ಕಾರ್ಯಕ್ರಮದ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಎಚ್.ವಿಶ್ವನಾಥ್, ಮೇಲ್ಮನೆಗೆ ನಾಮ ನಿರ್ದೇಶನಕ್ಕೆ ಅವಕಾಶ ನೀಡಿದ ಪ್ರಧಾನಿ ಮೋದಿ, ಅಮಿತ್ ಶಾ, ಜೆ.ಪಿ.ನಡ್ಡಾ, ಮುಖ್ಯಮಂತ್ರಿ ಯಡಿಯೂರಪ್ಪ, ನಳಿನ್ ಕಟೀಲ್ ಮತ್ತು ಇತರರಿಗೆ ಧನ್ಯವಾದಗಳು. ಸರ್ಕಾರ ಕೊರೊನಾ ವಿರುದ್ಧ ಹೋರಾಡುತ್ತಿದೆ. ಆ ಕಾರ್ಯದಲ್ಲಿ ನಾವೂ ಕೈಜೋಡಿಸುತ್ತೇವೆ ಎಂದು ಹೇಳಿದರು.