ಕ್ಷೇತ್ರದಲ್ಲಿ ನಡೆದ ಕಾರ್ಯಕ್ರಮಕ್ಕೆ ಸೋಮಶೇಖರ್ ಗೈರು
ಬಿಜೆಪಿಯಿಂದ ಅಂತರ ಕಾಯ್ದುಕೊಂಡಿರುವ ಯಶವಂತಪುರ ಕ್ಷೇತ್ರದ ಶಾಸಕ ಎಸ್.ಟಿ.ಸೋಮಶೇಖರ್ ಕಾರ್ಯಕ್ರಮದಲ್ಲಿ ಭಾಗಿಯಾಗಲಿಲ್ಲ.
ಲೋಕಸಭಾ ಚುನಾವಣೆಗೆ ಮುನ್ನ ಬಿಜೆಪಿಯು ರಾಜ್ಯದಾದ್ಯಂತ ಹಮ್ಮಿಕೊಂಡಿರುವ ‘ಗ್ರಾಮ ಚಲೋ’ ಅಭಿಯಾನಕ್ಕೆ ಯಶವಂತಪುರ ಕ್ಷೇತ್ರದ ಎಚ್.ಗೊಲ್ಲಹಳ್ಳಿಯಲ್ಲಿ ವಿಜಯೇಂದ್ರ ಚಾಲನೆ ನೀಡಿದರು. ಬಿಜೆಪಿಯ ಯಾವುದೇ ಕಾರ್ಯಕ್ರಮದಲ್ಲೂ ಕಾಣಿಸಿಕೊಳ್ಳದ ಸೋಮಶೇಖರ್ ಕ್ಷೇತ್ರದಲ್ಲಿ ನಡೆದ ಪಕ್ಷದ ಅಧ್ಯಕ್ಷರ ಕಾರ್ಯಕ್ರಮದಿಂದಲೂ ದೂರ ಉಳಿದರು.