ಮೊದಲಿಗೆ ಸೇಡಂ ಮತ್ತು ದೊಡ್ಡಬಳ್ಳಾಪುರ ತಾಲ್ಲೂಕುಗಳಲ್ಲಿ ಇಂದಿನಿಂದ(ನ. 5) ಪ್ರಾಯೋಗಿಕವಾಗಿ ಸಾಲ ಮನ್ನಾ ಪ್ರಕ್ರಿಯೆ ಪ್ರಾರಂಭಿಸಲಾಗಿದೆ. ಈ ತಾಲ್ಲೂಕುಗಳ ಬ್ಯಾಂಕುಗಳ ಶಾಖೆಗಳು ಮಾಹಿತಿ ಪರಿಶೀಲನೆ ಪೂರ್ಣಗೊಳಿಸಿದ ನಂತರ ನ.12ರಿಂದ ರೈತರು ತಾವು ಸಾಲ ಪಡೆದ ಬ್ಯಾಂಕಿಗೆ ಭೇಟಿ ನೀಡಿ ಆಧಾರ್ ಕಾರ್ಡ್, ರೇಷನ್ ಕಾರ್ಡ್ ಮತ್ತು ಅವರು ಹೊಂದಿರುವ ಕೃಷಿ ಭೂಮಿಯ ಮಾಹಿತಿ ಒದಗಿಸುವಂತೆ ಸೂಚಿಸಲಾಗುವುದು. ನಂತರ ಇತರ ತಾಲ್ಲೂಕುಗಳಲ್ಲಿ ಈ ಪ್ರಕ್ರಿಯೆ ಪ್ರಾರಂಭಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.