<p><strong>ಬೆಂಗಳೂರು</strong>: ಮತದಾರರಿಗೆ ಆಮಿಷ ಒಡ್ಡಲು ರಾಜಕಾರಣಿಗಳಿಗೆ ಪ್ರೆಷರ್ ಕುಕ್ಕರ್ ಪೂರೈಸಿರುವ ಅನುಮಾನದ ಮೇಲೆ ರಾಮನಗರ ಹಾರೋಹಳ್ಳಿ ತಾಲ್ಲೂಕಿನ ಹಾರೋಹಳ್ಳಿ ಕೈಗಾರಿಕಾ ಪ್ರದೇಶದಲ್ಲಿರುವ ಪ್ರೆಷರ್ ಕುಕ್ಕರ್ ತಯಾರಿಕಾ ಕಂಪನಿಯೊಂದಕ್ಕೆ ಆದಾಯ ತೆರಿಗೆ (ಐ.ಟಿ) ಇಲಾಖೆ ಅಧಿಕಾರಿಗಳು ನೋಟಿಸ್ ಜಾರಿ ಮಾಡಿದ್ದಾರೆ.</p>.<p>ಈ ಕಂಪನಿ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಏಳು ದಾಸ್ತಾನು ಕೇಂದ್ರಗಳನ್ನು ಹೊಂದಿದೆ. ಕೆಲವು ತಿಂಗಳುಗಳಿಂದ ತಯಾರಿಸಿರುವ ಕುಕ್ಕರ್ಗಳ ಸಂಖ್ಯೆ, ಸಗಟು ಖರೀದಿದಾರರ ವಿವರ ಒದಗಿಸುವಂತೆ ಐ.ಟಿ ಅಧಿಕಾರಿಗಳು ಸೂಚಿಸಿದ್ದಾರೆ. ಬೆಂಗಳೂರಿನ ಕಚೇರಿಗೆ ವಿಚಾರಣೆಗೆ ಹಾಜರಾಗುವಂತೆಯೂ ಸೂಚಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.</p>.<p>ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ, ಹಾಲಿ ಸಂಸದ ಡಿ.ಕೆ.ಸುರೇಶ್, ಅವರ ಸಹೋದರ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮತದಾರರಿಗೆ ಕುಕ್ಕರ್ ಹಂಚುತ್ತಿದ್ದಾರೆ ಎಂದು ಜೆಡಿಎಸ್ ನಾಯಕ ಎಚ್.ಡಿ.ಕುಮಾರಸ್ವಾಮಿ ಆರೋಪಿಸಿದ್ದು, ಕ್ರಮಕೈಗೊಳ್ಳುವಂತೆ ಕೇಂದ್ರ ಚುನಾವಣಾ ಆಯೋಗವನ್ನು ಆಗ್ರಹಿಸಿದ್ದರು.</p>.<p>ಆಯೋಗದ ಸೂಚನೆಯಂತೆ ಆದಾಯ ತೆರಿಗೆ ಅಧಿಕಾರಿಗಳು ತನಿಖೆ ಆರಂಭಿಸಿದ್ದಾರೆ. ವಿಧಾನಸಭಾ ಚುನಾವಣೆ ಸಂದರ್ಭದಲ್ಲೂ ಈ ಕಂಪನಿ ವಿರುದ್ಧ ದೂರುಗಳಿದ್ದವು. ಆ ಬಳಿಕ ಆದಾಯ ತೆರಿಗೆ ಅಧಿಕಾರಿಗಳು ದಾಳಿಮಾಡಿ, ಶೋಧ ನಡೆಸಿದ್ದರು ಎಂದು ಮೂಲಗಳು ಹೇಳಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಮತದಾರರಿಗೆ ಆಮಿಷ ಒಡ್ಡಲು ರಾಜಕಾರಣಿಗಳಿಗೆ ಪ್ರೆಷರ್ ಕುಕ್ಕರ್ ಪೂರೈಸಿರುವ ಅನುಮಾನದ ಮೇಲೆ ರಾಮನಗರ ಹಾರೋಹಳ್ಳಿ ತಾಲ್ಲೂಕಿನ ಹಾರೋಹಳ್ಳಿ ಕೈಗಾರಿಕಾ ಪ್ರದೇಶದಲ್ಲಿರುವ ಪ್ರೆಷರ್ ಕುಕ್ಕರ್ ತಯಾರಿಕಾ ಕಂಪನಿಯೊಂದಕ್ಕೆ ಆದಾಯ ತೆರಿಗೆ (ಐ.ಟಿ) ಇಲಾಖೆ ಅಧಿಕಾರಿಗಳು ನೋಟಿಸ್ ಜಾರಿ ಮಾಡಿದ್ದಾರೆ.</p>.<p>ಈ ಕಂಪನಿ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಏಳು ದಾಸ್ತಾನು ಕೇಂದ್ರಗಳನ್ನು ಹೊಂದಿದೆ. ಕೆಲವು ತಿಂಗಳುಗಳಿಂದ ತಯಾರಿಸಿರುವ ಕುಕ್ಕರ್ಗಳ ಸಂಖ್ಯೆ, ಸಗಟು ಖರೀದಿದಾರರ ವಿವರ ಒದಗಿಸುವಂತೆ ಐ.ಟಿ ಅಧಿಕಾರಿಗಳು ಸೂಚಿಸಿದ್ದಾರೆ. ಬೆಂಗಳೂರಿನ ಕಚೇರಿಗೆ ವಿಚಾರಣೆಗೆ ಹಾಜರಾಗುವಂತೆಯೂ ಸೂಚಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.</p>.<p>ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ, ಹಾಲಿ ಸಂಸದ ಡಿ.ಕೆ.ಸುರೇಶ್, ಅವರ ಸಹೋದರ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮತದಾರರಿಗೆ ಕುಕ್ಕರ್ ಹಂಚುತ್ತಿದ್ದಾರೆ ಎಂದು ಜೆಡಿಎಸ್ ನಾಯಕ ಎಚ್.ಡಿ.ಕುಮಾರಸ್ವಾಮಿ ಆರೋಪಿಸಿದ್ದು, ಕ್ರಮಕೈಗೊಳ್ಳುವಂತೆ ಕೇಂದ್ರ ಚುನಾವಣಾ ಆಯೋಗವನ್ನು ಆಗ್ರಹಿಸಿದ್ದರು.</p>.<p>ಆಯೋಗದ ಸೂಚನೆಯಂತೆ ಆದಾಯ ತೆರಿಗೆ ಅಧಿಕಾರಿಗಳು ತನಿಖೆ ಆರಂಭಿಸಿದ್ದಾರೆ. ವಿಧಾನಸಭಾ ಚುನಾವಣೆ ಸಂದರ್ಭದಲ್ಲೂ ಈ ಕಂಪನಿ ವಿರುದ್ಧ ದೂರುಗಳಿದ್ದವು. ಆ ಬಳಿಕ ಆದಾಯ ತೆರಿಗೆ ಅಧಿಕಾರಿಗಳು ದಾಳಿಮಾಡಿ, ಶೋಧ ನಡೆಸಿದ್ದರು ಎಂದು ಮೂಲಗಳು ಹೇಳಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>