<p><strong>ಬೆಂಗಳೂರು</strong>: ಕೆ–ರೈಡ್ ವಿಶೇಷ ಉಪ ಆಯುಕ್ತೆ ಬಿ.ವಿ. ವಾಸಂತಿ ಅಮರ್ ಅವರ ಮನೆಯಲ್ಲಿ ಶೋಧ ನಡೆಸಿರುವ ಲೋಕಾಯುಕ್ತ ಪೊಲೀಸರು ₹9.02 ಕೋಟಿ ಮೌಲ್ಯದ ಆಸ್ತಿ ಪತ್ತೆ ಮಾಡಿದ್ದಾರೆ. </p>.<p>ವಾಸಂತಿ ಅವರೂ ಸೇರಿ ರಾಜ್ಯ ಸರ್ಕಾರದ ವಿವಿಧ ಇಲಾಖೆಗಳ 8 ಅಧಿಕಾರಿಗಳ ಮನೆಗಳಲ್ಲಿ ಶೋಧ ನಡೆಸಿ, ಒಟ್ಟು ₹37.41 ಕೋಟಿಯಷ್ಟು ಮೌಲ್ಯದ ಸಂಪತ್ತನ್ನು ಪತ್ತೆ ಮಾಡಲಾಗಿದೆ. ಎಂಟೂ ಅಧಿಕಾರಿಗಳ ಪೈಕಿ ವಾಸಂತಿ ಅವರು ಹೊಂದಿರುವ ಆಸ್ತಿಯ ಮೌಲ್ಯವೇ ಅತಿಹೆಚ್ಚು ಎಂದು ಲೋಕಾಯುಕ್ತ ಪೊಲೀಸರು ತಿಳಿಸಿದ್ದಾರೆ.</p>.<p>‘ನಗರದ ಆರ್.ಟಿ.ನಗರದಲ್ಲಿ ವಾಸಂತಿ ಪ್ರಸ್ತುತ ವಾಸವಿರುವ ಮನೆ, ರಾಜ್ಯದ ವಿವಿಧೆಡೆ ಅವರ ಆಪ್ತರ ಮನೆಗಳು ಸೇರಿ ಒಟ್ಟು ಐದು ಕಡೆ ದಾಳಿ ನಡೆಸಲಾಗಿದೆ. ಅವರ ಹೆಸರಿನಲ್ಲಿ ₹7.40 ಕೋಟಿ ಮೌಲ್ಯದ 4 ವಾಸದ ಮನೆಗಳು, ಮೂರು ನಿವೇಶನಗಳು ಮತ್ತು 3 ಎಕರೆ ಕೃಷಿ ಭೂಮಿ ಹೊಂದಿರುವುದು ಈ ವೇಳೆ ಪತ್ತೆಯಾಗಿದೆ’ ಎಂದು ಮಾಹಿತಿ ನೀಡಿದ್ದಾರೆ.</p>.<p>‘ವಾಸಂತಿ ಮತ್ತು ಅವರ ಕುಟುಂಬದವರ ಹೆಸರಿನಲ್ಲಿ ಮೂರು ಕಾರುಗಳಿದ್ದು, ಅವುಗಳ ಈಗಿನ ಮಾರುಕಟ್ಟೆ ಮೌಲ್ಯ ₹90 ಲಕ್ಷದಷ್ಟಾಗುತ್ತದೆ. ಜತೆಗೆ ಅವರ ಮನೆಯಲ್ಲಿ ಒಟ್ಟು ₹12 ಲಕ್ಷ ಮೌಲ್ಯದ ಚಿನ್ನಾಭರಣಗಳು ಸಿಕ್ಕಿವೆ’ ಎಂದು ತಿಳಿಸಿದ್ದಾರೆ.</p>.<p>ಬೆಂಗಳೂರು ಉತ್ತರ ವಿಭಾಗದ ವಿಶೇಷ ಜಿಲ್ಲಾಧಿಕಾರಿ ಆಗಿದ್ದಾಗ ಸರ್ಕಾರಿ ಜಮೀನೊಂದನ್ನು ಅಕ್ರಮವಾಗಿ ಪರಭಾರೆ ಮಾಡಿದ ಆರೋಪದಲ್ಲಿ ವಾಸಂತಿ ಅವರ ವಿರುದ್ಧ ಕಂದಾಯ ಇಲಾಖೆ ನೀಡಿದ್ದ ದೂರನ್ನು ಆಧರಿಸಿ, ಜುಲೈ 16ರಂದು ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿತ್ತು.</p>.<p><strong>ಒಂದೇ ಮನೆಯಲ್ಲಿ ₹52 ಲಕ್ಷ ನಗದು</strong></p><p>ಕೊಪ್ಪಳ ಜಿಲ್ಲಾ ಕೈಗಾರಿಕಾ ಕೇಂದ್ರದ ಉಪ ನಿರ್ದೇಶಕ ಶೇಖು ಚವ್ಹಾಣ್ ಅವರ ಮನೆಯಲ್ಲಿ ಶೋಧದ ವೇಳೆ ₹52 ಲಕ್ಷದಷ್ಟು ನಗದು ಪತ್ತೆಯಾಗಿದೆ. ನಗದನ್ನು ಎಣಿಕೆ ಮಾಡಲೇ ಹಲವು ತಾಸು ಬೇಕಾಯಿತು ಎಂದು ಲೋಕಾಯುಕ್ತ ಪೊಲೀಸರು ಮಾಹಿತಿ ನೀಡಿದ್ದಾರೆ.</p><p>‘ಬುಧವಾರ ಶೋಧ ನಡೆಸಲಾದ ಎಂಟು ಅಧಿಕಾರಿಗಳ ಪೈಕಿ ಅತ್ಯಂತ ಕಡಿಮೆ ಆಸ್ತಿ ಹೊಂದಿರುವುದ ಶೇಖು ಚವ್ಹಾಣ್ (ಒಟ್ಟು ₹2.47 ಕೋಟಿ). ಆದರೆ ಶೋಧದ ವೇಳೆ ಪತ್ತೆಯಾದ ₹81.89 ಲಕ್ಷದಷ್ಟು ನಗದಿನಲ್ಲಿ ಶೇಖು ಅವರದ್ದೇ ಸಿಂಹಪಾಲು’ ಎಂದಿದ್ದಾರೆ. ಶೇಖು ಅವರಿಗೆ ಸೇರಿದ ಬ್ಯಾಂಕ್ ಖಾತೆಗಳು ಮತ್ತು ಲಾಕರ್ಗಳ ವಿವರ ದೊರೆತಿದ್ದು ಅವುಗಳಲ್ಲಿ ಏನೆಲ್ಲಾ ಇದೆ ಎಂಬುದರ ಬಗ್ಗೆ ತನಿಖೆ ಮುಂದುವರಿಸಲಾಗಿದೆ ಎಂದು ಹೇಳಿದ್ದಾರೆ.</p>.<p><strong>8 ಅಧಿಕಾರಿಗಳ ಬಳಿ ಅಪಾರ ಪ್ರಮಾಣದ ಆಸ್ತಿ ಪತ್ತೆ</strong></p><p>ಲೋಕಾಯುಕ್ತ ಪೊಲೀಸರು ಎಂಟು ಅಧಿಕಾರಿಗಳಿಗೆ ಸೇರಿದ ಒಟ್ಟು 41 ಸ್ಥಳಗಳಲ್ಲಿ ಶೋಧ ನಡೆಸಿದ್ದಾರೆ. ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಸಂಬಂಧ ಈ ಎಲ್ಲ ಅಧಿಕಾರಿಗಳ ವಿರುದ್ಧ ರಾಜ್ಯದ ವಿವಿಧೆಡೆ ಲೋಕಾಯುಕ್ತ ಪೊಲೀಸ್ ಠಾಣೆಗಳಲ್ಲಿ ಪ್ರಕರಣ ದಾಖಲಾಗಿತ್ತು. ₹26.36 ಕೋಟಿಎಂಟೂ ಅಧಿಕಾರಿಗಳ ಬಳಿ ಪತ್ತೆಯಾದ ಸ್ಥಿರಾಸ್ತಿಗಳ ಮೌಲ್ಯ ₹81.89 ಲಕ್ಷನಗದು₹4.85 ಕೋಟಿಚಿನ್ನಾಭರಣಗಳ ಮೌಲ್ಯ ₹2.57 ಕೋಟಿವಾಹನಗಳ ಮೌಲ್ಯ ₹2.81 ಕೋಟಿಗೃಹಬಳಕೆ ವಸ್ತುಗಳು ಬ್ಯಾಂಕ್ ಠೇವಣಿ ಮತ್ತು ಹೂಡಿಕೆಗಳ ಮೌಲ್ಯ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಕೆ–ರೈಡ್ ವಿಶೇಷ ಉಪ ಆಯುಕ್ತೆ ಬಿ.ವಿ. ವಾಸಂತಿ ಅಮರ್ ಅವರ ಮನೆಯಲ್ಲಿ ಶೋಧ ನಡೆಸಿರುವ ಲೋಕಾಯುಕ್ತ ಪೊಲೀಸರು ₹9.02 ಕೋಟಿ ಮೌಲ್ಯದ ಆಸ್ತಿ ಪತ್ತೆ ಮಾಡಿದ್ದಾರೆ. </p>.<p>ವಾಸಂತಿ ಅವರೂ ಸೇರಿ ರಾಜ್ಯ ಸರ್ಕಾರದ ವಿವಿಧ ಇಲಾಖೆಗಳ 8 ಅಧಿಕಾರಿಗಳ ಮನೆಗಳಲ್ಲಿ ಶೋಧ ನಡೆಸಿ, ಒಟ್ಟು ₹37.41 ಕೋಟಿಯಷ್ಟು ಮೌಲ್ಯದ ಸಂಪತ್ತನ್ನು ಪತ್ತೆ ಮಾಡಲಾಗಿದೆ. ಎಂಟೂ ಅಧಿಕಾರಿಗಳ ಪೈಕಿ ವಾಸಂತಿ ಅವರು ಹೊಂದಿರುವ ಆಸ್ತಿಯ ಮೌಲ್ಯವೇ ಅತಿಹೆಚ್ಚು ಎಂದು ಲೋಕಾಯುಕ್ತ ಪೊಲೀಸರು ತಿಳಿಸಿದ್ದಾರೆ.</p>.<p>‘ನಗರದ ಆರ್.ಟಿ.ನಗರದಲ್ಲಿ ವಾಸಂತಿ ಪ್ರಸ್ತುತ ವಾಸವಿರುವ ಮನೆ, ರಾಜ್ಯದ ವಿವಿಧೆಡೆ ಅವರ ಆಪ್ತರ ಮನೆಗಳು ಸೇರಿ ಒಟ್ಟು ಐದು ಕಡೆ ದಾಳಿ ನಡೆಸಲಾಗಿದೆ. ಅವರ ಹೆಸರಿನಲ್ಲಿ ₹7.40 ಕೋಟಿ ಮೌಲ್ಯದ 4 ವಾಸದ ಮನೆಗಳು, ಮೂರು ನಿವೇಶನಗಳು ಮತ್ತು 3 ಎಕರೆ ಕೃಷಿ ಭೂಮಿ ಹೊಂದಿರುವುದು ಈ ವೇಳೆ ಪತ್ತೆಯಾಗಿದೆ’ ಎಂದು ಮಾಹಿತಿ ನೀಡಿದ್ದಾರೆ.</p>.<p>‘ವಾಸಂತಿ ಮತ್ತು ಅವರ ಕುಟುಂಬದವರ ಹೆಸರಿನಲ್ಲಿ ಮೂರು ಕಾರುಗಳಿದ್ದು, ಅವುಗಳ ಈಗಿನ ಮಾರುಕಟ್ಟೆ ಮೌಲ್ಯ ₹90 ಲಕ್ಷದಷ್ಟಾಗುತ್ತದೆ. ಜತೆಗೆ ಅವರ ಮನೆಯಲ್ಲಿ ಒಟ್ಟು ₹12 ಲಕ್ಷ ಮೌಲ್ಯದ ಚಿನ್ನಾಭರಣಗಳು ಸಿಕ್ಕಿವೆ’ ಎಂದು ತಿಳಿಸಿದ್ದಾರೆ.</p>.<p>ಬೆಂಗಳೂರು ಉತ್ತರ ವಿಭಾಗದ ವಿಶೇಷ ಜಿಲ್ಲಾಧಿಕಾರಿ ಆಗಿದ್ದಾಗ ಸರ್ಕಾರಿ ಜಮೀನೊಂದನ್ನು ಅಕ್ರಮವಾಗಿ ಪರಭಾರೆ ಮಾಡಿದ ಆರೋಪದಲ್ಲಿ ವಾಸಂತಿ ಅವರ ವಿರುದ್ಧ ಕಂದಾಯ ಇಲಾಖೆ ನೀಡಿದ್ದ ದೂರನ್ನು ಆಧರಿಸಿ, ಜುಲೈ 16ರಂದು ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿತ್ತು.</p>.<p><strong>ಒಂದೇ ಮನೆಯಲ್ಲಿ ₹52 ಲಕ್ಷ ನಗದು</strong></p><p>ಕೊಪ್ಪಳ ಜಿಲ್ಲಾ ಕೈಗಾರಿಕಾ ಕೇಂದ್ರದ ಉಪ ನಿರ್ದೇಶಕ ಶೇಖು ಚವ್ಹಾಣ್ ಅವರ ಮನೆಯಲ್ಲಿ ಶೋಧದ ವೇಳೆ ₹52 ಲಕ್ಷದಷ್ಟು ನಗದು ಪತ್ತೆಯಾಗಿದೆ. ನಗದನ್ನು ಎಣಿಕೆ ಮಾಡಲೇ ಹಲವು ತಾಸು ಬೇಕಾಯಿತು ಎಂದು ಲೋಕಾಯುಕ್ತ ಪೊಲೀಸರು ಮಾಹಿತಿ ನೀಡಿದ್ದಾರೆ.</p><p>‘ಬುಧವಾರ ಶೋಧ ನಡೆಸಲಾದ ಎಂಟು ಅಧಿಕಾರಿಗಳ ಪೈಕಿ ಅತ್ಯಂತ ಕಡಿಮೆ ಆಸ್ತಿ ಹೊಂದಿರುವುದ ಶೇಖು ಚವ್ಹಾಣ್ (ಒಟ್ಟು ₹2.47 ಕೋಟಿ). ಆದರೆ ಶೋಧದ ವೇಳೆ ಪತ್ತೆಯಾದ ₹81.89 ಲಕ್ಷದಷ್ಟು ನಗದಿನಲ್ಲಿ ಶೇಖು ಅವರದ್ದೇ ಸಿಂಹಪಾಲು’ ಎಂದಿದ್ದಾರೆ. ಶೇಖು ಅವರಿಗೆ ಸೇರಿದ ಬ್ಯಾಂಕ್ ಖಾತೆಗಳು ಮತ್ತು ಲಾಕರ್ಗಳ ವಿವರ ದೊರೆತಿದ್ದು ಅವುಗಳಲ್ಲಿ ಏನೆಲ್ಲಾ ಇದೆ ಎಂಬುದರ ಬಗ್ಗೆ ತನಿಖೆ ಮುಂದುವರಿಸಲಾಗಿದೆ ಎಂದು ಹೇಳಿದ್ದಾರೆ.</p>.<p><strong>8 ಅಧಿಕಾರಿಗಳ ಬಳಿ ಅಪಾರ ಪ್ರಮಾಣದ ಆಸ್ತಿ ಪತ್ತೆ</strong></p><p>ಲೋಕಾಯುಕ್ತ ಪೊಲೀಸರು ಎಂಟು ಅಧಿಕಾರಿಗಳಿಗೆ ಸೇರಿದ ಒಟ್ಟು 41 ಸ್ಥಳಗಳಲ್ಲಿ ಶೋಧ ನಡೆಸಿದ್ದಾರೆ. ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಸಂಬಂಧ ಈ ಎಲ್ಲ ಅಧಿಕಾರಿಗಳ ವಿರುದ್ಧ ರಾಜ್ಯದ ವಿವಿಧೆಡೆ ಲೋಕಾಯುಕ್ತ ಪೊಲೀಸ್ ಠಾಣೆಗಳಲ್ಲಿ ಪ್ರಕರಣ ದಾಖಲಾಗಿತ್ತು. ₹26.36 ಕೋಟಿಎಂಟೂ ಅಧಿಕಾರಿಗಳ ಬಳಿ ಪತ್ತೆಯಾದ ಸ್ಥಿರಾಸ್ತಿಗಳ ಮೌಲ್ಯ ₹81.89 ಲಕ್ಷನಗದು₹4.85 ಕೋಟಿಚಿನ್ನಾಭರಣಗಳ ಮೌಲ್ಯ ₹2.57 ಕೋಟಿವಾಹನಗಳ ಮೌಲ್ಯ ₹2.81 ಕೋಟಿಗೃಹಬಳಕೆ ವಸ್ತುಗಳು ಬ್ಯಾಂಕ್ ಠೇವಣಿ ಮತ್ತು ಹೂಡಿಕೆಗಳ ಮೌಲ್ಯ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>