ಸೋಮವಾರ, 20 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆಪರೇಷನ್ ಹಸ್ತದ ಭೀತಿ: ಯಾರೂ ಬಿಜೆಪಿ ಬಿಡುವುದಿಲ್ಲ ಎಂದ ಬಸವರಾಜ ಬೊಮ್ಮಾಯಿ

Published 19 ಆಗಸ್ಟ್ 2023, 4:50 IST
Last Updated 19 ಆಗಸ್ಟ್ 2023, 4:50 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯ ಸರ್ಕಾರದ ಭ್ರಷ್ಟಾಚಾರ ಮತ್ತು ಕಮಿಷನ್ ದಂಧೆಯ ವಿರುದ್ಧ ಕೇಳಿ ಬರುತ್ತಿರುವ ಆರೋಪದ ಗಮನ ಬೇರೆಡೆ ಸೆಳೆಯಲು ಬಿಜೆಪಿ ಶಾಸಕರ ಪಕ್ಷಾಂತರದ ಅಪಪ್ರಚಾರ ಮಾಡುತ್ತಿದ್ದಾರೆ ಎಂದು ಬಿಜೆಪಿ ಶಾಸಕ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

‘ಎಸ್‌.ಟಿ.ಸೋಮಶೇಖರ್‌, ಶಿವರಾಂ ಹೆಬ್ಬಾರ್ ಜತೆ ಮಾತನಾಡಿದ್ದೇನೆ. ಬಿಜೆಪಿಯ ಯಾವುದೇ ಶಾಸಕರು ಪಕ್ಷ ತೊರೆಯುವುದಿಲ್ಲ. ಶಾಸಕರು ಸ್ಥಳೀಯವಾಗಿರುವ ಸಮಸ್ಯೆಗಳನ್ನು ಹೇಳಿದ್ದಾರೆ. ಅದನ್ನು ರಾಜ್ಯಾಧ್ಯಕ್ಷರ ಗಮನಕ್ಕೆ ತಂದಿದ್ದೇನೆ. ನಾವೆಲ್ಲರೂ ಒಗ್ಗಟ್ಟಾಗಿ ದ್ದೇವೆ. ಕಾಂಗ್ರೆಸ್‌ ವಿರುದ್ಧ ಭ್ರಷ್ಟಾಚಾರ, ಸ್ವಜನ ಪಕ್ಷಪಾತದ ವಿರುದ್ಧ ಅವರ ಶಾಸಕರೇ ದಂಗೆ ಎದ್ದಿರುವುದನ್ನು ಮರೆ ಮಾಚಲು ಪಕ್ಷಾಂತರದ ಸುಳ್ಳು ಕತೆ ಕಟ್ಟುತ್ತಿದ್ದಾರೆ’ ಎಂದರು.

ಇವನ್ನೂ ಓದಿ...

ಆಪರೇಷನ್ ಹಸ್ತ: ರಾಜಕೀಯದಲ್ಲಿ ಏನು ಬೇಕಾದರೂ ಆಗಬಹುದು ಎಂದ ಡಿ.ಕೆ. ಶಿವಕುಮಾರ್‌

ಬಿರುಗಾಳಿ ತಡೆಗೆ ಬಿಜೆಪಿ ಯತ್ನ: ಶಾಸಕರ ಹಿಡಿದಿಡಲು ಅಖಾಡಕ್ಕೆ ಬಿಎಸ್‌ವೈ, ಬೊಮ್ಮಾಯಿ

ಲೋಕಸಭೆ ಚುನಾವಣೆ ಮೇಲೆ ಕಾಂಗ್ರೆಸ್ ಕಣ್ಣು: ’ಮೈತ್ರಿ’ ಮುರಿದವರಿಗೆ ಆಪರೇಷನ್ ಹಸ್ತ?

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT