ಚಿಕ್ಕಮಗಳೂರು:ಬಿಜೆಪಿಯನ್ನು ದೂರ ಇಡಲು ಸ್ಥಳೀಯ ಸಂಸ್ಥೆಗಳಲ್ಲಿ ಜೆಡಿಎಸ್ ಮತ್ತು ಕಾಂಗ್ರೆಸ್ ಪಕ್ಷಗಳು ಎಲ್ಲೆಲ್ಲಿ ಸಾಧ್ಯ ಇದೆಯೋ ಅಲ್ಲಿ ಹೊಂದಾಣಿಕೆ ಮಾಡಿಕೊಳ್ಳಲಿವೆ ಎಂದು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೇಗೌಡ ಹೇಳಿದರು.
ಜಿಲ್ಲೆಯ ಕಡೂರು ತಾಲ್ಲೂಕಿನ ಯಗಟಿ ಗ್ರಾಮದಲ್ಲಿ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.
ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರ ಇದೆ. ಮೈತ್ರಿ ಪಕ್ಷಗಳಾದ ಕಾಂಗ್ರೆಸ್ ಮತ್ತು ಜೆಡಿಎಸ್ ಒಗ್ಗೂಡಿ ಮುನ್ನಡೆಯಲಿವೆ ಎಂದು ಪ್ರತಿಕ್ರಿಯಿಸಿದರು.
ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಮಹಾನಗರ ಪಾಲಿಕೆ ಮತ್ತು ನಗರ ಸಭೆ, ಪುರಸಭೆಗಳಲ್ಲಿ ಕೆಲವೆಡೆ ಅತಂತ್ರ ಫಲಿತಾಂಶ ಬಂದಿದೆ. ರಾಜ್ಯಮಟ್ಟದಲ್ಲಿ ಮೈತ್ರಿ ಮಾಡಿಕೊಂಡಿರುವ ಎರಡೂ ಪಕ್ಷಗಳು ಸ್ಥಳೀಯಮಟ್ಟದಲ್ಲಿ ಮೈತ್ರಿ ಮಾಡಿಕೊಳ್ಳಲು ಮುಂದಾಗಿರುವ ಕುರಿತು ದೇವೇಗೌಡರು ನೀಡಿದ ಹೇಳಿಕೆ ಮಹತ್ವ ಪಡೆದಿದೆ.