<p><strong>ಬೆಂಗಳೂರು:</strong> ಬೆಳಗಾವಿಯಲ್ಲಿ ಡಿಸೆಂಬರ್ 4ರಿಂದ ಆರಂಭವಾಗುವ ವಿಧಾನಮಂಡಲ ಅಧಿವೇಶನದಲ್ಲಿ ಗದ್ದಲ, ಪ್ರತಿಭಟನೆಗಳನ್ನು ನಿಯಂತ್ರಿಸಿ ಉತ್ತರ ಕರ್ನಾಟಕದ ಜ್ವಲಂತ ಸಮಸ್ಯೆಗಳ ಕುರಿತ ಚರ್ಚೆಗೆ ಅವಕಾಶ ಕಲ್ಪಿಸಬೇಕು ಎಂದು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ರಾಜ್ಯ ಸರ್ಕಾರವನ್ನು ಆಗ್ರಹಿಸಿದರು.</p>.<p>ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಪ್ರತಿಭಟನೆಯನ್ನು ತಡೆಯಲು ಬಾಕಿ ಇರುವ ಬೇಡಿಕೆಗಳನ್ನು ಈಡೇರಿಸಲು ಪ್ರಯತ್ನಿಸುವಂತೆ ಉನ್ನತ ಶಿಕ್ಷಣ, ಶಾಲಾ ಶಿಕ್ಷಣ ಮತ್ತು ಸಾಕ್ಷರತೆ, ಕಂದಾಯ ಹಾಗೂ ಕೃಷಿ ಸಚಿವರು ಮತ್ತು ಮುಖ್ಯಮಂತ್ರಿಯವರಿಗೆ ಪತ್ರ ಬರೆದು ಒತ್ತಾಯಿಸಿದ್ದೇನೆ’ ಎಂದರು.</p>.<p>ಸರ್ಕಾರವು ಪ್ರತಿಭಟನಾಕಾರರಿಗೆ ಉತ್ತೇಜನ ನೀಡುವಂತೆ ವರ್ತಿಸಬಾರದು ಎಂದು ಕೋರಲಾಗಿದೆ. ಪ್ರತಿಭಟನೆ, ಧರಣಿ ನಡೆಯುತ್ತಿದ್ದರೆ ಸಚಿವರು ಮತ್ತು ಶಾಸಕರು ಸಕ್ರಿಯವಾಗಿ ಕಲಾಪದಲ್ಲಿ ಭಾಗವಹಿಸಲು ಸಾಧ್ಯವಾಗುವುದಿಲ್ಲ ಎಂದು ತಿಳಿಸಿದರು.</p>.<p>2022 ರ ಡಿಸೆಂಬರ್ ತಿಂಗಳಲ್ಲಿ ಬೆಳಗಾವಿಯಲ್ಲಿ 10 ದಿನಗಳ ಕಾಲ ವಿಧಾನಮಂಡಲದ ಅಧಿವೇಶನ ನಡೆದಿತ್ತು. ತಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ 102 ಸಂಘಟನೆಗಳು ಮನವಿ ಸಲ್ಲಿಸಿದ್ದವು. ಆ ಪೈಕಿ 64 ಸಂಘಟನೆಗಳು ಪ್ರತಿಭಟನೆಗಳನ್ನು ನಡೆಸಿದ್ದವು. 65,000 ದಿಂದ 80,000 ದಷ್ಟು ಜನರು ಪ್ರತಿಭಟನೆಗಳನ್ನು ಭಾಗಿಯಾಗಿದ್ದರು ಎಂದು ವಿವರ ನೀಡಿದರು.</p>.<p>ಈ ಅಧಿವೇಶನದಲ್ಲಿ ಐದರಿಂದ ಆರು ದಿನಗಳನ್ನು ಉತ್ತರ ಕರ್ನಾಟಕದ ಸಮಸ್ಯೆಗಳ ಕುರಿತು ಚರ್ಚೆಗೆ ಮೀಸಲಿಡಲಾಗುವುದು. ಮಂಡನೆಗೂ ಮೊದಲು ಮಸೂದೆಗಳ ಪ್ರತಿಗಳನ್ನು ಒದಗಿಸುವುದು ಕಡ್ಡಾಯ. ತರಾತುರಿಯಲ್ಲಿ ಮಸೂದೆ ಮಂಡನೆಗೆ ಅವಕಾಶ ನೀಡುವುದಿಲ್ಲ ಎಂದರು.</p>.<p>ಬೆಳಗಾವಿಯಲ್ಲಿ ಶಾಸಕರ ಭವನ ನಿರ್ಮಾಣಕ್ಕೆ ಗುರುತಿಸಿರುವ 20 ಎಕರೆ ಜಮೀನಿನಲ್ಲಿ ತಾರಾ ಹೋಟೆಲ್ ನಿರ್ಮಾಣದ ಪ್ರಸ್ತಾವಕ್ಕೆ ಸರ್ಕಾರ ಒಪ್ಪಿಗೆ ನೀಡಬೇಕು. ಇದರಿಂದ ಆರ್ಥಿಕ ಹೊರೆ ತಗ್ಗುತ್ತದೆ ಎಂದು ಹೊರಟ್ಟಿ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಬೆಳಗಾವಿಯಲ್ಲಿ ಡಿಸೆಂಬರ್ 4ರಿಂದ ಆರಂಭವಾಗುವ ವಿಧಾನಮಂಡಲ ಅಧಿವೇಶನದಲ್ಲಿ ಗದ್ದಲ, ಪ್ರತಿಭಟನೆಗಳನ್ನು ನಿಯಂತ್ರಿಸಿ ಉತ್ತರ ಕರ್ನಾಟಕದ ಜ್ವಲಂತ ಸಮಸ್ಯೆಗಳ ಕುರಿತ ಚರ್ಚೆಗೆ ಅವಕಾಶ ಕಲ್ಪಿಸಬೇಕು ಎಂದು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ರಾಜ್ಯ ಸರ್ಕಾರವನ್ನು ಆಗ್ರಹಿಸಿದರು.</p>.<p>ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಪ್ರತಿಭಟನೆಯನ್ನು ತಡೆಯಲು ಬಾಕಿ ಇರುವ ಬೇಡಿಕೆಗಳನ್ನು ಈಡೇರಿಸಲು ಪ್ರಯತ್ನಿಸುವಂತೆ ಉನ್ನತ ಶಿಕ್ಷಣ, ಶಾಲಾ ಶಿಕ್ಷಣ ಮತ್ತು ಸಾಕ್ಷರತೆ, ಕಂದಾಯ ಹಾಗೂ ಕೃಷಿ ಸಚಿವರು ಮತ್ತು ಮುಖ್ಯಮಂತ್ರಿಯವರಿಗೆ ಪತ್ರ ಬರೆದು ಒತ್ತಾಯಿಸಿದ್ದೇನೆ’ ಎಂದರು.</p>.<p>ಸರ್ಕಾರವು ಪ್ರತಿಭಟನಾಕಾರರಿಗೆ ಉತ್ತೇಜನ ನೀಡುವಂತೆ ವರ್ತಿಸಬಾರದು ಎಂದು ಕೋರಲಾಗಿದೆ. ಪ್ರತಿಭಟನೆ, ಧರಣಿ ನಡೆಯುತ್ತಿದ್ದರೆ ಸಚಿವರು ಮತ್ತು ಶಾಸಕರು ಸಕ್ರಿಯವಾಗಿ ಕಲಾಪದಲ್ಲಿ ಭಾಗವಹಿಸಲು ಸಾಧ್ಯವಾಗುವುದಿಲ್ಲ ಎಂದು ತಿಳಿಸಿದರು.</p>.<p>2022 ರ ಡಿಸೆಂಬರ್ ತಿಂಗಳಲ್ಲಿ ಬೆಳಗಾವಿಯಲ್ಲಿ 10 ದಿನಗಳ ಕಾಲ ವಿಧಾನಮಂಡಲದ ಅಧಿವೇಶನ ನಡೆದಿತ್ತು. ತಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ 102 ಸಂಘಟನೆಗಳು ಮನವಿ ಸಲ್ಲಿಸಿದ್ದವು. ಆ ಪೈಕಿ 64 ಸಂಘಟನೆಗಳು ಪ್ರತಿಭಟನೆಗಳನ್ನು ನಡೆಸಿದ್ದವು. 65,000 ದಿಂದ 80,000 ದಷ್ಟು ಜನರು ಪ್ರತಿಭಟನೆಗಳನ್ನು ಭಾಗಿಯಾಗಿದ್ದರು ಎಂದು ವಿವರ ನೀಡಿದರು.</p>.<p>ಈ ಅಧಿವೇಶನದಲ್ಲಿ ಐದರಿಂದ ಆರು ದಿನಗಳನ್ನು ಉತ್ತರ ಕರ್ನಾಟಕದ ಸಮಸ್ಯೆಗಳ ಕುರಿತು ಚರ್ಚೆಗೆ ಮೀಸಲಿಡಲಾಗುವುದು. ಮಂಡನೆಗೂ ಮೊದಲು ಮಸೂದೆಗಳ ಪ್ರತಿಗಳನ್ನು ಒದಗಿಸುವುದು ಕಡ್ಡಾಯ. ತರಾತುರಿಯಲ್ಲಿ ಮಸೂದೆ ಮಂಡನೆಗೆ ಅವಕಾಶ ನೀಡುವುದಿಲ್ಲ ಎಂದರು.</p>.<p>ಬೆಳಗಾವಿಯಲ್ಲಿ ಶಾಸಕರ ಭವನ ನಿರ್ಮಾಣಕ್ಕೆ ಗುರುತಿಸಿರುವ 20 ಎಕರೆ ಜಮೀನಿನಲ್ಲಿ ತಾರಾ ಹೋಟೆಲ್ ನಿರ್ಮಾಣದ ಪ್ರಸ್ತಾವಕ್ಕೆ ಸರ್ಕಾರ ಒಪ್ಪಿಗೆ ನೀಡಬೇಕು. ಇದರಿಂದ ಆರ್ಥಿಕ ಹೊರೆ ತಗ್ಗುತ್ತದೆ ಎಂದು ಹೊರಟ್ಟಿ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>