<p><strong>ಬೆಂಗಳೂರು:</strong> ಸರ್ಕಾರಿ ಶಾಲೆಗಳ ಅಭಿವೃದ್ಧಿ ಮಾಡುವ ಹೊಣೆ ಸರ್ಕಾರದ್ದು ಮಾತ್ರವೇ? ಈ ಪ್ರಶ್ನೆ ಮುಂದಿಟ್ಟು ವಿಧಾನಪರಿಷತ್ತಿನಲ್ಲಿ ಬುಧವಾರ ಸ್ವಾರಸ್ಯಕರ ಚರ್ಚೆ ನಡೆಯಿತು.</p>.<p>ಬಜೆಟ್ ಮೇಲಿನ ಚರ್ಚೆ ಆರಂಭಿಸಿದ ಜೆಡಿಎಸ್ ಸದಸ್ಯ ಎಸ್.ಎಲ್ ಬೋಜೇಗೌಡ, ‘ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಜೆಟ್ ಮಂಡನೆ ವೇಳೆ ಶಿಕ್ಷಣಕ್ಕಾಗಿ ಭರಪೂರ ಕಾರ್ಯಕ್ರಮಗಳನ್ನು ಘೋಷಿಸಿದ್ದಾರೆ. ಅದು ಸ್ವಾಗತಾರ್ಹವೇ. ಆದರೆ, ಅವು ಅನುಷ್ಠಾನಕ್ಕೆ ಬರುವುದಿಲ್ಲ. ಏಕೆಂದರೆ ಅಗತ್ಯ ಅನುದಾನವನ್ನೇ ತೆಗೆದಿರಿಸಿಲ್ಲ’ ಎಂದರು.</p>.<p>‘ಸರ್ಕಾರಿ ಶಾಲಾ–ಕಾಲೇಜು ವಿಶ್ವವಿದ್ಯಾಲಯಗಳಿಗೆ ಸರಿಯಾದ ಕಟ್ಟಡಗಳಿಲ್ಲ. ಬಹುತೇಕ ಕಡೆ ಶೇ50ಕ್ಕೂ ಹೆಚ್ಚಿನ ಬೋಧಕ ಸಿಬ್ಬಂದಿಯ ಕೊರತೆ ಇದೆ. ಸರ್ಕಾರ ರಸ್ತೆ ಕಾಮಗಾರಿಗಳನ್ನು ಐದು ವರ್ಷ ನಿಲ್ಲಿಸಲಿ. ಆದರೆ ಶಾಲೆಗಳನ್ನು ಅಭಿವೃದ್ಧಿಪಡಿಸಲಿ’ ಎಂದರು.</p>.<p>ಅವರ ಮಾತನ್ನು ತಡೆದ ಉಪಸಭಾಧ್ಯಕ್ಷ ಎಂ.ಕೆ.ಪ್ರಾಣೇಶ್, ‘ಬೋಜೇಗೌಡರೇ, ನಿಮ್ಮ ಅನುದಾನವನ್ನು ಬಳಸಿಕೊಂಡು ನಿಮ್ಮ ಕ್ಷೇತ್ರದ ಯಾವುದಾದರೂ ಸರ್ಕಾರಿ ಶಾಲೆಯನ್ನು ಹೈಟೆಕ್ ಮಾಡಬಹುದಲ್ಲವೇ. ಎಲ್ಲವನ್ನೂ ಸರ್ಕಾರದ ಮೇಲೆಯೇ ಹೊರಿಸಿದರೆ, ಚುನಾಯಿತ ಜನಪ್ರತಿನಿಧಿಗಳ ಜವಾಬ್ದಾರಿಯೇನು’ ಎಂದರು.</p>.<p>ವಿರೋಧ ಪಕ್ಷಗಳ ಸಾಲಿನಲ್ಲಿ ಹಲವು ಸದಸ್ಯರು ಎದ್ದು, ‘ತಮ್ಮ ತಮ್ಮ ಸ್ವಂತ ಖಾಸಗಿ ಶಾಲೆಗಳನ್ನು ಹೊಂದಿರುವವರು, ಸರ್ಕಾರಿ ಶಾಲೆಗಳನ್ನು ಏಕೆ ಅಭಿವೃದ್ಧಿಪಡಿಸುತ್ತಾರೆ’ ಎಂದರು.</p>.<p>ಬೋಜೇಗೌಡ, ‘ಇದೆಲ್ಲವನ್ನೂ ಸರ್ಕಾರವೇ ಮಾಡಲು ಅವಕಾಶವಿರುವ ಕಾರಣಕ್ಕೆ ವಿಷಯ ಪ್ರಸ್ತಾಪಿಸುತ್ತಿದ್ದೇನೆ’ ಎಂದರು.</p>.<p>ಉಪಸಭಾಧ್ಯಕ್ಷರು, ‘ಎನ್.ರವಿಕುಮಾರ್ ಅವರು, ನಾನು ನಮ್ಮ ಕ್ಷೇತ್ರಗಳಲ್ಲಿ ಸರ್ಕಾರಿ ಶಾಲೆ ಅಭಿವೃದ್ಧಿಪಡಿಸಿದ್ದೇವೆ. ಅಂತಹ ಒಂದು ನೈತಿಕತೆಯನ್ನು ಚುನಾಯಿತ ಪ್ರತಿನಿಧಿಗಳೂ ಉಳಿಸಿಕೊಳ್ಳಬೇಕು’ ಎಂದರು.</p>.<h2>ವಿದ್ಯಾರ್ಥಿಗಳಿಗೆ ತಲಾ ₹57 ಸಾವಿರ ಖರ್ಚು!’</h2><p>ಬೆಂಗಳೂರು: ರಾಜ್ಯದಲ್ಲಿ ಶಿಕ್ಷಣ ಇಲಾಖೆ ಸರ್ಕಾರಿ ಶಾಲಾ ವಿದ್ಯಾರ್ಥಿಯ ಮೇಲೆ ವರ್ಷಕ್ಕೆ ₹57 ಸಾವಿರ ಖರ್ಚು ಮಾಡಿದರೆ, ಕೇಂದ್ರ ಸರ್ಕಾರದ ಕೇಂದ್ರೀಯ ವಿದ್ಯಾಲಯ ಪ್ರತಿ ವಿದ್ಯಾರ್ಥಿ ಮೇಲೆ ₹25 ಸಾವಿರ ಖರ್ಚು ಮಾಡುತ್ತದೆ. ಆದರೆ, ಶಿಕ್ಷಣದ ಗುಣಮಟ್ಟದಲ್ಲಿ ಅಜಗಜಾಂತರವಿದೆ ಎಂದು ಬಿಜೆಪಿಯ ಧೀರಜ್ ಮುನಿರಾಜು ವಿಧಾನಸಭೆಯಲ್ಲಿ ಹೇಳಿದರು.</p> <p>ಬಜೆಟ್ ಮೇಲಿನ ಚರ್ಚೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಪ್ರೌಢಶಾಲೆ ಮತ್ತು ಪಿಯುಸಿ ಸೇರಿ ಶಾಲಾ ಶಿಕ್ಷಣಕ್ಕೆ ₹33,000 ಕೋಟಿ ನಿಗದಿ ಮಾಡಲಾಗಿದೆ. ಶಿಕ್ಷಕರ ಮತ್ತು ಸಿಬ್ಬಂದಿ ವೇತನ, ವಿದ್ಯಾರ್ಥಿಗಳಿಗೆ ಸಂಬಂಧಿಸಿದ ವಿವಿಧ ಯೋಜನೆಗಳ ವೆಚ್ಚ ಮತ್ತು ಇತರ ಖರ್ಚು ಇದರಲ್ಲಿ ಒಳಗೊಂಡಿದೆ. ಇದನ್ನು ಭಾಗಿಸಿದಾಗ ಪ್ರತಿ ವಿದ್ಯಾರ್ಥಿ ಮೇಲೆ ₹57 ಸಾವಿರ ಖರ್ಚು ಮಾಡಿದಂತಾ ಗುತ್ತಿದೆ ಎಂದರು. ಇಷ್ಟೆಲ್ಲಾ ಖರ್ಚು ಮಾಡಿದರೂ, ಸರ್ಕಾರಿ ಶಾಲೆಗಳಲ್ಲಿ ವರ್ಷದಿಂದ ವರ್ಷಕ್ಕೆ ತೇರ್ಗಡೆ ಹೊಂದುವವರ ಸಂಖ್ಯೆ ಕಡಿಮೆ ಆಗುತ್ತಿದ್ದು, ಈಗ ಶೇ 58ಕ್ಕೂ ಕಡಿಮೆ ಇದೆ. ವಿದ್ಯಾರ್ಥಿಗಳ ಗುಣಮಟ್ಟವೂ ಅಷ್ಟಕಷ್ಟೆ ಎಂದರು.</p> <p>ಪಾಠ ಮಾಡಬೇಕಾದ ಶಿಕ್ಷಕರನ್ನು ಮೊಟ್ಟೆ ಖರೀದಿಸಲು, ಬಿಸಿಯೂಟ ತಯಾರಿಸಲು, ಶೌಚಾಲಯ ತೊಳೆಯುವ ಕೆಲಸಗಳಿಗೆ ಬಳಸಿಕೊಳ್ಳಲಾಗುತ್ತಿದೆ. ಶಾಲೆಗಳಲ್ಲಿ ಶೌಚಾಲಯ ತೊಳೆಯಲು ಪ್ರತ್ಯೇಕ ಸಿಬ್ಬಂದಿ ನೇಮಿಸಿಲ್ಲ. ಹೀಗಾಗಿ ಶಾಲಾ ಶಿಕ್ಷಣದ ಗುಣಮಟ್ಟ ಕುಸಿದಿದೆ ಎಂದು ಅಭಿಪ್ರಾಯಪಟ್ಟರು.</p> <p>‘ಎಂಎಸ್ಪಿ ಅಡಿ ಪ್ರತಿ ರೈತರಿಂದ 20 ಕ್ವಿಂಟಾಲ್ ರಾಗಿ ಖರೀದಿಸಲಾ ಗುತ್ತಿದೆ. ಅತಿ ಹೆಚ್ಚು ರಾಗಿ ಬೆಳೆಯುವ ಪ್ರದೇಶ ನಮ್ಮದು. ಆದ್ದರಿಂದ, ಹೆಚ್ಚು ರಾಗಿ ಖರೀದಿಸಬೇಕು ಎಂದು ಧೀರಜ್ ಮನವಿ ಮಾಡಿದರು. ಅದಕ್ಕೆ ಪ್ರತಿಕ್ರಿಯಿಸಿದ ಆಹಾರ ಸಚಿವ ಕೆ.ಎಚ್.ಮುನಿಯಪ್ಪ, ಕೇಂದ್ರಕ್ಕೆ ಈ ಸಂಬಂಧ ಮನವಿ ಮಾಡಿದ್ದು, ಆ ಪ್ರಮಾಣವನ್ನು 50 ಕ್ವಿಂಟಾಲ್ಗೆ ಹೆಚ್ಚಿಸಲಾಗಿದೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಸರ್ಕಾರಿ ಶಾಲೆಗಳ ಅಭಿವೃದ್ಧಿ ಮಾಡುವ ಹೊಣೆ ಸರ್ಕಾರದ್ದು ಮಾತ್ರವೇ? ಈ ಪ್ರಶ್ನೆ ಮುಂದಿಟ್ಟು ವಿಧಾನಪರಿಷತ್ತಿನಲ್ಲಿ ಬುಧವಾರ ಸ್ವಾರಸ್ಯಕರ ಚರ್ಚೆ ನಡೆಯಿತು.</p>.<p>ಬಜೆಟ್ ಮೇಲಿನ ಚರ್ಚೆ ಆರಂಭಿಸಿದ ಜೆಡಿಎಸ್ ಸದಸ್ಯ ಎಸ್.ಎಲ್ ಬೋಜೇಗೌಡ, ‘ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಜೆಟ್ ಮಂಡನೆ ವೇಳೆ ಶಿಕ್ಷಣಕ್ಕಾಗಿ ಭರಪೂರ ಕಾರ್ಯಕ್ರಮಗಳನ್ನು ಘೋಷಿಸಿದ್ದಾರೆ. ಅದು ಸ್ವಾಗತಾರ್ಹವೇ. ಆದರೆ, ಅವು ಅನುಷ್ಠಾನಕ್ಕೆ ಬರುವುದಿಲ್ಲ. ಏಕೆಂದರೆ ಅಗತ್ಯ ಅನುದಾನವನ್ನೇ ತೆಗೆದಿರಿಸಿಲ್ಲ’ ಎಂದರು.</p>.<p>‘ಸರ್ಕಾರಿ ಶಾಲಾ–ಕಾಲೇಜು ವಿಶ್ವವಿದ್ಯಾಲಯಗಳಿಗೆ ಸರಿಯಾದ ಕಟ್ಟಡಗಳಿಲ್ಲ. ಬಹುತೇಕ ಕಡೆ ಶೇ50ಕ್ಕೂ ಹೆಚ್ಚಿನ ಬೋಧಕ ಸಿಬ್ಬಂದಿಯ ಕೊರತೆ ಇದೆ. ಸರ್ಕಾರ ರಸ್ತೆ ಕಾಮಗಾರಿಗಳನ್ನು ಐದು ವರ್ಷ ನಿಲ್ಲಿಸಲಿ. ಆದರೆ ಶಾಲೆಗಳನ್ನು ಅಭಿವೃದ್ಧಿಪಡಿಸಲಿ’ ಎಂದರು.</p>.<p>ಅವರ ಮಾತನ್ನು ತಡೆದ ಉಪಸಭಾಧ್ಯಕ್ಷ ಎಂ.ಕೆ.ಪ್ರಾಣೇಶ್, ‘ಬೋಜೇಗೌಡರೇ, ನಿಮ್ಮ ಅನುದಾನವನ್ನು ಬಳಸಿಕೊಂಡು ನಿಮ್ಮ ಕ್ಷೇತ್ರದ ಯಾವುದಾದರೂ ಸರ್ಕಾರಿ ಶಾಲೆಯನ್ನು ಹೈಟೆಕ್ ಮಾಡಬಹುದಲ್ಲವೇ. ಎಲ್ಲವನ್ನೂ ಸರ್ಕಾರದ ಮೇಲೆಯೇ ಹೊರಿಸಿದರೆ, ಚುನಾಯಿತ ಜನಪ್ರತಿನಿಧಿಗಳ ಜವಾಬ್ದಾರಿಯೇನು’ ಎಂದರು.</p>.<p>ವಿರೋಧ ಪಕ್ಷಗಳ ಸಾಲಿನಲ್ಲಿ ಹಲವು ಸದಸ್ಯರು ಎದ್ದು, ‘ತಮ್ಮ ತಮ್ಮ ಸ್ವಂತ ಖಾಸಗಿ ಶಾಲೆಗಳನ್ನು ಹೊಂದಿರುವವರು, ಸರ್ಕಾರಿ ಶಾಲೆಗಳನ್ನು ಏಕೆ ಅಭಿವೃದ್ಧಿಪಡಿಸುತ್ತಾರೆ’ ಎಂದರು.</p>.<p>ಬೋಜೇಗೌಡ, ‘ಇದೆಲ್ಲವನ್ನೂ ಸರ್ಕಾರವೇ ಮಾಡಲು ಅವಕಾಶವಿರುವ ಕಾರಣಕ್ಕೆ ವಿಷಯ ಪ್ರಸ್ತಾಪಿಸುತ್ತಿದ್ದೇನೆ’ ಎಂದರು.</p>.<p>ಉಪಸಭಾಧ್ಯಕ್ಷರು, ‘ಎನ್.ರವಿಕುಮಾರ್ ಅವರು, ನಾನು ನಮ್ಮ ಕ್ಷೇತ್ರಗಳಲ್ಲಿ ಸರ್ಕಾರಿ ಶಾಲೆ ಅಭಿವೃದ್ಧಿಪಡಿಸಿದ್ದೇವೆ. ಅಂತಹ ಒಂದು ನೈತಿಕತೆಯನ್ನು ಚುನಾಯಿತ ಪ್ರತಿನಿಧಿಗಳೂ ಉಳಿಸಿಕೊಳ್ಳಬೇಕು’ ಎಂದರು.</p>.<h2>ವಿದ್ಯಾರ್ಥಿಗಳಿಗೆ ತಲಾ ₹57 ಸಾವಿರ ಖರ್ಚು!’</h2><p>ಬೆಂಗಳೂರು: ರಾಜ್ಯದಲ್ಲಿ ಶಿಕ್ಷಣ ಇಲಾಖೆ ಸರ್ಕಾರಿ ಶಾಲಾ ವಿದ್ಯಾರ್ಥಿಯ ಮೇಲೆ ವರ್ಷಕ್ಕೆ ₹57 ಸಾವಿರ ಖರ್ಚು ಮಾಡಿದರೆ, ಕೇಂದ್ರ ಸರ್ಕಾರದ ಕೇಂದ್ರೀಯ ವಿದ್ಯಾಲಯ ಪ್ರತಿ ವಿದ್ಯಾರ್ಥಿ ಮೇಲೆ ₹25 ಸಾವಿರ ಖರ್ಚು ಮಾಡುತ್ತದೆ. ಆದರೆ, ಶಿಕ್ಷಣದ ಗುಣಮಟ್ಟದಲ್ಲಿ ಅಜಗಜಾಂತರವಿದೆ ಎಂದು ಬಿಜೆಪಿಯ ಧೀರಜ್ ಮುನಿರಾಜು ವಿಧಾನಸಭೆಯಲ್ಲಿ ಹೇಳಿದರು.</p> <p>ಬಜೆಟ್ ಮೇಲಿನ ಚರ್ಚೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಪ್ರೌಢಶಾಲೆ ಮತ್ತು ಪಿಯುಸಿ ಸೇರಿ ಶಾಲಾ ಶಿಕ್ಷಣಕ್ಕೆ ₹33,000 ಕೋಟಿ ನಿಗದಿ ಮಾಡಲಾಗಿದೆ. ಶಿಕ್ಷಕರ ಮತ್ತು ಸಿಬ್ಬಂದಿ ವೇತನ, ವಿದ್ಯಾರ್ಥಿಗಳಿಗೆ ಸಂಬಂಧಿಸಿದ ವಿವಿಧ ಯೋಜನೆಗಳ ವೆಚ್ಚ ಮತ್ತು ಇತರ ಖರ್ಚು ಇದರಲ್ಲಿ ಒಳಗೊಂಡಿದೆ. ಇದನ್ನು ಭಾಗಿಸಿದಾಗ ಪ್ರತಿ ವಿದ್ಯಾರ್ಥಿ ಮೇಲೆ ₹57 ಸಾವಿರ ಖರ್ಚು ಮಾಡಿದಂತಾ ಗುತ್ತಿದೆ ಎಂದರು. ಇಷ್ಟೆಲ್ಲಾ ಖರ್ಚು ಮಾಡಿದರೂ, ಸರ್ಕಾರಿ ಶಾಲೆಗಳಲ್ಲಿ ವರ್ಷದಿಂದ ವರ್ಷಕ್ಕೆ ತೇರ್ಗಡೆ ಹೊಂದುವವರ ಸಂಖ್ಯೆ ಕಡಿಮೆ ಆಗುತ್ತಿದ್ದು, ಈಗ ಶೇ 58ಕ್ಕೂ ಕಡಿಮೆ ಇದೆ. ವಿದ್ಯಾರ್ಥಿಗಳ ಗುಣಮಟ್ಟವೂ ಅಷ್ಟಕಷ್ಟೆ ಎಂದರು.</p> <p>ಪಾಠ ಮಾಡಬೇಕಾದ ಶಿಕ್ಷಕರನ್ನು ಮೊಟ್ಟೆ ಖರೀದಿಸಲು, ಬಿಸಿಯೂಟ ತಯಾರಿಸಲು, ಶೌಚಾಲಯ ತೊಳೆಯುವ ಕೆಲಸಗಳಿಗೆ ಬಳಸಿಕೊಳ್ಳಲಾಗುತ್ತಿದೆ. ಶಾಲೆಗಳಲ್ಲಿ ಶೌಚಾಲಯ ತೊಳೆಯಲು ಪ್ರತ್ಯೇಕ ಸಿಬ್ಬಂದಿ ನೇಮಿಸಿಲ್ಲ. ಹೀಗಾಗಿ ಶಾಲಾ ಶಿಕ್ಷಣದ ಗುಣಮಟ್ಟ ಕುಸಿದಿದೆ ಎಂದು ಅಭಿಪ್ರಾಯಪಟ್ಟರು.</p> <p>‘ಎಂಎಸ್ಪಿ ಅಡಿ ಪ್ರತಿ ರೈತರಿಂದ 20 ಕ್ವಿಂಟಾಲ್ ರಾಗಿ ಖರೀದಿಸಲಾ ಗುತ್ತಿದೆ. ಅತಿ ಹೆಚ್ಚು ರಾಗಿ ಬೆಳೆಯುವ ಪ್ರದೇಶ ನಮ್ಮದು. ಆದ್ದರಿಂದ, ಹೆಚ್ಚು ರಾಗಿ ಖರೀದಿಸಬೇಕು ಎಂದು ಧೀರಜ್ ಮನವಿ ಮಾಡಿದರು. ಅದಕ್ಕೆ ಪ್ರತಿಕ್ರಿಯಿಸಿದ ಆಹಾರ ಸಚಿವ ಕೆ.ಎಚ್.ಮುನಿಯಪ್ಪ, ಕೇಂದ್ರಕ್ಕೆ ಈ ಸಂಬಂಧ ಮನವಿ ಮಾಡಿದ್ದು, ಆ ಪ್ರಮಾಣವನ್ನು 50 ಕ್ವಿಂಟಾಲ್ಗೆ ಹೆಚ್ಚಿಸಲಾಗಿದೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>