ಬೆಂಗಳೂರು: ಕಂಟೈನ್ಮೆಂಟ್ ಪ್ರದೇಶಗಳನ್ನು ಹೊರತುಪಡಿಸಿ ರಾಜ್ಯದಾದ್ಯಂತ ಮೇ. 4ರಿಂದ ಮದ್ಯಮಾರಾಟಕ್ಕೆ ಅನುಮತಿ ನೀಡಲಾಗಿದೆ ಎಂದು ಅಬಕಾರಿ ಸಚಿವ ಎಚ್. ನಾಗೇಶ್ ತಿಳಿಸಿದ್ದಾರೆ.
ಬೆಳಗ್ಗೆ 9 ಗಂಟೆಯಿಂದ ರಾತ್ರಿ 7ರ ವರೆಗೆ ಮಾತ್ರ ಮದ್ಯದಂಗಡಿಗಳನ್ನು ತೆರೆಯಲು ಅವಕಾಶ ನೀಡಲಾಗಿದೆ ಎಂದೂ ಸಚಿವ ನಾಗೇಶ್ ಹೇಳಿದ್ದಾರೆ.ಸಿಎಲ್–2 ಮತ್ತು ಸಿಎಲ್ 11–ಸಿ (ಎಂಎಸ್ಐಎಲ್ ಮದ್ಯ ಮಳಿಗೆಗಳು)ಗಳನ್ನು ತೆರೆಯಲು ಅನುಮತಿ ನೀಡಲಾಗಿದೆ.
ಈ ಕುರಿತು ರಾಷ್ಟ್ರೀಯ ಸುದ್ದಿ ಸಂಸ್ಥೆ ಎಎನ್ಐ ವರದಿ ಮಾಡಿದೆ.
Standalone liquor stores to open across Karnataka from Monday (4th May) except in containment zones. Timings will be 9 am to 7 pm: H Nagesh, State Excise Minister (File pic) pic.twitter.com/w8nahBs0um