<p><strong>ಬೆಂಗಳೂರು:</strong> ‘ಉಪನೋಂದಣಿ ಕಚೇರಿಯಲ್ಲಿ ಸದಾ ಸರ್ವರ್ ಸಮಸ್ಯೆ ಇದೆ ಎನ್ನುತ್ತಾರೆ. ಆದರೆ ಅಧಿಕಾರಿಗಳಿಗೆ ಪರಿಚಯವಿದ್ದರೆ ಸರ್ವರ್ ಕೈಕೊಡುವುದೇ ಇಲ್ಲ. ನೋಂದಣಿಯೂ ತಕ್ಷಣವೇ ಆಗುತ್ತದೆ’ ಎಂದು ವಿಧಾನ ಪರಿಷತ್ತಿನಲ್ಲಿ ವಿರೋಧ ಪಕ್ಷದ ಮುಖ್ಯ ಸಚೇತಕ ಎನ್.ರವಿಕುಮಾರ್ ಹೇಳಿದರು.</p>.<p>ವಿಧಾನ ಪರಿಷತ್ತಿನಲ್ಲಿ ಗುರುವಾರ ಮಂಡಿಸಲಾದ ‘ನೋಂದಣಿ (ಕರ್ನಾಟಕ ತಿದ್ದುಪಡಿ) ಮಸೂದೆ’ ಮೇಲಿನ ಚರ್ಚೆ ವೇಳೆ ಹಲವು ಸದಸ್ಯರು, ಸರ್ವರ್ ಸಮಸ್ಯೆ ವಿಪರೀತವಾಗಿದೆ. ಅದನ್ನು ಸರಿಪಡಿಸಬೇಕು ಎಂದು ಒತ್ತಾಯಿಸಿದರು.</p>.<p>ಅದಕ್ಕೆ ಪ್ರತಿಕ್ರಿಯಿಸಿದ ಕಂದಾಯ ಸಚಿವ ಕೃಷ್ಣ ಬೈರೇಗೌಡ, ‘ಸರ್ವರ್ ಹ್ಯಾಕ್ ಮಾಡಿದ್ದರಿಂದ ಈ ಸಮಸ್ಯೆ ಎದುರಾಗಿತ್ತು. ಅದನ್ನು ಸರಿಪಡಿಸಲಾಗುತ್ತಿದೆ’ ಎಂದರು. ಆಗ ರವಿಕುಮಾರ್ ಅವರು, ‘ಪರಿಚಯವಿದ್ದರೆ ಸರ್ವರ್ ಡೌನ್ ಆಗುವುದಿಲ್ಲ’ ಎಂದು ಆರೋಪಿಸಿದರು.</p>.<p>ಸಭಾಪತಿ ಬಸವರಾಜ ಹೊರಟ್ಟಿ, ‘ಪರಿಚಯದ ಮೇಲೆ ಕೆಲಸ ಆಗುವುದು ಎಲ್ಲ ಕಾಲದಲ್ಲೂ ಇತ್ತು’ ಎಂದರು. ಸಚಿವ ಕೃಷ್ಣ ಬೈರೇಗೌಡ, ‘ಇದನ್ನು ನಾನು ಅಲ್ಲಗೆಳೆಯುವುದಿಲ್ಲ. ನನ್ನ ಗಮನಕ್ಕೂ ಇದು ಬಂದಿದೆ. ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುತ್ತೇವೆ’ ಎಂದರು.</p>.<h2>ಇ–ಖಾತಾಗೆ ₹25,000: </h2><h2></h2><p>‘ಕರ್ನಾಟಕ ಸ್ಟಾಂಪು (ತಿದ್ದುಪಡಿ) ಮಸೂದೆ’ ಮೇಲಿನ ಚರ್ಚೆಯ ವೇಳೆ ಜೆಡಿಎಸ್ನ ಕೆ.ವಿವೇಕಾನಂದ, ‘ಇ–ಖಾತಾ ನೀಡಲು ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು ₹25,000 ಲಂಚ ನಿಗದಿ ಮಾಡಿದ್ದಾರೆ. ಅದನ್ನು ನೀಡಿದರಷ್ಟೇ ಕೆಲಸ ಆಗುತ್ತದೆ’ ಎಂದರು.</p>.<p>ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ, ‘ಈ ಬಗ್ಗೆ ದೂರು ನೀಡಿದರೆ ಕ್ರಮ ತೆಗೆದುಕೊಳ್ಳುತ್ತೇವೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ‘ಉಪನೋಂದಣಿ ಕಚೇರಿಯಲ್ಲಿ ಸದಾ ಸರ್ವರ್ ಸಮಸ್ಯೆ ಇದೆ ಎನ್ನುತ್ತಾರೆ. ಆದರೆ ಅಧಿಕಾರಿಗಳಿಗೆ ಪರಿಚಯವಿದ್ದರೆ ಸರ್ವರ್ ಕೈಕೊಡುವುದೇ ಇಲ್ಲ. ನೋಂದಣಿಯೂ ತಕ್ಷಣವೇ ಆಗುತ್ತದೆ’ ಎಂದು ವಿಧಾನ ಪರಿಷತ್ತಿನಲ್ಲಿ ವಿರೋಧ ಪಕ್ಷದ ಮುಖ್ಯ ಸಚೇತಕ ಎನ್.ರವಿಕುಮಾರ್ ಹೇಳಿದರು.</p>.<p>ವಿಧಾನ ಪರಿಷತ್ತಿನಲ್ಲಿ ಗುರುವಾರ ಮಂಡಿಸಲಾದ ‘ನೋಂದಣಿ (ಕರ್ನಾಟಕ ತಿದ್ದುಪಡಿ) ಮಸೂದೆ’ ಮೇಲಿನ ಚರ್ಚೆ ವೇಳೆ ಹಲವು ಸದಸ್ಯರು, ಸರ್ವರ್ ಸಮಸ್ಯೆ ವಿಪರೀತವಾಗಿದೆ. ಅದನ್ನು ಸರಿಪಡಿಸಬೇಕು ಎಂದು ಒತ್ತಾಯಿಸಿದರು.</p>.<p>ಅದಕ್ಕೆ ಪ್ರತಿಕ್ರಿಯಿಸಿದ ಕಂದಾಯ ಸಚಿವ ಕೃಷ್ಣ ಬೈರೇಗೌಡ, ‘ಸರ್ವರ್ ಹ್ಯಾಕ್ ಮಾಡಿದ್ದರಿಂದ ಈ ಸಮಸ್ಯೆ ಎದುರಾಗಿತ್ತು. ಅದನ್ನು ಸರಿಪಡಿಸಲಾಗುತ್ತಿದೆ’ ಎಂದರು. ಆಗ ರವಿಕುಮಾರ್ ಅವರು, ‘ಪರಿಚಯವಿದ್ದರೆ ಸರ್ವರ್ ಡೌನ್ ಆಗುವುದಿಲ್ಲ’ ಎಂದು ಆರೋಪಿಸಿದರು.</p>.<p>ಸಭಾಪತಿ ಬಸವರಾಜ ಹೊರಟ್ಟಿ, ‘ಪರಿಚಯದ ಮೇಲೆ ಕೆಲಸ ಆಗುವುದು ಎಲ್ಲ ಕಾಲದಲ್ಲೂ ಇತ್ತು’ ಎಂದರು. ಸಚಿವ ಕೃಷ್ಣ ಬೈರೇಗೌಡ, ‘ಇದನ್ನು ನಾನು ಅಲ್ಲಗೆಳೆಯುವುದಿಲ್ಲ. ನನ್ನ ಗಮನಕ್ಕೂ ಇದು ಬಂದಿದೆ. ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುತ್ತೇವೆ’ ಎಂದರು.</p>.<h2>ಇ–ಖಾತಾಗೆ ₹25,000: </h2><h2></h2><p>‘ಕರ್ನಾಟಕ ಸ್ಟಾಂಪು (ತಿದ್ದುಪಡಿ) ಮಸೂದೆ’ ಮೇಲಿನ ಚರ್ಚೆಯ ವೇಳೆ ಜೆಡಿಎಸ್ನ ಕೆ.ವಿವೇಕಾನಂದ, ‘ಇ–ಖಾತಾ ನೀಡಲು ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು ₹25,000 ಲಂಚ ನಿಗದಿ ಮಾಡಿದ್ದಾರೆ. ಅದನ್ನು ನೀಡಿದರಷ್ಟೇ ಕೆಲಸ ಆಗುತ್ತದೆ’ ಎಂದರು.</p>.<p>ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ, ‘ಈ ಬಗ್ಗೆ ದೂರು ನೀಡಿದರೆ ಕ್ರಮ ತೆಗೆದುಕೊಳ್ಳುತ್ತೇವೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>