ಬಿಜೆಪಿ ಸಂಸದ ವಿ. ಶ್ರೀನಿವಾಸ ಪ್ರಸಾದ್ ಅವರ ಕಿರಿಯ ಅಳಿಯ ಡಾ. ಎನ್.ಎಸ್. ಮೋಹನ್ ಅವರಿಗೆ ಚಾಮರಾಜನಗರ ಕ್ಷೇತ್ರದ ಬಿಜೆಪಿ ಟಿಕೆಟ್ ಕೈತಪ್ಪಿದೆ. ಈ ಹಿನ್ನೆಲೆಯಲ್ಲಿ ಗುರುವಾರ ಬೆಳಿಗ್ಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿ ಮಾಡಿ ಮೋಹನ್ ಅವರು ಚರ್ಚೆ ನಡೆಸಿರುವುದು ಕುತೂಹಲ ಮೂಡಿಸಿದೆ. ಟಿಕೆಟ್ ನೀಡುವುದಾದರೆ ‘ಕೈ’ ಹಿಡಿಯಲು ಮೋಹನ್ ಮುಂದಾಗಿದ್ದಾರೆ ಎಂದೂ ಹೇಳಲಾಗಿದೆ.