ವಿಚಾರಣೆ ವೇಳೆ ಸಿದ್ದರಾಮಯ್ಯ ಪರ ವಾದ ಮಂಡಿಸಿದ ಹಿರಿಯ ವಕೀಲ ರವಿವರ್ಮ ಕುಮಾರ್, ‘ಸಿದ್ದರಾಮಯ್ಯ ತಮ್ಮ ಕ್ಷೇತ್ರದಲ್ಲಿ ಯಾರಿಗೆ ಯಾವತ್ತು, ಎಲ್ಲಿ, ಎಷ್ಟು ಹೊತ್ತಿಗೆ, ಏನು ಆಮಿಷ ಒಡ್ಡಿದರು ಎಂಬುದಕ್ಕೆ ಅರ್ಜಿದಾರರ ಬಳಿ ಯಾವುದೇ ಪುರಾವೆಗಳಿಲ್ಲ. ಅರ್ಜಿಯಲ್ಲಿ ವಿವರಿಸಲಾಗಿರುವ ಅಂಶಗಳೆಲ್ಲಾ ತಪ್ಪುತಪ್ಪಾಗಿವೆ’ ಎಂದು ಆಕ್ಷೇಪಿಸಿದರು.