ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಜೆಪಿ ದೂರ ಇಡಲು ಸಾಧ್ಯವಿದ್ದಲ್ಲಿ ಜೆಡಿಎಸ್-ಕಾಂಗ್ರೆಸ್ ಹೊಂದಾಣಿಕೆ: ದೇವೇಗೌಡ

Last Updated 3 ಸೆಪ್ಟೆಂಬರ್ 2018, 10:36 IST
ಅಕ್ಷರ ಗಾತ್ರ

ಚಿಕ್ಕಮಗಳೂರು:ಬಿಜೆಪಿಯನ್ನು ದೂರ ಇಡಲು ಸ್ಥಳೀಯ ಸಂಸ್ಥೆಗಳಲ್ಲಿ ಜೆಡಿಎಸ್ ಮತ್ತು ಕಾಂಗ್ರೆಸ್ ಪಕ್ಷಗಳು ಎಲ್ಲೆಲ್ಲಿ ಸಾಧ್ಯ ಇದೆಯೋ ಅಲ್ಲಿ ಹೊಂದಾಣಿಕೆ ಮಾಡಿಕೊಳ್ಳಲಿವೆ ಎಂದು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೇಗೌಡ ಹೇಳಿದರು.

ಜಿಲ್ಲೆಯ ಕಡೂರು ತಾಲ್ಲೂಕಿನ ಯಗಟಿ ಗ್ರಾಮದಲ್ಲಿ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.

ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರ ಇದೆ. ಮೈತ್ರಿ ಪಕ್ಷಗಳಾದ ಕಾಂಗ್ರೆಸ್ ಮತ್ತು ಜೆಡಿಎಸ್ ಒಗ್ಗೂಡಿ ಮುನ್ನಡೆಯಲಿವೆ ಎಂದು ಪ್ರತಿಕ್ರಿಯಿಸಿದರು.

ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಮಹಾನಗರ ಪಾಲಿಕೆ ಮತ್ತು ನಗರ ಸಭೆ, ಪುರಸಭೆಗಳಲ್ಲಿ ಕೆಲವೆಡೆ ಅತಂತ್ರ ಫಲಿತಾಂಶ ಬಂದಿದೆ. ರಾಜ್ಯಮಟ್ಟದಲ್ಲಿ ಮೈತ್ರಿ ಮಾಡಿಕೊಂಡಿರುವ ಎರಡೂ ಪಕ್ಷಗಳು ಸ್ಥಳೀಯಮಟ್ಟದಲ್ಲಿ ಮೈತ್ರಿ ಮಾಡಿಕೊಳ್ಳಲು ಮುಂದಾಗಿರುವ ಕುರಿತು ದೇವೇಗೌಡರು ನೀಡಿದ ಹೇಳಿಕೆ ಮಹತ್ವ ಪಡೆದಿದೆ.

* ಇವನ್ನೂ ಓದಿ...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT