ರಾಜ್ಯದ ನಗರ ಸ್ಥಳೀಯ ಸಂಸ್ಥೆಗಳಲ್ಲಿ ತ್ಯಾಜ್ಯ ಸಾಗಿಸುವ ವಾಹನ ಚಾಲಕರು, ನೀರಗಂಟಿ, ಡೆಟಾ ಎಂಟ್ರಿ ಆಪರೇಟರ್, ಯುಜಿಡಿ ಕಾರ್ಮಿಕರು ಮತ್ತು ಸಹಾಯಕರಿಗೆ ಸಕಾಲಕ್ಕೆ ಕನಿಷ್ಠ ವೇತನ ಸಿಗುತ್ತಿಲ್ಲ. ಹೊರ ಗುತ್ತಿಗೆ ಹೆಸರಿನಲ್ಲಿ ಸರ್ಕಾರಿ ಜೀತಕ್ಕೆ ಕಾರ್ಮಿಕರನ್ನು ಸಿಲುಕಿಸಲಾಗಿದೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.