ಬಜೆಟ್ ಮೇಲಿನ ಚರ್ಚೆಯ ಮಧ್ಯೆ ವಿಷಯ ಪ್ರಸ್ತಾಪಿಸಿದ ಬಿಜೆಪಿಯ ವೈ.ಎ.ನಾರಾಯಣಸ್ವಾಮಿ, ಕೋಟ ಶ್ರೀನಿವಾಸ ಪೂಜಾರಿ, ಎನ್.ರವಿಕುಮಾರ್, ಶಶಿಲ್ ನಮೋಶಿ, ರಾಜಕೀಯ ಸಭೆಗೆ ಬಂದಿದ್ದ ಸಣ್ಣಪುಟ್ಟ ಪಕ್ಷಗಳ ನಾಯಕರಿಗೆ, ಭ್ರಷ್ಟಾಚಾರ ಪ್ರಕರಣಗಳಲ್ಲಿ ಶಿಕ್ಷೆಗೆ ಒಳಗಾದವರಿಗೆ ಆತಿಥ್ಯ ನೀಡಲು ರಾಜ್ಯದ 30 ಐಎಎಸ್ ಅಧಿಕಾರಿಗಳನ್ನು ನಿಯೋಜಿಸಿರುವುದು ಅಕ್ಷಮ್ಯ ಎಂದು ಆಕ್ರೋಶ ವ್ಯಕ್ತಪಡಿಸಿದರು.