ರಾಜೀನಾಮೆ ಇಂಗಿತ: ಈ ಮಧ್ಯೆ, ಪ್ರತಾಪಚಂದ್ರ ಶೆಟ್ಟಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವ ಇಂಗಿತ ವ್ಯಕ್ತಪಡಿಸಿದ್ದರೂ, ಸದ್ಯಕ್ಕೆ ರಾಜೀನಾಮೆ ನೀಡದಂತೆ ಕಾಂಗ್ರೆಸ್ನ ಹಿರಿಯ ನಾಯಕ ಸಿದ್ದರಾಮಯ್ಯ ಸಲಹೆ ನೀಡಿದ್ದಾರೆ. ಬಿಜೆಪಿ ಕಾನೂನು ಹೋರಾಟಕ್ಕೆ ಮುಂದಾದರೆ, ಅದೇ ಹಾದಿ ತುಳಿಯಲು ಕಾಂಗ್ರೆಸ್ ಸಿದ್ಧತೆ ನಡೆಸಿದೆ.