<p><strong>ನವದೆಹಲಿ:</strong> ಲಿಂಗಾಯತ ಪ್ರತ್ಯೇಕ ಧರ್ಮ ಸ್ಥಾನಮಾನದ ಶಿಫಾರಸನ್ನು ತಿರಸ್ಕರಿಸಿದ್ದಾಗಿ ಕರ್ನಾಟಕ ಹೈಕೋರ್ಟ್ಗೆ ಕೇಂದ್ರ ಸರ್ಕಾರ ತಿಳಿಸಿದ್ದು, ಇದರ ವಿರುದ್ಧ ತೀವ್ರ ಪ್ರತಿಭಟನೆ ನಡೆಸಲಾಗುವುದು ಎಂದು ಲಿಂಗಾಯತ ಧರ್ಮ ಮಹಾಸಭೆ ಅಧ್ಯಕ್ಷೆ ಮಾತೆ ಮಹಾದೇವಿ ಹೇಳಿದರು.</p>.<p><strong>ಇದನ್ನೂ ಓದಿ:<a href="https://www.prajavani.net/stories/stateregional/central-government-rejects-593309.html" target="_blank">‘ಲಿಂಗಾಯತ ಪ್ರತ್ಯೇಕ ಧರ್ಮ ಶಿಫಾರಸು ಒಪ್ಪಲಾಗದು’: ರಾಜ್ಯಕ್ಕೆ ಕೇಂದ್ರದ ಪತ್ರ</a></strong></p>.<p>ಇಲ್ಲಿನ ತಾಲ್ಕಟೋರಾ ಒಳಾಂಗಣ ಕ್ರೀಡಾಂಗಣದಲ್ಲಿ ಸೋಮವಾರ ಆರಂಭವಾದ ಲಿಂಗಾಯತ ಸಮಾವೇಶದ ಉದ್ಘಾಟನೆ ಸಮಾರಂಭದಲ್ಲಿ ಅವರು ಮಾತನಾಡಿದರು.</p>.<p>ರಾಜ್ಯ ಸರ್ಕಾರ ಕಳೆದ ವರ್ಷ ಪ್ರತ್ಯೇಕ ಧರ್ಮದ ಶಿಫಾರಸು ಮಾಡಿದೆ. ಆದರೆ, ಕೇಂದ್ರ ಸರ್ಕಾರವು ಅದನ್ನು ತಿರಸ್ಕರಿಸಿದ್ದಾಗಿ ನವೆಂಬರ್ 13ರಂದು ರಾಜ್ಯ ಹೈಕೋರ್ಟ್ಗೆ ಹೇಳಿಕೆ ಸಲ್ಲಿಸಿದೆ. ಮೂರು ದಿನ ನಡೆಯಲಿರುವ ಈ ಸಮಾವೇಶವು ಪ್ರತಿಭಟನಾ ಸಮಾವೇಶ ಆಗಲಿದೆ ಎಂದು ಅವರು ತಿಳಿಸಿದರು.</p>.<p>ಸಿಖ್, ಜೈನ ಮಾತ್ರವಲ್ಲದೆ ವಿದೇಶದ ಧರ್ಮಗಳಾದ ಇಸ್ಲಾಂ, ಕ್ರೈಸ್ತ ಹಾಗೂ ಫಾರಸಿಗಳಿಗೆ ಪ್ರತ್ಯೇಕ ಸ್ಥಾನಮಾನ ನೀಡಿ ಧಾರ್ಮಿಕ ಅಲ್ಪಸಂಖ್ಯಾತ ಎಂದು ಗುರುತಿಸಿರುವ ಕೇಂದ್ರ ಲಿಂಗಾಯತದ ಮನವಿ ತಿರಸ್ಕರಿಸಿದ್ದು ಸರಿಯಲ್ಲ ಎಂದು ಅವರು ಹೇಳಿದರು.</p>.<p>ವಿವಿಧ ಮಠಾಧೀಶರು, ಕರ್ನಾಟಕ ಹಾಗೂ ಮಹಾರಾಷ್ಟ್ರದ ಲಿಂಗಾಯತ ಸಮುದಾಯದ ನೂರಾರು ಜನರು ಸಮಾವೇಶದಲ್ಲಿ ಪಾಲ್ಗೊಂಡಿದ್ದಾರೆ.</p>.<p>ಸಮಾವೇಶಕ್ಕೆ ರಾಜಕಾರಣಿಗಳು ಗೈರು: ಸಮಾವೇಶದ ಉದ್ಘಾಟನೆಗೆ ಕೇಂದ್ರದ ಸಚಿವ ಡಿ.ವಿ. ಸದಾನಂದಗೌಡ ಗೈರಾದರು. ರಾಷ್ಟ್ರೀಯ ಅಲ್ಪಸಂಖ್ಯಾತ ಆಯೋಗದ ಅಧ್ಯಕ್ಷ ಸೈಯದ್ ಘಯೋರಲ್ ಹಸನ್ ರಿಜ್ವಿ ಅವರು ಧ್ವಜಾರೋಹಣ ನೆರವೇರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಲಿಂಗಾಯತ ಪ್ರತ್ಯೇಕ ಧರ್ಮ ಸ್ಥಾನಮಾನದ ಶಿಫಾರಸನ್ನು ತಿರಸ್ಕರಿಸಿದ್ದಾಗಿ ಕರ್ನಾಟಕ ಹೈಕೋರ್ಟ್ಗೆ ಕೇಂದ್ರ ಸರ್ಕಾರ ತಿಳಿಸಿದ್ದು, ಇದರ ವಿರುದ್ಧ ತೀವ್ರ ಪ್ರತಿಭಟನೆ ನಡೆಸಲಾಗುವುದು ಎಂದು ಲಿಂಗಾಯತ ಧರ್ಮ ಮಹಾಸಭೆ ಅಧ್ಯಕ್ಷೆ ಮಾತೆ ಮಹಾದೇವಿ ಹೇಳಿದರು.</p>.<p><strong>ಇದನ್ನೂ ಓದಿ:<a href="https://www.prajavani.net/stories/stateregional/central-government-rejects-593309.html" target="_blank">‘ಲಿಂಗಾಯತ ಪ್ರತ್ಯೇಕ ಧರ್ಮ ಶಿಫಾರಸು ಒಪ್ಪಲಾಗದು’: ರಾಜ್ಯಕ್ಕೆ ಕೇಂದ್ರದ ಪತ್ರ</a></strong></p>.<p>ಇಲ್ಲಿನ ತಾಲ್ಕಟೋರಾ ಒಳಾಂಗಣ ಕ್ರೀಡಾಂಗಣದಲ್ಲಿ ಸೋಮವಾರ ಆರಂಭವಾದ ಲಿಂಗಾಯತ ಸಮಾವೇಶದ ಉದ್ಘಾಟನೆ ಸಮಾರಂಭದಲ್ಲಿ ಅವರು ಮಾತನಾಡಿದರು.</p>.<p>ರಾಜ್ಯ ಸರ್ಕಾರ ಕಳೆದ ವರ್ಷ ಪ್ರತ್ಯೇಕ ಧರ್ಮದ ಶಿಫಾರಸು ಮಾಡಿದೆ. ಆದರೆ, ಕೇಂದ್ರ ಸರ್ಕಾರವು ಅದನ್ನು ತಿರಸ್ಕರಿಸಿದ್ದಾಗಿ ನವೆಂಬರ್ 13ರಂದು ರಾಜ್ಯ ಹೈಕೋರ್ಟ್ಗೆ ಹೇಳಿಕೆ ಸಲ್ಲಿಸಿದೆ. ಮೂರು ದಿನ ನಡೆಯಲಿರುವ ಈ ಸಮಾವೇಶವು ಪ್ರತಿಭಟನಾ ಸಮಾವೇಶ ಆಗಲಿದೆ ಎಂದು ಅವರು ತಿಳಿಸಿದರು.</p>.<p>ಸಿಖ್, ಜೈನ ಮಾತ್ರವಲ್ಲದೆ ವಿದೇಶದ ಧರ್ಮಗಳಾದ ಇಸ್ಲಾಂ, ಕ್ರೈಸ್ತ ಹಾಗೂ ಫಾರಸಿಗಳಿಗೆ ಪ್ರತ್ಯೇಕ ಸ್ಥಾನಮಾನ ನೀಡಿ ಧಾರ್ಮಿಕ ಅಲ್ಪಸಂಖ್ಯಾತ ಎಂದು ಗುರುತಿಸಿರುವ ಕೇಂದ್ರ ಲಿಂಗಾಯತದ ಮನವಿ ತಿರಸ್ಕರಿಸಿದ್ದು ಸರಿಯಲ್ಲ ಎಂದು ಅವರು ಹೇಳಿದರು.</p>.<p>ವಿವಿಧ ಮಠಾಧೀಶರು, ಕರ್ನಾಟಕ ಹಾಗೂ ಮಹಾರಾಷ್ಟ್ರದ ಲಿಂಗಾಯತ ಸಮುದಾಯದ ನೂರಾರು ಜನರು ಸಮಾವೇಶದಲ್ಲಿ ಪಾಲ್ಗೊಂಡಿದ್ದಾರೆ.</p>.<p>ಸಮಾವೇಶಕ್ಕೆ ರಾಜಕಾರಣಿಗಳು ಗೈರು: ಸಮಾವೇಶದ ಉದ್ಘಾಟನೆಗೆ ಕೇಂದ್ರದ ಸಚಿವ ಡಿ.ವಿ. ಸದಾನಂದಗೌಡ ಗೈರಾದರು. ರಾಷ್ಟ್ರೀಯ ಅಲ್ಪಸಂಖ್ಯಾತ ಆಯೋಗದ ಅಧ್ಯಕ್ಷ ಸೈಯದ್ ಘಯೋರಲ್ ಹಸನ್ ರಿಜ್ವಿ ಅವರು ಧ್ವಜಾರೋಹಣ ನೆರವೇರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>