<p><strong>ಬೆಂಗಳೂರು:</strong> ಶಾಂತಿನಗರ ವಿಧಾನಸಭಾ ಕ್ಷೇತ್ರದ ಶಾಸಕ ಎನ್.ಎ.ಹ್ಯಾರಿಸ್ ಅವರ ಚಿಕ್ಕಪ್ಪ ಉಮರ್ ಫಾರೂಕ್ ಹ್ಯಾರಿಸ್ ನಲಪಾಡ್ ಅವರ ಬ್ಯಾಗ್ನಲ್ಲಿ ಬಂದೂಕಿನ ಜೀವಂತ ಗುಂಡುಗಳು ಪತ್ತೆಯಾಗಿವೆ.</p>.<p>ಫಾರೂಕ್ ಅವರು ದುಬೈಗೆ ಹೋಗುವ ಸಲುವಾಗಿ ಮಂಗಳವಾರ ಬೆಳಿಗ್ಗೆ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿದ್ದರು. ಅವರ ಬಳಿ ಇದ್ದ ಕ್ಯಾಬಿನ್ ಲಗೇಜ್ ಪರಿಶೀಲನೆ ವೇಳೆ ಗುಂಡುಗಳು ಪತ್ತೆಯಾಗಿವೆ. ನಿಲ್ದಾಣದ ಸಿಬ್ಬಂದಿ ಈ ವಿಚಾರವನ್ನು ಸಿಐಎಸ್ಎಫ್ ಅಧಿಕಾರಿಗಳಿಗೆ ತಿಳಿಸಿದ್ದರು. ಅವರು ಫಾರೂಕ್ ಅವರನ್ನು ವಿಮಾನ ನಿಲ್ದಾಣದ ಪೊಲೀಸರಿಗೆ ಒಪ್ಪಿಸಿದ್ದರು.</p>.<p>‘ಬಟ್ಟೆಗಳನ್ನು ಬ್ಯಾಗ್ಗೆ ತುಂಬುವ ವೇಳೆಆಕಸ್ಮಿಕವಾಗಿ ಗುಂಡುಗಳು ಸೇರಿಕೊಂಡಿವೆ ಎಂದು ಫಾರೂಕ್ ತಿಳಿಸಿದ್ದಾರೆ. ತಮ್ಮ ಬಳಿ ಬಂದೂಕಿನ ಪರವಾನಗಿ ಇರುವ ವಿಚಾರವನ್ನೂ ಹೇಳಿದ್ದಾರೆ. ಈ ಕುರಿತು ಪರಿಶೀಲನೆ ನಡೆಸಿದಾಗ ಅವರು ಹೇಳಿರುವುದು ಸತ್ಯ ಎಂಬುದು ಮನದಟ್ಟಾಗಿದೆ. ಅವರಿಗೆ ದುಬೈಗೆ ಪ್ರಯಾಣ ಮಾಡಲು ಅನುಮತಿ ನೀಡಿ, ಜೀವಂತ ಗುಂಡುಗಳನ್ನು ಜಪ್ತಿ ಮಾಡಲಾಗಿದೆ’ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಶಾಂತಿನಗರ ವಿಧಾನಸಭಾ ಕ್ಷೇತ್ರದ ಶಾಸಕ ಎನ್.ಎ.ಹ್ಯಾರಿಸ್ ಅವರ ಚಿಕ್ಕಪ್ಪ ಉಮರ್ ಫಾರೂಕ್ ಹ್ಯಾರಿಸ್ ನಲಪಾಡ್ ಅವರ ಬ್ಯಾಗ್ನಲ್ಲಿ ಬಂದೂಕಿನ ಜೀವಂತ ಗುಂಡುಗಳು ಪತ್ತೆಯಾಗಿವೆ.</p>.<p>ಫಾರೂಕ್ ಅವರು ದುಬೈಗೆ ಹೋಗುವ ಸಲುವಾಗಿ ಮಂಗಳವಾರ ಬೆಳಿಗ್ಗೆ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿದ್ದರು. ಅವರ ಬಳಿ ಇದ್ದ ಕ್ಯಾಬಿನ್ ಲಗೇಜ್ ಪರಿಶೀಲನೆ ವೇಳೆ ಗುಂಡುಗಳು ಪತ್ತೆಯಾಗಿವೆ. ನಿಲ್ದಾಣದ ಸಿಬ್ಬಂದಿ ಈ ವಿಚಾರವನ್ನು ಸಿಐಎಸ್ಎಫ್ ಅಧಿಕಾರಿಗಳಿಗೆ ತಿಳಿಸಿದ್ದರು. ಅವರು ಫಾರೂಕ್ ಅವರನ್ನು ವಿಮಾನ ನಿಲ್ದಾಣದ ಪೊಲೀಸರಿಗೆ ಒಪ್ಪಿಸಿದ್ದರು.</p>.<p>‘ಬಟ್ಟೆಗಳನ್ನು ಬ್ಯಾಗ್ಗೆ ತುಂಬುವ ವೇಳೆಆಕಸ್ಮಿಕವಾಗಿ ಗುಂಡುಗಳು ಸೇರಿಕೊಂಡಿವೆ ಎಂದು ಫಾರೂಕ್ ತಿಳಿಸಿದ್ದಾರೆ. ತಮ್ಮ ಬಳಿ ಬಂದೂಕಿನ ಪರವಾನಗಿ ಇರುವ ವಿಚಾರವನ್ನೂ ಹೇಳಿದ್ದಾರೆ. ಈ ಕುರಿತು ಪರಿಶೀಲನೆ ನಡೆಸಿದಾಗ ಅವರು ಹೇಳಿರುವುದು ಸತ್ಯ ಎಂಬುದು ಮನದಟ್ಟಾಗಿದೆ. ಅವರಿಗೆ ದುಬೈಗೆ ಪ್ರಯಾಣ ಮಾಡಲು ಅನುಮತಿ ನೀಡಿ, ಜೀವಂತ ಗುಂಡುಗಳನ್ನು ಜಪ್ತಿ ಮಾಡಲಾಗಿದೆ’ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>