<p><strong>ಬೆಂಗಳೂರು</strong>: ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಪ್ರಾಧಿಕಾರದ ಹಾಸನ ವಿಭಾಗದ ಕಾರ್ಯಪಾಲಕ ಎಂಜಿನಿಯರ್ ಆರ್.ಜಯಣ್ಣ ಮತ್ತು ಕುಟುಂಬದವರ ಹೆಸರಿನಲ್ಲಿ ಒಟ್ಟು 17 ನಿವೇಶನ ಮತ್ತು 8 ವಾಸದ ಮನೆಗಳು ಇರುವುದನ್ನು ಲೋಕಾಯುಕ್ತ ಪೊಲೀಸರು ಪತ್ತೆ ಮಾಡಿದ್ದಾರೆ.</p>.<p>ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿದ ಆರೋಪದಲ್ಲಿ ವಿವಿಧ ಇಲಾಖೆಗಳ ಐವರು ಅಧಿಕಾರಿಗಳ ಮನೆಗಳ ಮೇಲೆ ಲೋಕಾಯುಕ್ತ ಪೊಲೀಸರು ಮಂಗಳವಾರ ದಾಳಿ ನಡೆಸಿದ್ದು, ಒಟ್ಟು ₹24.46 ಕೋಟಿ ಮೌಲ್ಯದ ಆಸ್ತಿ ಪತ್ತೆ ಮಾಡಿದ್ದಾರೆ.</p>.<p>ರಾಜ್ಯದ ವಿವಿಧ ಲೋಕಾಯುಕ್ತ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿದ್ದ ದೂರುಗಳ ಆಧಾರದ ಮೇಲೆ ಕಾರ್ಯಾಚರಣೆ ರೂಪಿಸಲಾಗಿತ್ತು. ಐವರು ಅಧಿಕಾರಿಗಳಿಗೆ ಸೇರಿದ ಒಟ್ಟು 25 ಸ್ಥಳಗಳಲ್ಲಿ ಏಕಕಾಲಕ್ಕೆ ಶೋಧ ದಾಳಿ ನಡೆಸಲಾಯಿತು ಎಂದು ಲೋಕಾಯುಕ್ತದ ಪ್ರಕಟಣೆ ತಿಳಿಸಿದೆ.</p>.<p>ಆರ್.ಜಯಣ್ಣ ಮತ್ತು ಅವರ ಕುಟುಂಬದವರ ಹೆಸರಿನಲ್ಲಿ ಒಟ್ಟು ₹6.28 ಕೋಟಿ ಮೌಲ್ಯದ ಆಸ್ತಿ ಪತ್ತೆಯಾಗಿದೆ. ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ತೋಟಗಾರಿಕೆ ವಿಭಾಗದ ಹಿರಿಯ ಸಹಾಯಕ ನಿರ್ದೇಶಕ ಕೆ.ಓಂಪ್ರಕಾಶ್ ಮತ್ತು ಕುಟುಂಬದವರಿಗೆ ಸೇರಿದ ₹6.26 ಕೋಟಿ ಮೌಲ್ಯದ ಆಸ್ತಿ ಪತ್ತೆಯಾಗಿದೆ.</p>.<p>ಐವರು ಅಧಿಕಾರಿಗಳಿಗೆ ಸೇರಿದ ಸ್ಥಳಗಳಲ್ಲಿ ನಡೆಸಿದ ದಾಳಿಯ ವೇಳೆ ಒಟ್ಟು ₹20.33 ಕೋಟಿ ಮೌಲ್ಯದ ಸ್ಥಿರಾಸ್ತಿ, ₹97 ಲಕ್ಷ ನಗದು, ₹1.58 ಕೋಟಿ ಮೌಲ್ಯದ ಚಿನ್ನಾಭರಣ, ₹1 ಕೋಟಿ ಮೌಲ್ಯದ ವಾಹನಗಳು, ₹1.42 ಕೋಟಿ ಮೌಲ್ಯದ ಗೃಹಬಳಕೆ ವಸ್ತುಗಳು, ಹೂಡಿಕೆ ಪತ್ರಗಳು ಮತ್ತು ಬ್ಯಾಂಕ್ ಠೇವಣಿ ಪತ್ತೆಯಾಗಿವೆ ಎಂದು ಲೋಕಾಯುಕ್ತವು ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಪ್ರಾಧಿಕಾರದ ಹಾಸನ ವಿಭಾಗದ ಕಾರ್ಯಪಾಲಕ ಎಂಜಿನಿಯರ್ ಆರ್.ಜಯಣ್ಣ ಮತ್ತು ಕುಟುಂಬದವರ ಹೆಸರಿನಲ್ಲಿ ಒಟ್ಟು 17 ನಿವೇಶನ ಮತ್ತು 8 ವಾಸದ ಮನೆಗಳು ಇರುವುದನ್ನು ಲೋಕಾಯುಕ್ತ ಪೊಲೀಸರು ಪತ್ತೆ ಮಾಡಿದ್ದಾರೆ.</p>.<p>ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿದ ಆರೋಪದಲ್ಲಿ ವಿವಿಧ ಇಲಾಖೆಗಳ ಐವರು ಅಧಿಕಾರಿಗಳ ಮನೆಗಳ ಮೇಲೆ ಲೋಕಾಯುಕ್ತ ಪೊಲೀಸರು ಮಂಗಳವಾರ ದಾಳಿ ನಡೆಸಿದ್ದು, ಒಟ್ಟು ₹24.46 ಕೋಟಿ ಮೌಲ್ಯದ ಆಸ್ತಿ ಪತ್ತೆ ಮಾಡಿದ್ದಾರೆ.</p>.<p>ರಾಜ್ಯದ ವಿವಿಧ ಲೋಕಾಯುಕ್ತ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿದ್ದ ದೂರುಗಳ ಆಧಾರದ ಮೇಲೆ ಕಾರ್ಯಾಚರಣೆ ರೂಪಿಸಲಾಗಿತ್ತು. ಐವರು ಅಧಿಕಾರಿಗಳಿಗೆ ಸೇರಿದ ಒಟ್ಟು 25 ಸ್ಥಳಗಳಲ್ಲಿ ಏಕಕಾಲಕ್ಕೆ ಶೋಧ ದಾಳಿ ನಡೆಸಲಾಯಿತು ಎಂದು ಲೋಕಾಯುಕ್ತದ ಪ್ರಕಟಣೆ ತಿಳಿಸಿದೆ.</p>.<p>ಆರ್.ಜಯಣ್ಣ ಮತ್ತು ಅವರ ಕುಟುಂಬದವರ ಹೆಸರಿನಲ್ಲಿ ಒಟ್ಟು ₹6.28 ಕೋಟಿ ಮೌಲ್ಯದ ಆಸ್ತಿ ಪತ್ತೆಯಾಗಿದೆ. ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ತೋಟಗಾರಿಕೆ ವಿಭಾಗದ ಹಿರಿಯ ಸಹಾಯಕ ನಿರ್ದೇಶಕ ಕೆ.ಓಂಪ್ರಕಾಶ್ ಮತ್ತು ಕುಟುಂಬದವರಿಗೆ ಸೇರಿದ ₹6.26 ಕೋಟಿ ಮೌಲ್ಯದ ಆಸ್ತಿ ಪತ್ತೆಯಾಗಿದೆ.</p>.<p>ಐವರು ಅಧಿಕಾರಿಗಳಿಗೆ ಸೇರಿದ ಸ್ಥಳಗಳಲ್ಲಿ ನಡೆಸಿದ ದಾಳಿಯ ವೇಳೆ ಒಟ್ಟು ₹20.33 ಕೋಟಿ ಮೌಲ್ಯದ ಸ್ಥಿರಾಸ್ತಿ, ₹97 ಲಕ್ಷ ನಗದು, ₹1.58 ಕೋಟಿ ಮೌಲ್ಯದ ಚಿನ್ನಾಭರಣ, ₹1 ಕೋಟಿ ಮೌಲ್ಯದ ವಾಹನಗಳು, ₹1.42 ಕೋಟಿ ಮೌಲ್ಯದ ಗೃಹಬಳಕೆ ವಸ್ತುಗಳು, ಹೂಡಿಕೆ ಪತ್ರಗಳು ಮತ್ತು ಬ್ಯಾಂಕ್ ಠೇವಣಿ ಪತ್ತೆಯಾಗಿವೆ ಎಂದು ಲೋಕಾಯುಕ್ತವು ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>