<p><strong>ಬೆಳಗಾವಿ:</strong> 'ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಅವರು, ಸಚಿವೆ ಲಕ್ಷ್ಮಿ ಹೆಬ್ಬಾಳಕರ ಕುರಿತಾಗಿ ಕೆಟ್ಟ ಪದ ಬಳಸಿದ್ದು ಖಂಡನೀಯ. ತಕ್ಷಣವೇ ಅವರ ಸದಸ್ಯತ್ವ ವಜಾಗೊಳಿಸಬೇಕು' ಎಂದು ಲಿಂಗಾಯತ ಪಂಚಮಸಾಲಿ ಮುಖಂಡ ಗುಂಡು ಪಾಟೀಲ ಒತ್ತಾಯಿಸಿದರು.</p><p>ಇಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 'ಭಾರತದಲ್ಲಿ ಮಹಿಳೆಯರಿಗೆ ಅಪಾರವಾದ ಗೌರವವಿದೆ. ಹೆಣ್ಣು ಮಕ್ಕಳಿಗೆ ದೈವೀಸ್ಥಾನ ಕೊಡಲಾಗಿದೆ. ಹೀಗಿರುವಾಗ, ರವಿ ಅವರು ಅವಾಚ್ಯ ಶಬ್ದ ಬಳಸಿ, ಇಡೀ ಮಾನವ ಕುಲಕ್ಕೆ ಅಪಮಾನ ಮಾಡಿದ್ದಾರೆ. ನಮ್ಮ ಸಮುದಾಯ ಇದನ್ನು ತೀವ್ರವಾಗಿ ಖಂಡಿಸುತ್ತದೆ' ಎಂದರು.</p>.ಸಿ.ಟಿ. ರವಿ 12 ಬಾರಿ 'ಪ್ರಾಸ್ಟಿಟ್ಯೂಟ್’ ಅಂದಿದ್ದಾನೆ: ಡಿಕೆಶಿ.ಸಿ.ಟಿ. ರವಿ ಬಂಧನ | ಪೊಲೀಸ್ ಕ್ರಮದಲ್ಲಿ ಹಸ್ತಕ್ಷೇಪ ಮಾಡಿಲ್ಲ: ಡಿ.ಕೆ.ಶಿವಕುಮಾರ್.<p>'ಇಡೀ ಸಮುದಾಯದವರು ಲಕ್ಷ್ಮಿ ಹೆಬ್ಬಾಳಕರ ಪರವಾಗಿದ್ದೇವೆ. ರವಿ ಮುಂದೆಯೂ ಇಂಥ ಹೇಳಿಕೆಗಳನ್ನು ಕೊಟ್ಟರೆ ಹೋರಾಡುತ್ತೇವೆ' ಎಂದು ಹೇಳಿದರು.</p><p>ಮುಖಂಡ ಅಡಿವೇಶ ಇಟಗಿ ಮಾತನಾಡಿ, 'ಲಕ್ಷ್ಮಿ ಹೆಬ್ಬಾಳಕರ ಬಗ್ಗೆ ಸಿ.ಟಿ.ರವಿ ನೀಡಿದ ಹೇಳಿಕೆ ಖಂಡಿಸಿ, ನಗರದಲ್ಲಿ ಡಿ. 21ರಂದು ಹೆಬ್ಬಾಳಕರ ಅಭಿಮಾನಿ ಬಳಗದವರು ಪ್ರತಿಭಟನೆ ಮಾಡಲಿದ್ದೇವೆ. ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಲಿದ್ದೇವೆ' ಎಂದರು.</p>.ನಿರ್ಜನ ಪ್ರದೇಶದಲ್ಲಿ ಸುತ್ತಾಟ, ನನಗಾಗುವ ತೊಂದರೆಗೆ ಸರ್ಕಾರವೇ ಹೊಣೆ: CT ರವಿ.ಸಿ.ಟಿ. ರವಿ ಬಂಧನ | ಇದೊಂದು ಗಂಭೀರ ಸ್ವರೂಪದ ಅಪರಾಧ: ಸಿಎಂ ಸಿದ್ದರಾಮಯ್ಯ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ:</strong> 'ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಅವರು, ಸಚಿವೆ ಲಕ್ಷ್ಮಿ ಹೆಬ್ಬಾಳಕರ ಕುರಿತಾಗಿ ಕೆಟ್ಟ ಪದ ಬಳಸಿದ್ದು ಖಂಡನೀಯ. ತಕ್ಷಣವೇ ಅವರ ಸದಸ್ಯತ್ವ ವಜಾಗೊಳಿಸಬೇಕು' ಎಂದು ಲಿಂಗಾಯತ ಪಂಚಮಸಾಲಿ ಮುಖಂಡ ಗುಂಡು ಪಾಟೀಲ ಒತ್ತಾಯಿಸಿದರು.</p><p>ಇಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 'ಭಾರತದಲ್ಲಿ ಮಹಿಳೆಯರಿಗೆ ಅಪಾರವಾದ ಗೌರವವಿದೆ. ಹೆಣ್ಣು ಮಕ್ಕಳಿಗೆ ದೈವೀಸ್ಥಾನ ಕೊಡಲಾಗಿದೆ. ಹೀಗಿರುವಾಗ, ರವಿ ಅವರು ಅವಾಚ್ಯ ಶಬ್ದ ಬಳಸಿ, ಇಡೀ ಮಾನವ ಕುಲಕ್ಕೆ ಅಪಮಾನ ಮಾಡಿದ್ದಾರೆ. ನಮ್ಮ ಸಮುದಾಯ ಇದನ್ನು ತೀವ್ರವಾಗಿ ಖಂಡಿಸುತ್ತದೆ' ಎಂದರು.</p>.ಸಿ.ಟಿ. ರವಿ 12 ಬಾರಿ 'ಪ್ರಾಸ್ಟಿಟ್ಯೂಟ್’ ಅಂದಿದ್ದಾನೆ: ಡಿಕೆಶಿ.ಸಿ.ಟಿ. ರವಿ ಬಂಧನ | ಪೊಲೀಸ್ ಕ್ರಮದಲ್ಲಿ ಹಸ್ತಕ್ಷೇಪ ಮಾಡಿಲ್ಲ: ಡಿ.ಕೆ.ಶಿವಕುಮಾರ್.<p>'ಇಡೀ ಸಮುದಾಯದವರು ಲಕ್ಷ್ಮಿ ಹೆಬ್ಬಾಳಕರ ಪರವಾಗಿದ್ದೇವೆ. ರವಿ ಮುಂದೆಯೂ ಇಂಥ ಹೇಳಿಕೆಗಳನ್ನು ಕೊಟ್ಟರೆ ಹೋರಾಡುತ್ತೇವೆ' ಎಂದು ಹೇಳಿದರು.</p><p>ಮುಖಂಡ ಅಡಿವೇಶ ಇಟಗಿ ಮಾತನಾಡಿ, 'ಲಕ್ಷ್ಮಿ ಹೆಬ್ಬಾಳಕರ ಬಗ್ಗೆ ಸಿ.ಟಿ.ರವಿ ನೀಡಿದ ಹೇಳಿಕೆ ಖಂಡಿಸಿ, ನಗರದಲ್ಲಿ ಡಿ. 21ರಂದು ಹೆಬ್ಬಾಳಕರ ಅಭಿಮಾನಿ ಬಳಗದವರು ಪ್ರತಿಭಟನೆ ಮಾಡಲಿದ್ದೇವೆ. ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಲಿದ್ದೇವೆ' ಎಂದರು.</p>.ನಿರ್ಜನ ಪ್ರದೇಶದಲ್ಲಿ ಸುತ್ತಾಟ, ನನಗಾಗುವ ತೊಂದರೆಗೆ ಸರ್ಕಾರವೇ ಹೊಣೆ: CT ರವಿ.ಸಿ.ಟಿ. ರವಿ ಬಂಧನ | ಇದೊಂದು ಗಂಭೀರ ಸ್ವರೂಪದ ಅಪರಾಧ: ಸಿಎಂ ಸಿದ್ದರಾಮಯ್ಯ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>