ಕಳೆದ ಕೆಲವು ವರ್ಷಗಳಿಂದ ಹಲವು ಸವಾಲುಗಳು ಮತ್ತು ಪ್ರತಿಕೂಲ ಹವಾಮಾನ ಪರಿಸ್ಥಿತಿಗಳು ಜನರ ಜೀವನದ ಮೇಲೆ ಭಾರಿ ಪರಿಣಾಮ ಬೀರುತ್ತಿವೆ. ವಿಶೇಷವಾಗಿ ಕರ್ನಾಟಕದಲ್ಲಿ ಜೀವನೋಪಾಯದ ಪ್ರಮುಖ ಮೂಲವಾಗಿರುವ ಕೃಷಿ ಮೇಲೆ ಹೆಚ್ಚಿನ ಪರಿಣಾಮ ಬೀರಿದೆ. ಮಳೆ ಕೊರತೆಯಿಂದ ಬೆಳೆ ನಷ್ಟ, ಕುಡಿಯುವ ನೀರಿನ ಕೊರತೆ, ಬರಗಾಲ, ಗ್ರಾಮೀಣ ಸಮುದಾಯಗಳಿಗೆ ಸಾಮಾಜಿಕ–ಆರ್ಥಿಕ ಸಂಕಷ್ಟಗಳು ಸೇರಿದಂತೆ ತೀವ್ರ ಪರಿಣಾಮಗಳನ್ನು ಉಂಟುಮಾಡಿದೆ ಎಂದು ಸಿದ್ದರಾಮಯ್ಯ ತಮ್ಮ ಪತ್ರದಲ್ಲಿ ವಿವರಿಸಿದ್ದಾರೆ.