<p><strong>ಬೆಂಗಳೂರು:</strong> ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವ ಕಾರಣ ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಗಳಲ್ಲಿ ಘೋಷಿಸಲಾಗಿರುವ ಲಾಕ್ಡೌನ್ ಮತ್ತೆ ಮೂರು ಜಿಲ್ಲೆಗಳಿಗೆ ವಿಸ್ತರಿಸಿದೆ.</p>.<p>ವಿವಿಧ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಜತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಸೋಮವಾರ ವಿಡಿಯೊ ಸಂವಾದ ನಡೆಸಿದರು. ಬಳಿಕ ಆಯಾ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಜಿಲ್ಲಾಧಿಕಾರಿಗಳು ಈ ನಿರ್ಧಾರ ಪ್ರಕಟಿಸಿದರು.ಉಳಿದ ಜಿಲ್ಲೆಗಳಲ್ಲಿ ಲಾಕ್ಡೌನ್ ಮಾಡುವ ಬಗ್ಗೆ ಆಯಾ ಜಿಲ್ಲಾಧಿಕಾರಿಗಳಿಗೇ ಅಧಿಕಾರ ನೀಡಲಾಗಿದೆ.</p>.<p>ದಕ್ಷಿಣ ಕನ್ನಡ, ಧಾರವಾಡ ಜಿಲ್ಲೆಗಳನ್ನು ಲಾಕ್ಡೌನ್ ಮಾಡುವುದಾಗಿ ಜಿಲ್ಲಾ ಉಸ್ತುವಾರಿ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ ಮತ್ತು ಜಗದೀಶ ಶೆಟ್ಟರ್ ಪ್ರಕಟಿಸಿದರು. ಶಿವಮೊಗ್ಗ ಜಿಲ್ಲೆಯನ್ನು ಭಾಗಶಃ ಲಾಕ್ಡೌನ್ ಮಾಡಲಿದ್ದು, ದಿನಾಂಕವನ್ನು ಮಂಗಳವಾರ ನಿರ್ಧರಿಸಲಾಗುತ್ತದೆ.</p>.<p>ಕಲಬುರ್ಗಿ ನಗರ ಮತ್ತು ಜಿಲ್ಲೆಯ ಎಲ್ಲ ತಾಲ್ಲೂಕುಗಳ ನಗರ– ಸ್ಥಳೀಯ ಸಂಸ್ಥೆಗಳ ಪ್ರದೇಶಕ್ಕೆ ಸೀಮಿತವಾಗಿ ಲಾಕ್ಡೌನ್ ಘೋಷಿಸಲಾಗಿದೆ.</p>.<p>‘ಕೋವಿಡ್ ಪ್ರಕರಣಗಳು ಹೆಚ್ಚು ಇರುವ ಜಿಲ್ಲೆಗಳಲ್ಲಿ ಲಾಕ್ಡೌನ್ ಬಗ್ಗೆ ಆಯಾ ಜಿಲ್ಲಾಡಳಿತಗಳು ಉಸ್ತುವಾರಿ ಸಚಿವರ ಜತೆ ಚರ್ಚಿಸಿ ತೀರ್ಮಾನ ತೆಗೆದುಕೊಳ್ಳಬಹುದು’ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸಭೆಯಲ್ಲಿ ತಿಳಿಸಿದರು.</p>.<p>ಸಭೆಯಲ್ಲಿ ಕೆಲವು ಜಿಲ್ಲೆಗಳ ಜಿಲ್ಲಾಧಿಕಾರಿಗಳು ಲಾಕ್ಡೌನ್ ಬೇಡ ಎಂಬ ಅಭಿಪ್ರಾಯ ವ್ಯಕ್ತಪಡಿಸಿದರು. ‘ಮಹಾರಾಷ್ಟ್ರ ಗಡಿ ಬಂದ್ ಮಾಡಿದರೆ ಸಾಕು, ಲಾಕ್ಡೌನ್ ಅಗತ್ಯವಿಲ್ಲ’ ಎಂದು ಬೆಳಗಾವಿ ಜಿಲ್ಲಾಧಿಕಾರಿ ಹೇಳಿದರು.</p>.<p><strong>ಲಾಕ್ಡೌನ್ ಮಾರ್ಗಸೂಚಿ</strong><br />ಮಂಗಳವಾರ ರಾತ್ರಿ 8 ರಿಂದ ಜು.22 ರ ಬೆಳಿಗ್ಗೆ 5 ಗಂಟೆಯವರೆಗೆ ಒಟ್ಟು 7 ದಿನಗಳ ಲಾಕ್ಡೌನ್ ಘೋಷಿಸಿದ್ದು, ಅದರ ಮಾರ್ಗಸೂಚಿ ಈ ರೀತಿ ಇದೆ–</p>.<p><strong>ಏನು ಇರಲಿದೆ (ಕಂಟೇನ್ಮೆಂಟ್ ವಲಯ ಬಿಟ್ಟು):</strong><br />* ಆಸ್ಪತ್ರೆ, ಹಾಲು, ಹಣ್ಣು– ತರಕಾರಿ, ದಿನಸಿ ಪದಾರ್ಥಗಳು, ನೀರು, ನೈರ್ಮಲ್ಯ ಸೇವೆಗಳು<br />* ಬಿಬಿಎಂಪಿ ಕಚೇರಿ ಮತ್ತು ಅಧೀನ ಕಚೇರಿಗಳು, ಪೊಲೀಸ್, ವೈದ್ಯಕೀಯ ಶಿಕ್ಷಣ, ಆರೋಗ್ಯ ಇಲಾಖೆ, ಗೃಹ ರಕ್ಷಕ ದಳ, ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲಾಧಿಕಾರಿ ಕಚೇರಿಗಳು<br />* ವಿಧಾನಸೌಧ, ವಿಕಾಸಸೌಧ, ಬಹುಮಹಡಿ ಕಟ್ಟಡದ ಕಚೇರಿಗಳು (ಶೇ 50 ರಷ್ಟು ಸಿಬ್ಬಂದಿ ಬಳಸಿಕೊಳ್ಳುವುದು)<br />* ನ್ಯಾಯಾಲಯಗಳು, ನ್ಯಾಯಾಂಗಕ್ಕೆ ಸಂಬಂಧಿಸಿದ ಕಚೇರಿಗಳು<br />* ರಾಜ್ಯ ಹುಜೂರ್ ಖಜಾನೆ, ಅಧೀನ ಜಿಲ್ಲಾ ಖಜಾನೆಗಳು<br />* ಅಂಚೆ ಕಚೇರಿ, ಬ್ಯಾಂಕ್ಗಳು ಮತ್ತು ರಿಸರ್ವ್ ಬ್ಯಾಂಕ್<br />* ಆಸ್ಪತ್ರೆ, ನರ್ಸಿಂಗ್ ಹೋಂ, ಕ್ಲಿನಿಕ್, ಲ್ಯಾಬ್<br />* ಔಷಧ ಮತ್ತು ವೈದ್ಯಕೀಯ ಉಪಕರಣಗಳ ತಯಾರಿಕಾ ಘಟಕಗಳು<br />* ಎಲ್ಲ ಕೃಷಿ ಮತ್ತು ತೋಟಗಾರಿಕಾ ಚಟುವಟಿಕೆಗಳು<br />* ಮಕ್ಕಳು, ಅಂಗವಿಕಲರು, ಮಾನಸಿಕ ಅಸ್ವಸ್ಥರು, ಹಿರಿಯ ನಾಗರಿಕರ ಆರೈಕೆ ಸಂಸ್ಥೆಗಳು<br />* ಟ್ರಕ್ಗಳು, ಸರಕು ವಾಹನಗಳ ಸಂಚಾರ</p>.<p><strong>ಏನೇನಿಲ್ಲ:</strong><br />* ಆಟೋರಿಕ್ಷಾ,ಟ್ಯಾಕ್ಸಿ, ಕ್ಯಾಬ್, ಕೆಎಸ್ಆರ್ಟಿಸಿ, ಬಿಎಂಟಿಸಿ, ಖಾಸಗಿ ಬಸ್ಸುಗಳು(ತುರ್ತು ಸಂದರ್ಭಗಳಲ್ಲಿ ಬಳಸುವುದನ್ನು ಹೊರತುಪಡಿಸಿ)<br />* ಶೈಕ್ಷಣಿಕ ಸಂಸ್ಥೆಗಳು, ಶಾಲೆ, ಕಾಲೇಜು, ತರಬೇತಿ, ಕೋಚಿಂಗ್ ಸೆಂಟರ್ಗಳು<br />* ಹೊಟೇಲ್, ರೆಸ್ಟೋರೆಂಟ್ (ಪಾರ್ಸೆಲ್ ಒಯ್ಯಲು ಅವಕಾಶ)<br />* ಸಿನಿಮಾ ಮಂದಿರ, ಶಾಪಿಂಗ್ ಮಾಲ್, ಜಿಮ್ನಾಷಿಯಂ, ಕ್ರೀಡಾ ಸಂಕೀರ್ಣಗಳು, ಸ್ಟೇಡಿಯಂ, ಮನರಂಜನಾ ಉದ್ಯಾನಗಳು<br />* ಬಾರ್ಗಳು</p>.<p><strong>ವಿಸ್ತರಣೆ ಇಲ್ಲ</strong><br />ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಗಳಲ್ಲಿ ವಿಧಿಸಲಾಗಿರುವ ಒಂದು ವಾರದ ಲಾಕ್ಡೌನ್ ವಿಸ್ತರಿಸುವ ಪ್ರಸ್ತಾಪ ಸರ್ಕಾರದ ಮುಂದಿಲ್ಲ. ಜನರು ವದಂತಿಗಳಿಗೆ ಕಿವಿಗೊಡಬಾರದು ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಮನವಿ ಮಾಡಿದ್ದಾರೆ.</p>.<p>ಈ ಜಿಲ್ಲೆಗಳಲ್ಲಿ ಹೆಚ್ಚುತ್ತಿರುವ ಕೋವಿಡ್ ಪ್ರಕರಣಗಳ ನಿಯಂತ್ರಣಕ್ಕಾಗಿ ಲಾಕ್ಡೌನ್ ವಿಧಿಸಲಾಗಿದ್ದು, ಒಂದು ವಾರದೊಳಗೆ ವ್ಯವಸ್ಥೆಗಳನ್ನು ಸರಿಪಡಿಸಿಕೊಂಡು ಎಲ್ಲ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಎಂದು ಟಾಸ್ಕ್ಫೋರ್ಸ್ ಸಭೆಯಲ್ಲಿ ತಿಳಿಸಿದ್ದಾರೆ.</p>.<p><strong>ಯಾವ ಜಿಲ್ಲೆಗಳಲ್ಲಿ</strong><strong>ಎಂದಿನಿಂದ</strong><br /><strong>ದಕ್ಷಿಣ ಕನ್ನಡ ಜಿಲ್ಲೆ</strong> ಜು.16 ರಿಂದ<br /><strong>ಧಾರವಾಡ ಜಿಲ್ಲೆ</strong> ಜು.15 ರಿಂದ<br /><strong>ಕಲಬುರ್ಗಿ ಜಿಲ್ಲೆ</strong> ಜು.14 ರಿಂದ<br />(ಶಿವಮೊಗ್ಗ, ಉಡುಪಿ, ಬೀದರ್ ಜಿಲ್ಲೆಗಳು ಮಂಗಳವಾರ ನಿರ್ಣಯ ತೆಗೆದುಕೊಳ್ಳಲಿವೆ)</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವ ಕಾರಣ ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಗಳಲ್ಲಿ ಘೋಷಿಸಲಾಗಿರುವ ಲಾಕ್ಡೌನ್ ಮತ್ತೆ ಮೂರು ಜಿಲ್ಲೆಗಳಿಗೆ ವಿಸ್ತರಿಸಿದೆ.</p>.<p>ವಿವಿಧ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಜತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಸೋಮವಾರ ವಿಡಿಯೊ ಸಂವಾದ ನಡೆಸಿದರು. ಬಳಿಕ ಆಯಾ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಜಿಲ್ಲಾಧಿಕಾರಿಗಳು ಈ ನಿರ್ಧಾರ ಪ್ರಕಟಿಸಿದರು.ಉಳಿದ ಜಿಲ್ಲೆಗಳಲ್ಲಿ ಲಾಕ್ಡೌನ್ ಮಾಡುವ ಬಗ್ಗೆ ಆಯಾ ಜಿಲ್ಲಾಧಿಕಾರಿಗಳಿಗೇ ಅಧಿಕಾರ ನೀಡಲಾಗಿದೆ.</p>.<p>ದಕ್ಷಿಣ ಕನ್ನಡ, ಧಾರವಾಡ ಜಿಲ್ಲೆಗಳನ್ನು ಲಾಕ್ಡೌನ್ ಮಾಡುವುದಾಗಿ ಜಿಲ್ಲಾ ಉಸ್ತುವಾರಿ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ ಮತ್ತು ಜಗದೀಶ ಶೆಟ್ಟರ್ ಪ್ರಕಟಿಸಿದರು. ಶಿವಮೊಗ್ಗ ಜಿಲ್ಲೆಯನ್ನು ಭಾಗಶಃ ಲಾಕ್ಡೌನ್ ಮಾಡಲಿದ್ದು, ದಿನಾಂಕವನ್ನು ಮಂಗಳವಾರ ನಿರ್ಧರಿಸಲಾಗುತ್ತದೆ.</p>.<p>ಕಲಬುರ್ಗಿ ನಗರ ಮತ್ತು ಜಿಲ್ಲೆಯ ಎಲ್ಲ ತಾಲ್ಲೂಕುಗಳ ನಗರ– ಸ್ಥಳೀಯ ಸಂಸ್ಥೆಗಳ ಪ್ರದೇಶಕ್ಕೆ ಸೀಮಿತವಾಗಿ ಲಾಕ್ಡೌನ್ ಘೋಷಿಸಲಾಗಿದೆ.</p>.<p>‘ಕೋವಿಡ್ ಪ್ರಕರಣಗಳು ಹೆಚ್ಚು ಇರುವ ಜಿಲ್ಲೆಗಳಲ್ಲಿ ಲಾಕ್ಡೌನ್ ಬಗ್ಗೆ ಆಯಾ ಜಿಲ್ಲಾಡಳಿತಗಳು ಉಸ್ತುವಾರಿ ಸಚಿವರ ಜತೆ ಚರ್ಚಿಸಿ ತೀರ್ಮಾನ ತೆಗೆದುಕೊಳ್ಳಬಹುದು’ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸಭೆಯಲ್ಲಿ ತಿಳಿಸಿದರು.</p>.<p>ಸಭೆಯಲ್ಲಿ ಕೆಲವು ಜಿಲ್ಲೆಗಳ ಜಿಲ್ಲಾಧಿಕಾರಿಗಳು ಲಾಕ್ಡೌನ್ ಬೇಡ ಎಂಬ ಅಭಿಪ್ರಾಯ ವ್ಯಕ್ತಪಡಿಸಿದರು. ‘ಮಹಾರಾಷ್ಟ್ರ ಗಡಿ ಬಂದ್ ಮಾಡಿದರೆ ಸಾಕು, ಲಾಕ್ಡೌನ್ ಅಗತ್ಯವಿಲ್ಲ’ ಎಂದು ಬೆಳಗಾವಿ ಜಿಲ್ಲಾಧಿಕಾರಿ ಹೇಳಿದರು.</p>.<p><strong>ಲಾಕ್ಡೌನ್ ಮಾರ್ಗಸೂಚಿ</strong><br />ಮಂಗಳವಾರ ರಾತ್ರಿ 8 ರಿಂದ ಜು.22 ರ ಬೆಳಿಗ್ಗೆ 5 ಗಂಟೆಯವರೆಗೆ ಒಟ್ಟು 7 ದಿನಗಳ ಲಾಕ್ಡೌನ್ ಘೋಷಿಸಿದ್ದು, ಅದರ ಮಾರ್ಗಸೂಚಿ ಈ ರೀತಿ ಇದೆ–</p>.<p><strong>ಏನು ಇರಲಿದೆ (ಕಂಟೇನ್ಮೆಂಟ್ ವಲಯ ಬಿಟ್ಟು):</strong><br />* ಆಸ್ಪತ್ರೆ, ಹಾಲು, ಹಣ್ಣು– ತರಕಾರಿ, ದಿನಸಿ ಪದಾರ್ಥಗಳು, ನೀರು, ನೈರ್ಮಲ್ಯ ಸೇವೆಗಳು<br />* ಬಿಬಿಎಂಪಿ ಕಚೇರಿ ಮತ್ತು ಅಧೀನ ಕಚೇರಿಗಳು, ಪೊಲೀಸ್, ವೈದ್ಯಕೀಯ ಶಿಕ್ಷಣ, ಆರೋಗ್ಯ ಇಲಾಖೆ, ಗೃಹ ರಕ್ಷಕ ದಳ, ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲಾಧಿಕಾರಿ ಕಚೇರಿಗಳು<br />* ವಿಧಾನಸೌಧ, ವಿಕಾಸಸೌಧ, ಬಹುಮಹಡಿ ಕಟ್ಟಡದ ಕಚೇರಿಗಳು (ಶೇ 50 ರಷ್ಟು ಸಿಬ್ಬಂದಿ ಬಳಸಿಕೊಳ್ಳುವುದು)<br />* ನ್ಯಾಯಾಲಯಗಳು, ನ್ಯಾಯಾಂಗಕ್ಕೆ ಸಂಬಂಧಿಸಿದ ಕಚೇರಿಗಳು<br />* ರಾಜ್ಯ ಹುಜೂರ್ ಖಜಾನೆ, ಅಧೀನ ಜಿಲ್ಲಾ ಖಜಾನೆಗಳು<br />* ಅಂಚೆ ಕಚೇರಿ, ಬ್ಯಾಂಕ್ಗಳು ಮತ್ತು ರಿಸರ್ವ್ ಬ್ಯಾಂಕ್<br />* ಆಸ್ಪತ್ರೆ, ನರ್ಸಿಂಗ್ ಹೋಂ, ಕ್ಲಿನಿಕ್, ಲ್ಯಾಬ್<br />* ಔಷಧ ಮತ್ತು ವೈದ್ಯಕೀಯ ಉಪಕರಣಗಳ ತಯಾರಿಕಾ ಘಟಕಗಳು<br />* ಎಲ್ಲ ಕೃಷಿ ಮತ್ತು ತೋಟಗಾರಿಕಾ ಚಟುವಟಿಕೆಗಳು<br />* ಮಕ್ಕಳು, ಅಂಗವಿಕಲರು, ಮಾನಸಿಕ ಅಸ್ವಸ್ಥರು, ಹಿರಿಯ ನಾಗರಿಕರ ಆರೈಕೆ ಸಂಸ್ಥೆಗಳು<br />* ಟ್ರಕ್ಗಳು, ಸರಕು ವಾಹನಗಳ ಸಂಚಾರ</p>.<p><strong>ಏನೇನಿಲ್ಲ:</strong><br />* ಆಟೋರಿಕ್ಷಾ,ಟ್ಯಾಕ್ಸಿ, ಕ್ಯಾಬ್, ಕೆಎಸ್ಆರ್ಟಿಸಿ, ಬಿಎಂಟಿಸಿ, ಖಾಸಗಿ ಬಸ್ಸುಗಳು(ತುರ್ತು ಸಂದರ್ಭಗಳಲ್ಲಿ ಬಳಸುವುದನ್ನು ಹೊರತುಪಡಿಸಿ)<br />* ಶೈಕ್ಷಣಿಕ ಸಂಸ್ಥೆಗಳು, ಶಾಲೆ, ಕಾಲೇಜು, ತರಬೇತಿ, ಕೋಚಿಂಗ್ ಸೆಂಟರ್ಗಳು<br />* ಹೊಟೇಲ್, ರೆಸ್ಟೋರೆಂಟ್ (ಪಾರ್ಸೆಲ್ ಒಯ್ಯಲು ಅವಕಾಶ)<br />* ಸಿನಿಮಾ ಮಂದಿರ, ಶಾಪಿಂಗ್ ಮಾಲ್, ಜಿಮ್ನಾಷಿಯಂ, ಕ್ರೀಡಾ ಸಂಕೀರ್ಣಗಳು, ಸ್ಟೇಡಿಯಂ, ಮನರಂಜನಾ ಉದ್ಯಾನಗಳು<br />* ಬಾರ್ಗಳು</p>.<p><strong>ವಿಸ್ತರಣೆ ಇಲ್ಲ</strong><br />ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಗಳಲ್ಲಿ ವಿಧಿಸಲಾಗಿರುವ ಒಂದು ವಾರದ ಲಾಕ್ಡೌನ್ ವಿಸ್ತರಿಸುವ ಪ್ರಸ್ತಾಪ ಸರ್ಕಾರದ ಮುಂದಿಲ್ಲ. ಜನರು ವದಂತಿಗಳಿಗೆ ಕಿವಿಗೊಡಬಾರದು ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಮನವಿ ಮಾಡಿದ್ದಾರೆ.</p>.<p>ಈ ಜಿಲ್ಲೆಗಳಲ್ಲಿ ಹೆಚ್ಚುತ್ತಿರುವ ಕೋವಿಡ್ ಪ್ರಕರಣಗಳ ನಿಯಂತ್ರಣಕ್ಕಾಗಿ ಲಾಕ್ಡೌನ್ ವಿಧಿಸಲಾಗಿದ್ದು, ಒಂದು ವಾರದೊಳಗೆ ವ್ಯವಸ್ಥೆಗಳನ್ನು ಸರಿಪಡಿಸಿಕೊಂಡು ಎಲ್ಲ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಎಂದು ಟಾಸ್ಕ್ಫೋರ್ಸ್ ಸಭೆಯಲ್ಲಿ ತಿಳಿಸಿದ್ದಾರೆ.</p>.<p><strong>ಯಾವ ಜಿಲ್ಲೆಗಳಲ್ಲಿ</strong><strong>ಎಂದಿನಿಂದ</strong><br /><strong>ದಕ್ಷಿಣ ಕನ್ನಡ ಜಿಲ್ಲೆ</strong> ಜು.16 ರಿಂದ<br /><strong>ಧಾರವಾಡ ಜಿಲ್ಲೆ</strong> ಜು.15 ರಿಂದ<br /><strong>ಕಲಬುರ್ಗಿ ಜಿಲ್ಲೆ</strong> ಜು.14 ರಿಂದ<br />(ಶಿವಮೊಗ್ಗ, ಉಡುಪಿ, ಬೀದರ್ ಜಿಲ್ಲೆಗಳು ಮಂಗಳವಾರ ನಿರ್ಣಯ ತೆಗೆದುಕೊಳ್ಳಲಿವೆ)</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>