‘ರಾಜ್ಯ ಸರ್ಕಾರ ದಿವಾಳಿಯಾಗಿದ್ದು, ಗ್ಯಾರಂಟಿ ಯೋಜನೆಗಳು ಸಮರ್ಪಕವಾಗಿ ಜನರಿಗೆ ತಲುಪುತ್ತಿಲ್ಲ. ಗೃಹಲಕ್ಷ್ಮಿ ಯೋಜನೆಯೂ ಶೇ 50ರಷ್ಟು ಮಹಿಳೆಯರಿಗೆ ಮಾತ್ರ ತಲುಪುತ್ತಿದೆ. ಯುವನಿಧಿ ಹಳ್ಳ ಹಿಡಿದಿದೆ. ಶಕ್ತಿ ಯೋಜನೆಯೂ ವಿಫಲವಾಗಿದ್ದು, ಗ್ರಾಮೀಣ ಭಾಗಗಳಿಗೆ ಸಮರ್ಪಕ ಬಸ್ ಇಲ್ಲದೆ ಜನ ತೊಂದರೆ ಅನುಭವಿಸುತ್ತಿದ್ದಾರೆ’ ಎಂದು ಆರೋಪಿಸಿದರು.