ಬೆಂಗಳೂರು: ‘ಸಂವಿಧಾನ ಬದಲಾವಣೆಯ ಮಾತು ಆಡಿರುವ ಬಿಜೆಪಿ ಸಂಸದ ಅನಂತಕುಮಾರ್ ಹೆಗಡೆ ಅವರನ್ನು ಚುನಾವಣಾ ಸ್ಪರ್ಧೆಯಿಂದ ಶಾಶ್ವತವಾಗಿ ಅನರ್ಹಗೊಳಿಸಬೇಕು. ಹೆಗಡೆ ಅವರ ಅಭಿಪ್ರಾಯವನ್ನು ಪ್ರಧಾನಿ ನರೇಂದ್ರ ಮೋದಿ ಒಪ್ಪದೆ ಇದ್ದರೆ, ಹೆಗಡೆಯವರನ್ನು ಪಕ್ಷದಿಂದಲೇ ಕಿತ್ತುಹಾಕಬೇಕು’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.