ರಾಮಮಂದಿರ ಹೋರಾಟದ ಸಂದರ್ಭದಲ್ಲಿ ಹುಬ್ಬಳ್ಳಿ ಪ್ರಮುಖ ಕೇಂದ್ರವಾಗಿತ್ತು. ಹೀಗಾಗಿ ಅಲ್ಲಿ ಅನೇಕರ ಮೇಲೆ ಪ್ರಕರಣಗಳಿದ್ದವು. ಅವರನ್ನು ಈ ಸಂದರ್ಭದಲ್ಲಿ ಬಂಧಿಸುವ ಅಗತ್ಯವೇನಿತ್ತು? ಅಪರಾಧಿಗಳನ್ನು ಹಿಡಿಯಬಾರದಾ ಎಂದು ಮುಖ್ಯಮಂತ್ರಿ ಪ್ರಶ್ನಿಸಿದ್ದಾರೆ. ಅಪರಾಧಿಗಳನ್ನು ಹಿಡಿಯಬೇಕೆಂದರೆ ಬೆಂಗಳೂರು, ಮೈಸೂರು, ಹುಬ್ಬಳ್ಳಿ, ಧಾರವಾಡಗಳಲ್ಲಿ ಅಕ್ರಮ ದಂಧೆಯಲ್ಲಿ ತೊಡಗಿರುವ, ಸಾರಾಯಿ ಮಾರಾಟ ಮಾಡುತ್ತಿರುವ ಪ್ರಕರಣಗಳು ಇವರ ಕಣ್ಣಿಗೆ ಕಾಣಿಸುತ್ತಿಲ್ಲವೆ ಎಂದು ಪ್ರಶ್ನಿಸಿದರು.