ಬೆಂಗಳೂರು ನಗರ ಜಿಲ್ಲಾಧಿಕಾರಿ ಇದೇ 1ರಂದು ಹೊರಡಿಸಿರುವ ಆದೇಶವನ್ನು ಪ್ರಶ್ನಿಸಿ ಬೃಹತ್ ಬೆಂಗಳೂರು ಹೋಟೆಲ್ಗಳ ಸಂಘಟನೆ ಕಾರ್ಯದರ್ಶಿ ವೀರೇಂದ್ರ ಎನ್. ಕಾಮತ್ ಸೇರಿದಂತೆ ಒಟ್ಟು ನಾಲ್ವರು ಸಲ್ಲಿಸಿದ್ದ ರಿಟ್ ಅರ್ಜಿಯನ್ನು ಬುಧವಾರ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಸ್.ಆರ್.ಕೃಷ್ಣಕುಮಾರ್ ಅವರಿದ್ದ ಏಕಸದಸ್ಯ ನ್ಯಾಯಪೀಠ, ಮದ್ಯ ಮಾರಾಟ ನಿಷೇಧವನ್ನು ಮತದಾನದ ಮತ್ತು ಮತ ಎಣಿಕೆಯ ದಿನಕ್ಕೆ ಮಾತ್ರವೇ ಸೀಮಿತಗೊಳಿಸಿ ಆದೇಶಿಸಿದೆ.