ನಾಗತಿಹಳ್ಳಿ ಚಂದ್ರಶೇಖರ್ ಅವರ ಪೋಸ್ಟ್ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದ್ದು, ಪರ –ವಿರೋಧದ ಚರ್ಚೆಗೆ ಗ್ರಾಸವಾಗಿದೆ.
ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ–ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಡಾ. ಸಿ.ಎನ್. ಮಂಜುನಾಥ್ ಅವರು ಬಿಜೆಪಿಯಿಂದ ಕಣಕ್ಕಿಳಿಯಲಿದ್ದಾರೆ. ಇತ್ತೀಚೆಗೆ ಬಿಜೆಪಿ ಬಿಡುಗಡೆ ಮಾಡಿರುವ ಪಟ್ಟಿಯಲ್ಲಿ ಕ್ಷೇತ್ರದ ಅಭ್ಯರ್ಥಿಯಾಗಿ ಮಂಜುನಾಥ್ ಹೆಸರನ್ನು ಘೋಷಿಸಲಾಗಿದೆ.
ರಾಜ್ಯದ ಏಕೈಕ ಕಾಂಗ್ರೆಸ್ ಸಂಸದರಾಗಿರುವ ಡಿ.ಕೆ. ಸುರೇಶ್ ಪ್ರತಿನಿಧಿಸುವ ಕ್ಷೇತ್ರವು ಇದೇ ಆಗಿದೆ. ಹಾಗಾಗಿ ಈ ಬಾರಿ ಹೆಚ್ಚು ಪೈಪೋಟಿ ನಿರೀಕ್ಷಿಸಲಾಗುತ್ತಿದೆ.