<p><strong>ಪಿರಿಯಾಪಟ್ಟಣ: </strong>ಕೋವಿಡ್ ಸಂಕಷ್ಟದ ಪರಿಸ್ಥಿತಿಯಲ್ಲಿ ಶಾಲಾ ಕಾಲೇಜು ಆರಂಭಿಸದಂತೆ ಸರ್ಕಾರ ಕಟ್ಟುನಿಟ್ಟಿನ ಆದೇಶ ನೀಡಿದ್ದರೂ, ಪಟ್ಟಣದ ಆದಿಚುಂಚನಗಿರಿ ಶಿಕ್ಷಣ ಸಂಸ್ಥೆಯಲ್ಲಿ ವಿವಿಧ ತರಗತಿಗಳ ವಿದ್ಯಾರ್ಥಿಗಳಿಗೆ ಪಾಠ ನಡೆಯುತ್ತಿರುವುದು ಕಂಡು ಬಂದಿದೆ.</p>.<p>ಶಾಲಾ ಕಟ್ಟಡದಲ್ಲಿಯೇ 15 ದಿನಗಳಿಂದ ತರಗತಿ ನಡೆಸಲಾಗುತ್ತಿದ್ದು, ಪ್ರತಿ ಕೊಠಡಿಯಲ್ಲಿ 40ರಿಂದ 50 ವಿದ್ಯಾರ್ಥಿಗಳಿಗೆ ಪಾಠ ಮಾಡಲಾಗುತ್ತಿದೆ.</p>.<p>‘ಸದ್ಯಕ್ಕೆ ಶಾಲಾ ಕಾಲೇಜು ತೆರೆಯಬಾರದೆಂಬ ಸೂಚನೆ ಇದ್ದರೂ ಸಂಸ್ಥೆಯು ನಿಯಮ ಪಾಲಿಸದೆ ಸರ್ಕಾರದ ಆದೇಶವನ್ನು ಉಲ್ಲಂಘಿಸಿದೆ. ಶಾಲೆಯ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುವಂತೆ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಸೂಚನೆ ನೀಡುತ್ತೇನೆ’ ಎಂದು ತಾಲ್ಲೂಕಿನಪ್ರಭಾರತಹಶೀಲ್ದಾರ್ ಬಸವರಾಜು ತಿಳಿಸಿದರು.</p>.<p>ಈ ಬಗ್ಗೆ ಪ್ರತಿಕ್ರಿಯಿಸಿದ ಸಂಸ್ಥೆಯ ಆಡಳಿತಾಧಿಕಾರಿ ಸುಧಾಕರ್, ‘ಯಾವುದೇ ತರಗತಿ ನಡೆಸುತ್ತಿರಲಿಲ್ಲ. ವಿದ್ಯಾರ್ಥಿಗಳ ಮೊಬೈಲ್ಗೆ ಗೂಗಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳುವುದನ್ನು ಹೇಳಿ ಕೊಡಲಾಗುತ್ತಿತ್ತು’ ಎಂದರು.</p>.<p class="Subhead"><strong>ಪಿಯುಸಿಗೆ ಪಾಠ: </strong>‘ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದಾಗ ಪಿಯುಸಿ ವಿದ್ಯಾರ್ಥಿಗಳಿಗೆ ಮಾತ್ರ ಪಾಠ ಮಾಡಲಾಗುತ್ತಿದೆ ಎನ್ನುವ ಮಾಹಿತಿ ಸಿಕ್ಕಿದೆ.ಪ್ರೌಢಶಾಲಾ ಮಕ್ಕಳಿಗೆಪಾಠ ಮಾಡಿದ್ದು ಸಾಬೀತಾದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು’ ಎಂದು ಬಿಇಒ ವೈ.ಕೆ.ತಿಮ್ಮೇಗೌಡ ತಿಳಿಸಿದರು.</p>.<p class="Subhead">ಅನುಮತಿ ಇಲ್ಲ: ‘ಆನ್ಲೈನ್ ಹೊರತುಪಡಿಸಿ ಯಾವುದೇ ಕಾರಣಕ್ಕೆ ತರಗತಿಯಲ್ಲಿ ಸೇರಿಸಿ ಪಿಯುಸಿ ವಿದ್ಯಾರ್ಥಿಗಳಿಗೂಪಾಠ ಮಾಡಲು ಅನುಮತಿ ಇಲ್ಲ. ಪಿರಿಯಾಪಟ್ಟಣದ ಶಿಕ್ಷಣ ಸಂಸ್ಥೆಯ ವಿಚಾರ ನನ್ನ ಗಮನಕ್ಕೆ ಬಂದಿಲ್ಲ. ಹಾಗೇನಾದರೂ ತರಗತಿ ನಡೆಸುತ್ತಿದ್ದರೆ ನೋಟಿಸ್ ನೀಡಲಾಗುವುದು’ ಎಂದು ಡಿಡಿಪಿಯು ಜೆ.ಆರ್.ಗೀತಾ ಪ್ರತಿಕ್ರಿಯಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪಿರಿಯಾಪಟ್ಟಣ: </strong>ಕೋವಿಡ್ ಸಂಕಷ್ಟದ ಪರಿಸ್ಥಿತಿಯಲ್ಲಿ ಶಾಲಾ ಕಾಲೇಜು ಆರಂಭಿಸದಂತೆ ಸರ್ಕಾರ ಕಟ್ಟುನಿಟ್ಟಿನ ಆದೇಶ ನೀಡಿದ್ದರೂ, ಪಟ್ಟಣದ ಆದಿಚುಂಚನಗಿರಿ ಶಿಕ್ಷಣ ಸಂಸ್ಥೆಯಲ್ಲಿ ವಿವಿಧ ತರಗತಿಗಳ ವಿದ್ಯಾರ್ಥಿಗಳಿಗೆ ಪಾಠ ನಡೆಯುತ್ತಿರುವುದು ಕಂಡು ಬಂದಿದೆ.</p>.<p>ಶಾಲಾ ಕಟ್ಟಡದಲ್ಲಿಯೇ 15 ದಿನಗಳಿಂದ ತರಗತಿ ನಡೆಸಲಾಗುತ್ತಿದ್ದು, ಪ್ರತಿ ಕೊಠಡಿಯಲ್ಲಿ 40ರಿಂದ 50 ವಿದ್ಯಾರ್ಥಿಗಳಿಗೆ ಪಾಠ ಮಾಡಲಾಗುತ್ತಿದೆ.</p>.<p>‘ಸದ್ಯಕ್ಕೆ ಶಾಲಾ ಕಾಲೇಜು ತೆರೆಯಬಾರದೆಂಬ ಸೂಚನೆ ಇದ್ದರೂ ಸಂಸ್ಥೆಯು ನಿಯಮ ಪಾಲಿಸದೆ ಸರ್ಕಾರದ ಆದೇಶವನ್ನು ಉಲ್ಲಂಘಿಸಿದೆ. ಶಾಲೆಯ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುವಂತೆ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಸೂಚನೆ ನೀಡುತ್ತೇನೆ’ ಎಂದು ತಾಲ್ಲೂಕಿನಪ್ರಭಾರತಹಶೀಲ್ದಾರ್ ಬಸವರಾಜು ತಿಳಿಸಿದರು.</p>.<p>ಈ ಬಗ್ಗೆ ಪ್ರತಿಕ್ರಿಯಿಸಿದ ಸಂಸ್ಥೆಯ ಆಡಳಿತಾಧಿಕಾರಿ ಸುಧಾಕರ್, ‘ಯಾವುದೇ ತರಗತಿ ನಡೆಸುತ್ತಿರಲಿಲ್ಲ. ವಿದ್ಯಾರ್ಥಿಗಳ ಮೊಬೈಲ್ಗೆ ಗೂಗಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳುವುದನ್ನು ಹೇಳಿ ಕೊಡಲಾಗುತ್ತಿತ್ತು’ ಎಂದರು.</p>.<p class="Subhead"><strong>ಪಿಯುಸಿಗೆ ಪಾಠ: </strong>‘ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದಾಗ ಪಿಯುಸಿ ವಿದ್ಯಾರ್ಥಿಗಳಿಗೆ ಮಾತ್ರ ಪಾಠ ಮಾಡಲಾಗುತ್ತಿದೆ ಎನ್ನುವ ಮಾಹಿತಿ ಸಿಕ್ಕಿದೆ.ಪ್ರೌಢಶಾಲಾ ಮಕ್ಕಳಿಗೆಪಾಠ ಮಾಡಿದ್ದು ಸಾಬೀತಾದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು’ ಎಂದು ಬಿಇಒ ವೈ.ಕೆ.ತಿಮ್ಮೇಗೌಡ ತಿಳಿಸಿದರು.</p>.<p class="Subhead">ಅನುಮತಿ ಇಲ್ಲ: ‘ಆನ್ಲೈನ್ ಹೊರತುಪಡಿಸಿ ಯಾವುದೇ ಕಾರಣಕ್ಕೆ ತರಗತಿಯಲ್ಲಿ ಸೇರಿಸಿ ಪಿಯುಸಿ ವಿದ್ಯಾರ್ಥಿಗಳಿಗೂಪಾಠ ಮಾಡಲು ಅನುಮತಿ ಇಲ್ಲ. ಪಿರಿಯಾಪಟ್ಟಣದ ಶಿಕ್ಷಣ ಸಂಸ್ಥೆಯ ವಿಚಾರ ನನ್ನ ಗಮನಕ್ಕೆ ಬಂದಿಲ್ಲ. ಹಾಗೇನಾದರೂ ತರಗತಿ ನಡೆಸುತ್ತಿದ್ದರೆ ನೋಟಿಸ್ ನೀಡಲಾಗುವುದು’ ಎಂದು ಡಿಡಿಪಿಯು ಜೆ.ಆರ್.ಗೀತಾ ಪ್ರತಿಕ್ರಿಯಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>