<p><strong>ಮೈಸೂರು: ‘</strong>ನಾಯಕತ್ವ ಬದಲಾವಣೆ ಬಗ್ಗೆ ರಾಹುಲ್ ಗಾಂಧಿ ತೀರ್ಮಾನಿಸಬೇಕು. ಅವರು ಕೈಗೊಳ್ಳುವ ನಿರ್ಧಾರಕ್ಕೆ ನಾವು ಬದ್ಧ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.</p><p>ಇಲ್ಲಿ ಸೋಮವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ‘ನಾನು ಈ ಬಗ್ಗೆ ಪಕ್ಷದ ವರಿಷ್ಠರೊಂದಿಗೆ ಮಾತನಾಡಿದ್ದೇನೆ. ನಾವು ತೀರ್ಮಾನಿಸುತ್ತೇವೆ ಎಂದು ಹೇಳಿದ್ದಾರೆ. ಅಲ್ಲಿಗೆ ಎಲ್ಲವೂ ಮುಗಿಯಿತು’ ಎಂದರು.</p><p>‘ಪಕ್ಷಕ್ಕಿಂತ ಯಾರೂ ದೊಡ್ಡವರಲ್ಲ ಎಂಬ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆ ಒಪ್ಪಬೇಕಾದ ವಿಚಾರ. ಪಕ್ಷಕ್ಕಿಂತ ಯಾರೂ ದೊಡ್ಡವರಾಗಲು ಸಾಧ್ಯವೇ ಇಲ್ಲ’ ಎಂದ ಅವರು, ‘ಸಮಸ್ಯೆಗಳೇನಿದ್ದರೂ ಅದನ್ನು ಹೈಕಮಾಂಡ್ ಬಗೆಹರಿಸುತ್ತದೆ’ ಎಂದು ಹೇಳಿದರು.</p><p>‘ನಾಯಕತ್ವ ಬದಲಾವಣೆ ಕುರಿತು ಮಾಧ್ಯಮದಲ್ಲೇ ಹೆಚ್ಚಾಚಾಗಿ ಚರ್ಚೆಯಾಗುತ್ತಿದೆ. ಆ ವಿಷಯದಲ್ಲಿ ಇಷ್ಟೊಂದು ಪ್ರಶ್ನಿಸುವ ಅಗತ್ಯವೇನಿದೆ? ವಿಧಾನಸಭೆಯಲ್ಲಿ ಹೇಳಿದ ಮೇಲೂ ಮತ್ತೆ ಚರ್ಚಿಸುವ ಅಗತ್ಯವಿಲ್ಲ’ ಪ್ರತಿಪಾದಿಸಿದರು.</p><p>‘ಸಂಕ್ರಾಂತಿಗೆ ಕ್ರಾಂತಿಯೂ ಇಲ್ಲ, ಏನೂ ಇಲ್ಲ. ಏನೇ ಇದ್ದರೂ ಹೈಕಮಾಂಡ್ ತೀರ್ಮಾನವೇ ಅಂತಿಮ’ ಎಂದು ಪುನರುಚ್ಚರಿಸಿದರು.</p><p>ಮಾಜಿ ಸಚಿವ ಕೆ.ಎನ್. ರಾಜಣ್ಣ ಅವರು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭಾನುವಾರ ಭೇಟಿಯಾದ ಬಗ್ಗೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ, ‘ಪಕ್ಷದ ಅಧ್ಯಕ್ಷರನ್ನು ಯಾರಾದರೂ ಭೇಟಿಯಾದರೆ ತಪ್ಪೇನು? ಭೇಟಿಯಾಗಲಿ’ ಎಂದು ಹೇಳಿದರು.</p><p>‘ರಾಜಣ್ಣ ಅವರನ್ನು ಅಪೆಕ್ಸ್ ಬ್ಯಾಂಕ್ ಅಧ್ಯಕ್ಷರನ್ನಾಗಿ ಮಾಡಿದ್ದು ನಾನೇ’ ಎಂಬ ಶಿವಕುಮಾರ್ ಹೇಳಿಕೆಗೆ, ‘ಅಧಿಕಾರದಲ್ಲಿದ್ದಾಗ ನಾನು ಮಾಡಿದೆ, ಅವರು ಮಾಡಿದರು ಎನ್ನುವುದು ಮುಖ್ಯವಲ್ಲ. ಅದರ ಪ್ರಶ್ನೆಯೇ ಇಲ್ಲ. ಎಸ್.ಎಂ.ಕೃಷ್ಣ ಅವರು ಆಗ ಮುಖ್ಯಮಂತ್ರಿ ಆಗಿದ್ದರು, ಸರ್ಕಾರ ಮಾಡಿತ್ತು’ ಎಂದು ಪ್ರತಿಕ್ರಿಯಿಸಿದರು.</p><p>‘ರಾಜ್ಯ ಬಜೆಟ್ ಸಿದ್ಧತೆ ನಡೆದಿದೆಯೇ’ ಎಂಬ ಪ್ರಶ್ನೆಗೆ, ‘ತಯಾರಿ ನಡೆಸುವಾಗ ತಿಳಿಸುವೆ’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು: ‘</strong>ನಾಯಕತ್ವ ಬದಲಾವಣೆ ಬಗ್ಗೆ ರಾಹುಲ್ ಗಾಂಧಿ ತೀರ್ಮಾನಿಸಬೇಕು. ಅವರು ಕೈಗೊಳ್ಳುವ ನಿರ್ಧಾರಕ್ಕೆ ನಾವು ಬದ್ಧ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.</p><p>ಇಲ್ಲಿ ಸೋಮವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ‘ನಾನು ಈ ಬಗ್ಗೆ ಪಕ್ಷದ ವರಿಷ್ಠರೊಂದಿಗೆ ಮಾತನಾಡಿದ್ದೇನೆ. ನಾವು ತೀರ್ಮಾನಿಸುತ್ತೇವೆ ಎಂದು ಹೇಳಿದ್ದಾರೆ. ಅಲ್ಲಿಗೆ ಎಲ್ಲವೂ ಮುಗಿಯಿತು’ ಎಂದರು.</p><p>‘ಪಕ್ಷಕ್ಕಿಂತ ಯಾರೂ ದೊಡ್ಡವರಲ್ಲ ಎಂಬ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆ ಒಪ್ಪಬೇಕಾದ ವಿಚಾರ. ಪಕ್ಷಕ್ಕಿಂತ ಯಾರೂ ದೊಡ್ಡವರಾಗಲು ಸಾಧ್ಯವೇ ಇಲ್ಲ’ ಎಂದ ಅವರು, ‘ಸಮಸ್ಯೆಗಳೇನಿದ್ದರೂ ಅದನ್ನು ಹೈಕಮಾಂಡ್ ಬಗೆಹರಿಸುತ್ತದೆ’ ಎಂದು ಹೇಳಿದರು.</p><p>‘ನಾಯಕತ್ವ ಬದಲಾವಣೆ ಕುರಿತು ಮಾಧ್ಯಮದಲ್ಲೇ ಹೆಚ್ಚಾಚಾಗಿ ಚರ್ಚೆಯಾಗುತ್ತಿದೆ. ಆ ವಿಷಯದಲ್ಲಿ ಇಷ್ಟೊಂದು ಪ್ರಶ್ನಿಸುವ ಅಗತ್ಯವೇನಿದೆ? ವಿಧಾನಸಭೆಯಲ್ಲಿ ಹೇಳಿದ ಮೇಲೂ ಮತ್ತೆ ಚರ್ಚಿಸುವ ಅಗತ್ಯವಿಲ್ಲ’ ಪ್ರತಿಪಾದಿಸಿದರು.</p><p>‘ಸಂಕ್ರಾಂತಿಗೆ ಕ್ರಾಂತಿಯೂ ಇಲ್ಲ, ಏನೂ ಇಲ್ಲ. ಏನೇ ಇದ್ದರೂ ಹೈಕಮಾಂಡ್ ತೀರ್ಮಾನವೇ ಅಂತಿಮ’ ಎಂದು ಪುನರುಚ್ಚರಿಸಿದರು.</p><p>ಮಾಜಿ ಸಚಿವ ಕೆ.ಎನ್. ರಾಜಣ್ಣ ಅವರು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭಾನುವಾರ ಭೇಟಿಯಾದ ಬಗ್ಗೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ, ‘ಪಕ್ಷದ ಅಧ್ಯಕ್ಷರನ್ನು ಯಾರಾದರೂ ಭೇಟಿಯಾದರೆ ತಪ್ಪೇನು? ಭೇಟಿಯಾಗಲಿ’ ಎಂದು ಹೇಳಿದರು.</p><p>‘ರಾಜಣ್ಣ ಅವರನ್ನು ಅಪೆಕ್ಸ್ ಬ್ಯಾಂಕ್ ಅಧ್ಯಕ್ಷರನ್ನಾಗಿ ಮಾಡಿದ್ದು ನಾನೇ’ ಎಂಬ ಶಿವಕುಮಾರ್ ಹೇಳಿಕೆಗೆ, ‘ಅಧಿಕಾರದಲ್ಲಿದ್ದಾಗ ನಾನು ಮಾಡಿದೆ, ಅವರು ಮಾಡಿದರು ಎನ್ನುವುದು ಮುಖ್ಯವಲ್ಲ. ಅದರ ಪ್ರಶ್ನೆಯೇ ಇಲ್ಲ. ಎಸ್.ಎಂ.ಕೃಷ್ಣ ಅವರು ಆಗ ಮುಖ್ಯಮಂತ್ರಿ ಆಗಿದ್ದರು, ಸರ್ಕಾರ ಮಾಡಿತ್ತು’ ಎಂದು ಪ್ರತಿಕ್ರಿಯಿಸಿದರು.</p><p>‘ರಾಜ್ಯ ಬಜೆಟ್ ಸಿದ್ಧತೆ ನಡೆದಿದೆಯೇ’ ಎಂಬ ಪ್ರಶ್ನೆಗೆ, ‘ತಯಾರಿ ನಡೆಸುವಾಗ ತಿಳಿಸುವೆ’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>