<p><strong>ಬೆಂಗಳೂರು</strong>: ‘ಕೋವಿಡ್ ಸೋಂಕು ದೃಢ ಪ್ರಮಾಣ ಶೇ 5ಕ್ಕೆ ಇಳಿಕೆಯಾಗುವ ಜಿಲ್ಲೆಗಳಲ್ಲಿ ಲಾಕ್ಡೌನ್ ನಿರ್ಬಂಧಗಳನ್ನು ಸಡಿಲಿಸುವ ಬಗ್ಗೆ ಅಧಿಕಾರಿಗಳು ಮತ್ತು ಸಚಿವ ಸಂಪುಟದ ಸಹೋದ್ಯೋಗಿಗಳ ಜೊತೆ ಚರ್ಚಿಸಿ, ತೀರ್ಮಾನ ತೆಗೆದುಕೊಳ್ಳಲಾಗುವುದು’ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದರು.</p>.<p>ಸುದ್ದಿಗಾರರ ಜತೆ ಶನಿವಾರ ಮಾತನಾಡಿದ ಅವರು, ‘ಸದ್ಯ ರಾಜ್ಯದಲ್ಲಿ ಜೂನ್ 14ರವರೆಗೆ ಲಾಕ್ಡೌನ್ ವಿಧಿಸಲಾಗಿದೆ. ಕೋವಿಡ್ ದೃಢಪ್ರಮಾಣ ಕಡಿಮೆಯಾಗುತ್ತಿರುವ ಜಿಲ್ಲೆಗಳಿಗೆ ಲಾಕ್ಡೌನ್ನಿಂದ ಯಾವ ಯಾವ ರೀತಿಯಲ್ಲಿ ವಿನಾಯಿತಿ ನೀಡಬಹುದು ಎಂಬ ಬಗ್ಗೆ ಸದ್ಯವೇ ನಿರ್ಧರಿಸಲಾಗುವುದು’ ಎಂದರು.</p>.<p>ರಾಜ್ಯದಲ್ಲಿ ಕೆಲವು ದಿನಗಳಿಂದ ಕೋವಿಡ್ ಪ್ರಕರಣಗಳ ಸಂಖ್ಯೆ ಕಡಿಮೆಯಾಗುತ್ತಿದೆ. ಪ್ರಕರಣಗಳ ಸಂಖ್ಯೆ ಕಡಿಮೆಯಾಗಿರುವ ಮಹಾರಾಷ್ಟ್ರದಲ್ಲಿ ಐದು ಹಂತಗಳಲ್ಲಿ ಲಾಕ್ಡೌನ್ ಸಡಿಲಿಸುತ್ತಿರುವ ಬಗ್ಗೆ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ, ರಾಜ್ಯದಲ್ಲೂ ನಿರ್ಬಂಧಗಳನ್ನು ಸಡಿಲಿಸುವ ಸುಳಿವು ನೀಡಿದರು.</p>.<p class="Subhead">ಶೇ 10ಕ್ಕಿಂತ ಕಡಿಮೆ: ರಾಜ್ಯದಲ್ಲಿ ಒಂದೇ ಸಮನೆ ಏರಿಕೆ ಕಂಡು ಶೇ 50ರ ಗಡಿ ಮುಟ್ಟಿದ್ದ ಕೋವಿಡ್ ದೃಢ ಪ್ರಮಾಣ ದರ ಶನಿವಾರ ಶೇ 9.69ಕ್ಕೆ ಇಳಿದಿದೆ.</p>.<p>ಈ ಬಗ್ಗೆ ಟ್ವೀಟ್ ಮಾಡಿರುವ ಆರೋಗ್ಯ ಸಚಿವ ಡಾ. ಕೆ. ಸುಧಾಕರ್, ‘ಏಪ್ರಿಲ್ 15ರಿಂದೀಚೆಗೆ ಇದೇ ಮೊದಲ ಬಾರಿಗೆ ಕೋವಿಡ್ ದೃಢ ಪ್ರಮಾಣ ಶೇ 10ಕ್ಕಿಂತ ಕಡಿಮೆಯಾಗಿದೆ’ ಎಂದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ‘ಕೋವಿಡ್ ಸೋಂಕು ದೃಢ ಪ್ರಮಾಣ ಶೇ 5ಕ್ಕೆ ಇಳಿಕೆಯಾಗುವ ಜಿಲ್ಲೆಗಳಲ್ಲಿ ಲಾಕ್ಡೌನ್ ನಿರ್ಬಂಧಗಳನ್ನು ಸಡಿಲಿಸುವ ಬಗ್ಗೆ ಅಧಿಕಾರಿಗಳು ಮತ್ತು ಸಚಿವ ಸಂಪುಟದ ಸಹೋದ್ಯೋಗಿಗಳ ಜೊತೆ ಚರ್ಚಿಸಿ, ತೀರ್ಮಾನ ತೆಗೆದುಕೊಳ್ಳಲಾಗುವುದು’ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದರು.</p>.<p>ಸುದ್ದಿಗಾರರ ಜತೆ ಶನಿವಾರ ಮಾತನಾಡಿದ ಅವರು, ‘ಸದ್ಯ ರಾಜ್ಯದಲ್ಲಿ ಜೂನ್ 14ರವರೆಗೆ ಲಾಕ್ಡೌನ್ ವಿಧಿಸಲಾಗಿದೆ. ಕೋವಿಡ್ ದೃಢಪ್ರಮಾಣ ಕಡಿಮೆಯಾಗುತ್ತಿರುವ ಜಿಲ್ಲೆಗಳಿಗೆ ಲಾಕ್ಡೌನ್ನಿಂದ ಯಾವ ಯಾವ ರೀತಿಯಲ್ಲಿ ವಿನಾಯಿತಿ ನೀಡಬಹುದು ಎಂಬ ಬಗ್ಗೆ ಸದ್ಯವೇ ನಿರ್ಧರಿಸಲಾಗುವುದು’ ಎಂದರು.</p>.<p>ರಾಜ್ಯದಲ್ಲಿ ಕೆಲವು ದಿನಗಳಿಂದ ಕೋವಿಡ್ ಪ್ರಕರಣಗಳ ಸಂಖ್ಯೆ ಕಡಿಮೆಯಾಗುತ್ತಿದೆ. ಪ್ರಕರಣಗಳ ಸಂಖ್ಯೆ ಕಡಿಮೆಯಾಗಿರುವ ಮಹಾರಾಷ್ಟ್ರದಲ್ಲಿ ಐದು ಹಂತಗಳಲ್ಲಿ ಲಾಕ್ಡೌನ್ ಸಡಿಲಿಸುತ್ತಿರುವ ಬಗ್ಗೆ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ, ರಾಜ್ಯದಲ್ಲೂ ನಿರ್ಬಂಧಗಳನ್ನು ಸಡಿಲಿಸುವ ಸುಳಿವು ನೀಡಿದರು.</p>.<p class="Subhead">ಶೇ 10ಕ್ಕಿಂತ ಕಡಿಮೆ: ರಾಜ್ಯದಲ್ಲಿ ಒಂದೇ ಸಮನೆ ಏರಿಕೆ ಕಂಡು ಶೇ 50ರ ಗಡಿ ಮುಟ್ಟಿದ್ದ ಕೋವಿಡ್ ದೃಢ ಪ್ರಮಾಣ ದರ ಶನಿವಾರ ಶೇ 9.69ಕ್ಕೆ ಇಳಿದಿದೆ.</p>.<p>ಈ ಬಗ್ಗೆ ಟ್ವೀಟ್ ಮಾಡಿರುವ ಆರೋಗ್ಯ ಸಚಿವ ಡಾ. ಕೆ. ಸುಧಾಕರ್, ‘ಏಪ್ರಿಲ್ 15ರಿಂದೀಚೆಗೆ ಇದೇ ಮೊದಲ ಬಾರಿಗೆ ಕೋವಿಡ್ ದೃಢ ಪ್ರಮಾಣ ಶೇ 10ಕ್ಕಿಂತ ಕಡಿಮೆಯಾಗಿದೆ’ ಎಂದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>