ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬರ ಘೋಷಣೆ ಮಾರ್ಗಸೂಚಿ ಪರಿಷ್ಕರಣೆಗೆ ಕೇಂದ್ರಕ್ಕೆ ಪತ್ರ ಬರೆದ ಸಿಎಂ ಸಿದ್ದರಾಮಯ್ಯ

Published 13 ಆಗಸ್ಟ್ 2023, 8:16 IST
Last Updated 13 ಆಗಸ್ಟ್ 2023, 8:16 IST
ಅಕ್ಷರ ಗಾತ್ರ

ಬೆಂಗಳೂರು: ಬರ ಘೋಷಣೆ ಮಾರ್ಗಸೂಚಿಗಳನ್ನು ಪರಿಷ್ಕರಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್‌ ತೋಮರ್‌ ಅವರಿಗೆ ಪತ್ರ ಬರೆದಿದ್ದಾರೆ.

ಕಳೆದ ಕೆಲವು ವರ್ಷಗಳಿಂದ ಹಲವು ಸವಾಲುಗಳು ಮತ್ತು ಪ್ರತಿಕೂಲ ಹವಾಮಾನ ಪರಿಸ್ಥಿತಿಗಳು ಜನರ ಜೀವನದ ಮೇಲೆ ಭಾರಿ ಪರಿಣಾಮ ಬೀರುತ್ತಿವೆ. ವಿಶೇಷವಾಗಿ ಕರ್ನಾಟಕದಲ್ಲಿ ಜೀವನೋಪಾಯದ ಪ್ರಮುಖ ಮೂಲವಾಗಿರುವ ಕೃಷಿ ಮೇಲೆ ಹೆಚ್ಚಿನ ಪರಿಣಾಮ ಬೀರಿದೆ. ಮಳೆ ಕೊರತೆಯಿಂದ ಬೆಳೆ ನಷ್ಟ, ಕುಡಿಯುವ ನೀರಿನ ಕೊರತೆ, ಬರಗಾಲ, ಗ್ರಾಮೀಣ ಸಮುದಾಯಗಳಿಗೆ ಸಾಮಾಜಿಕ–ಆರ್ಥಿಕ ಸಂಕಷ್ಟಗಳು ಸೇರಿದಂತೆ ತೀವ್ರ ಪರಿಣಾಮಗಳನ್ನು ಉಂಟುಮಾಡಿದೆ ಎಂದು ಸಿದ್ದರಾಮಯ್ಯ ತಮ್ಮ ಪತ್ರದಲ್ಲಿ ವಿವರಿಸಿದ್ದಾರೆ.

PDF
Letter from CM to Union Agriculture Minister (1).pdf
ಓಪನ್ ಮಾಡಿ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT