ್ಗೆ ಮತ ಹಾಕಿದ್ದಾರೆ’ ಎಂದರು.</p>.<p class="Subhead">ಶಾಲೆಗಳ ಆರಂಭ ಬೇಡ: ‘ಈ ವರ್ಷ ಶಾಲೆಗಳನ್ನು ಆರಂಭಿಸುವುದುಬೇಡ ಎಂಬುದು ನನ್ನ ವೈಯಕ್ತಿಕ ಅಭಿಪ್ರಾಯ. ಆನ್ಲೈನ್ನಲ್ಲೇ ಪಾಠ ಮುಂದುವರಿಸಿ ಎಲ್ಲರನ್ನೂ ಉತ್ತೀರ್ಣಗೊಳಿಸಲಿ. ಕೊರೊನಾದಿಂದ ಸಂಪೂರ್ಣವಾಗಿ ಮುಕ್ತವಾದ ಬಳಿಕವೇ ಶಾಲೆಗಳು ಪ್ರಾರಂಭವಾಗಲಿ’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>