<p><strong>ಬೆಂಗಳೂರು:</strong> ‘ಗುತ್ತಿಗೆ ನೌಕರರ ಜೊತೆಗಿನ ಒಪ್ಪಂದವನ್ನು ಅಂತಿಮಗೊಳಿಸುವ ಮುನ್ನ ಸ್ವಾಭಾವಿಕ ನ್ಯಾಯ ಪರಿಕಲ್ಪನೆಯ ತತ್ವಕ್ಕೆ ಅನುಗುಣವಾಗಿ ಅವರ ಅಹವಾಲುಗಳನ್ನು ಆಲಿಸಬೇಕು’ ಎಂದು ಹೈಕೋರ್ಟ್ ಆದೇಶಿಸಿದೆ.</p>.<p>ಈ ಸಂಬಂಧ ಎಚ್ಎಎಲ್ ಸಲ್ಲಿಸಿದ್ದ ಮೇಲ್ಮನವಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಅನು ಶಿವರಾಮನ್ ಮತ್ತು ನ್ಯಾಯಮೂರ್ತಿ ಜಿ.ಬಸವರಾಜ ಅವರಿದ್ದ ವಿಭಾಗೀಯ ನ್ಯಾಯಪೀಠ, ‘ಏಕಸದಸ್ಯ ನ್ಯಾಯಪೀಠದ ಆದೇಶ ಸೂಕ್ತವಾಗಿಯೇ ಇದೆ’ ಎಂಬ ಅಭಿಪ್ರಾಯ ವ್ಯಕ್ತಪಡಿಸಿದೆ.</p>.<p>ಅಂತೆಯೇ, ‘ಕಾನೂನಿನ ಪ್ರಕಾರ ಸಮಗ್ರ ಒಪ್ಪಂದವನ್ನು ಪರಿಷ್ಕರಿಸಿ ಅದರ ಪ್ರತಿಯನ್ನು ಎಚ್ಎಎಲ್ ಗುತ್ತಿಗೆ ನೌಕರರ ಸಂಘಕ್ಕೆ ನೀಡಬೇಕು’ ಎಂದು ಮೇಲ್ಮನವಿದಾರ ಕರ್ನಾಟಕ ಹಿಂದೂಸ್ಥಾನ್ ಏರೋನಾಟಿಕ್ಸ್ ಲಿಮಿಟೆಡ್ (ಎಚ್ಎಎಲ್) ಕಂಪನಿಗೆ ಆದೇಶಿಸಿದೆ.</p>.<p>‘ಎಚ್ಎಎಲ್, ಗುತ್ತಿಗೆಗೆ ಸಂಬಂಧಿಸಿದ ಒಪ್ಪಂದದ ಪ್ರಾಥಮಿಕ ಅಧಿಸೂಚನೆ ಹೊರಡಿಸಬೇಕು. ಅದರಿಂದ ಬಾಧಿತರಾಗುವವರು ಆಕ್ಷೇಪಣೆ ಸಲ್ಲಿಸಲು ಕಾಲಾವಕಾಶ ನೀಡಬೇಕು. ಆಕ್ಷೇಪಣೆ ಪರಿಗಣಿಸಿದ ನಂತರ ಅಂತಿಮ ಅಧಿಸೂಚನೆಗೆ ನಿರ್ಧಾರ ಕೈಗೊಳ್ಳಬೇಕು‘ ಎಂದು ನ್ಯಾಯಪೀಠ ಆದೇಶದಲ್ಲಿ ವಿವರಿಸಿದೆ.</p>.<p>ಪ್ರಕರಣವೇನು?: ಹಿಂದೂಸ್ಥಾನ್ ಏರೋನಾಟಿಕ್ಸ್; ಯುದ್ಧ ವಿಮಾನ, ಹೆಲಿಕಾಪ್ಟರ್, ರಕ್ಷಣಾ ಸಾಧನಗಳೂ ಸೇರಿದಂತೆ ವೈಮಾನಿಕ ವಲಯಕ್ಕೆ ಅಗತ್ಯವಾದ ಸಾಧನಗಳ ಉತ್ಪಾದನಾ ಕಾರ್ಯದಲ್ಲಿ ತೊಡಗಿಸಿಕೊಂಡಿರುವ ಕೇಂದ್ರ ಸರ್ಕಾರದ ಒಡೆತನದಲ್ಲಿರುವ ಬೃಹತ್ ಉದ್ದಿಮೆ. ಹೆಚ್ಚಿನ ಬೇಡಿಕೆಗಳಿದ್ದಾಗ ಪ್ರಮುಖವಲ್ಲದ ಕೆಲಸಗಳನ್ನು ನಿರ್ವಹಿಸಲು ಗುತ್ತಿಗೆ ಆಧಾರದಡಿ ಕಾರ್ಮಿಕರನ್ನು ನಿಯೋಜಿಸಿಕೊಳ್ಳುತ್ತದೆ.</p>.<p>ಈ ರೀತಿ ನಿಯೋಜನೆಗೊಂಡ ಕಾರ್ಮಿಕರು, ‘ಗುತ್ತಿಗೆ ಒಪ್ಪಂದವನ್ನು ಆಖೈರುಗೊಳಿಸುವ ಮುನ್ನ ನಮ್ಮೊಂದಿಗೆ ಚರ್ಚಿಸಿ ನಮ್ಮ ಅಹವಾಲು ಕೇಳಿಲ್ಲ’ ಎಂದು ಕಂಪನಿಯ ನಡೆಯನ್ನು ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ್ದ ಏಕಸದಸ್ಯ ನ್ಯಾಯಪೀಠ ಗುತ್ತಿಗೆ ಕಾರ್ಮಿಕರ ಪರ ತೀರ್ಪು ನೀಡಿತ್ತು. ಇದನ್ನು ಪ್ರಶ್ನಿಸಿ ಕಂಪನಿ ಮೇಲ್ಮನವಿ ಸಲ್ಲಿಸಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ‘ಗುತ್ತಿಗೆ ನೌಕರರ ಜೊತೆಗಿನ ಒಪ್ಪಂದವನ್ನು ಅಂತಿಮಗೊಳಿಸುವ ಮುನ್ನ ಸ್ವಾಭಾವಿಕ ನ್ಯಾಯ ಪರಿಕಲ್ಪನೆಯ ತತ್ವಕ್ಕೆ ಅನುಗುಣವಾಗಿ ಅವರ ಅಹವಾಲುಗಳನ್ನು ಆಲಿಸಬೇಕು’ ಎಂದು ಹೈಕೋರ್ಟ್ ಆದೇಶಿಸಿದೆ.</p>.<p>ಈ ಸಂಬಂಧ ಎಚ್ಎಎಲ್ ಸಲ್ಲಿಸಿದ್ದ ಮೇಲ್ಮನವಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಅನು ಶಿವರಾಮನ್ ಮತ್ತು ನ್ಯಾಯಮೂರ್ತಿ ಜಿ.ಬಸವರಾಜ ಅವರಿದ್ದ ವಿಭಾಗೀಯ ನ್ಯಾಯಪೀಠ, ‘ಏಕಸದಸ್ಯ ನ್ಯಾಯಪೀಠದ ಆದೇಶ ಸೂಕ್ತವಾಗಿಯೇ ಇದೆ’ ಎಂಬ ಅಭಿಪ್ರಾಯ ವ್ಯಕ್ತಪಡಿಸಿದೆ.</p>.<p>ಅಂತೆಯೇ, ‘ಕಾನೂನಿನ ಪ್ರಕಾರ ಸಮಗ್ರ ಒಪ್ಪಂದವನ್ನು ಪರಿಷ್ಕರಿಸಿ ಅದರ ಪ್ರತಿಯನ್ನು ಎಚ್ಎಎಲ್ ಗುತ್ತಿಗೆ ನೌಕರರ ಸಂಘಕ್ಕೆ ನೀಡಬೇಕು’ ಎಂದು ಮೇಲ್ಮನವಿದಾರ ಕರ್ನಾಟಕ ಹಿಂದೂಸ್ಥಾನ್ ಏರೋನಾಟಿಕ್ಸ್ ಲಿಮಿಟೆಡ್ (ಎಚ್ಎಎಲ್) ಕಂಪನಿಗೆ ಆದೇಶಿಸಿದೆ.</p>.<p>‘ಎಚ್ಎಎಲ್, ಗುತ್ತಿಗೆಗೆ ಸಂಬಂಧಿಸಿದ ಒಪ್ಪಂದದ ಪ್ರಾಥಮಿಕ ಅಧಿಸೂಚನೆ ಹೊರಡಿಸಬೇಕು. ಅದರಿಂದ ಬಾಧಿತರಾಗುವವರು ಆಕ್ಷೇಪಣೆ ಸಲ್ಲಿಸಲು ಕಾಲಾವಕಾಶ ನೀಡಬೇಕು. ಆಕ್ಷೇಪಣೆ ಪರಿಗಣಿಸಿದ ನಂತರ ಅಂತಿಮ ಅಧಿಸೂಚನೆಗೆ ನಿರ್ಧಾರ ಕೈಗೊಳ್ಳಬೇಕು‘ ಎಂದು ನ್ಯಾಯಪೀಠ ಆದೇಶದಲ್ಲಿ ವಿವರಿಸಿದೆ.</p>.<p>ಪ್ರಕರಣವೇನು?: ಹಿಂದೂಸ್ಥಾನ್ ಏರೋನಾಟಿಕ್ಸ್; ಯುದ್ಧ ವಿಮಾನ, ಹೆಲಿಕಾಪ್ಟರ್, ರಕ್ಷಣಾ ಸಾಧನಗಳೂ ಸೇರಿದಂತೆ ವೈಮಾನಿಕ ವಲಯಕ್ಕೆ ಅಗತ್ಯವಾದ ಸಾಧನಗಳ ಉತ್ಪಾದನಾ ಕಾರ್ಯದಲ್ಲಿ ತೊಡಗಿಸಿಕೊಂಡಿರುವ ಕೇಂದ್ರ ಸರ್ಕಾರದ ಒಡೆತನದಲ್ಲಿರುವ ಬೃಹತ್ ಉದ್ದಿಮೆ. ಹೆಚ್ಚಿನ ಬೇಡಿಕೆಗಳಿದ್ದಾಗ ಪ್ರಮುಖವಲ್ಲದ ಕೆಲಸಗಳನ್ನು ನಿರ್ವಹಿಸಲು ಗುತ್ತಿಗೆ ಆಧಾರದಡಿ ಕಾರ್ಮಿಕರನ್ನು ನಿಯೋಜಿಸಿಕೊಳ್ಳುತ್ತದೆ.</p>.<p>ಈ ರೀತಿ ನಿಯೋಜನೆಗೊಂಡ ಕಾರ್ಮಿಕರು, ‘ಗುತ್ತಿಗೆ ಒಪ್ಪಂದವನ್ನು ಆಖೈರುಗೊಳಿಸುವ ಮುನ್ನ ನಮ್ಮೊಂದಿಗೆ ಚರ್ಚಿಸಿ ನಮ್ಮ ಅಹವಾಲು ಕೇಳಿಲ್ಲ’ ಎಂದು ಕಂಪನಿಯ ನಡೆಯನ್ನು ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ್ದ ಏಕಸದಸ್ಯ ನ್ಯಾಯಪೀಠ ಗುತ್ತಿಗೆ ಕಾರ್ಮಿಕರ ಪರ ತೀರ್ಪು ನೀಡಿತ್ತು. ಇದನ್ನು ಪ್ರಶ್ನಿಸಿ ಕಂಪನಿ ಮೇಲ್ಮನವಿ ಸಲ್ಲಿಸಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>