ಆಗ ಕುಪಿತರಾದ ಸೋಮಣ್ಣ, ‘ಉಮೇಶ ಶೆಟ್ಟಿ ಎಲ್ಲೋ ಇದ್ದರು. ಪಕ್ಷದ ಸ್ಥಳೀಯ ಮುಖಂಡರ ವಿರೋಧದ ನಡುವೆಯೂ ಅವರನ್ನು ಕರೆತಂದು, ಎರಡು ಸಲ ಪಾಲಿಕೆ ಸದಸ್ಯರನ್ನಾಗಿ ಮಾಡಿದೆ. ಅವರನ್ನು ಬೆಳೆಸಿದೆ. ವಿಧಾನಸಭಾ ಚುನಾವಣೆಯಲ್ಲಿ ಸೋತ ನಂತರ ಕುಗ್ಗಿದ್ದೆ. ಅಂತಹ ಸಂದರ್ಭದಲ್ಲಿ ಅವರು ಇಂತಹ ಹೇಳಿಕೆ ನೀಡಬಾರದಿತ್ತು’ ಎಂದು ಆಕ್ಷೇಪಿಸಿದರು. ಆಗ ರಾಮಮೂರ್ತಿ ಅವರು ಮಧ್ಯ ಪ್ರವೇಶಿಸಿ ಸಮಜಾಯಿಷಿ ನೀಡಲು ಯತ್ನಿಸಿದರು. ಆಗ ಸಚಿವರು, ‘ನೀವು ಈ ವಿಷಯದಲ್ಲಿ ಮಧ್ಯ ಪ್ರವೇಶಿಸುವುದು ಬೇಡ’ ಎಂದು ತಾಕೀತು ಮಾಡಿದರು. ಉಮೇಶ ಶೆಟ್ಟಿ ದೂರದಲ್ಲಿ ನೋಡುತ್ತಾ ನಿಂತರು. ಈ ವೇಳೆ ರಾಜರಾಜೇಶ್ವರಿ ನಗರದ ಶಾಸಕ ಮುನಿರತ್ನ ಮಧ್ಯಪ್ರವೇಶಿಸಿ ಸೋಮಣ್ಣ ಅವರನ್ನು ಸಮಾಧಾನಪಡಿಸಿದರು.