<p><strong>ಬೆಂಗಳೂರು</strong>: ನಗರದ 62 ಅಬಕಾರಿ ವಿಭಾಗ ಕಚೇರಿಗಳ ಮೇಲೆ ಲೋಕಾಯುಕ್ತವು ಮಂಗಳವಾರ ಏಕಕಾಲದಲ್ಲಿ ದಾಳಿ ನಡೆಸಿದೆ. ಈ ವೇಳೆ ಹಲವು ಕಚೇರಿಗಳಲ್ಲಿ ಗಾಂಜಾ, ಗಾಂಜಾ ತುಂಬಿದ ಸಿಗರೇಟ್ ಮತ್ತು ದಾಖಲೆ ಇಲ್ಲದ ಮದ್ಯದ ಬಾಟಲಿಗಳು ಪತ್ತೆಯಾಗಿವೆ. </p>.<p>ಮದ್ಯದಂಗಡಿಗಳ ಪರವಾನಗಿ ಅರ್ಜಿ, ಪರವಾನಗಿ ನವೀಕರಣ ಅರ್ಜಿ, ಸ್ಥಳಾಂತರಕ್ಕೆ ಸಲ್ಲಿಸಿದ ಅರ್ಜಿಗಳು ವಿಲೇವಾರಿ ಆಗುವುದೇ ಇಲ್ಲ ಎಂದು 132 ದೂರುಗಳು ಬಂದಿದ್ದವು. ಈ ಸಂಬಂಧ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಳ್ಳಲಾಗಿತ್ತು. ಪರಿಶೀಲನೆಯ ಭಾಗವಾಗಿ 62 ಕಚೇರಿಗಳಲ್ಲಿ ಮಂಗಳವಾರ ಮಧ್ಯಾಹ್ನ 3 ಗಂಟೆಗೆ ದಾಳಿ ನಡೆಸಲಾಗಿದೆ ಎಂದು ಲೋಕಾಯಕ್ತವು ಮಾಹಿತಿ ನೀಡಿದೆ.</p>.<p>ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್.ಪಾಟೀಲ ಮತ್ತು ಉಪ ಲೋಕಾಯುಕ್ತ ನ್ಯಾಯಮೂರ್ತಿ ಬಿ.ವೀರಪ್ಪ ನೇತೃತ್ವದಲ್ಲಿ ಯಶವಂತಪುರ ಮತ್ತು ಬ್ಯಾಟರಾಯನಪುರ ಅಬಕಾರಿ ಕಚೇರಿಗಳಲ್ಲಿ ದಾಳಿ ನಡೆಸಲಾಗಿದೆ. ‘ಎರಡೂ ಕಚೇರಿಗಳಲ್ಲಿ, ಅಧಿಕಾರಿಗಳ ಕೊಠಡಿಗಳಲ್ಲಿ ದಾಖಲೆ ಇಲ್ಲದ ಮದ್ಯದ ಬಾಟಲಿಗಳು ಮತ್ತು ಸುಮಾರು 1 ಕೆ.ಜಿ.ಯಷ್ಟು ಗಾಂಜಾ ಪತ್ತೆಯಾಗಿದೆ. ಕೆಲವು ಅಧಿಕಾರಿಗಳ ಕೊಠಡಿಗಳಲ್ಲಿ, ಡ್ರಾಯರ್ಗಳಲ್ಲಿ ಗಾಂಜಾ ತುಂಬಿಸಿದ್ದ ಸಿಗರೇಟ್ಗಳು ಪತ್ತೆಯಾಗಿವೆ’ ಎಂದು ನ್ಯಾಯಮೂರ್ತಿ ಬಿ.ವೀರಪ್ಪ ಮಾಹಿತಿ ನೀಡಿದರು.</p>.<p>‘ಅಧಿಕಾರಿಗಳು ಮತ್ತು ನೌಕರರು ಕಚೇರಿಯಲ್ಲೇ ಮದ್ಯ ಸೇವಿಸಿರುವ ಸಾಧ್ಯತೆ ಇದೆ. ಹೀಗಾಗಿಯೇ ಕೆಲವು ಬಾಟಲಿಗಳು ಪೂರ್ತಿ ಖಾಲಿಯಾಗಿದ್ದು, ಕೆಲವು ಬಾಟಲಿಗಳಲ್ಲಿ ಅಲ್ಪ–ಸ್ವಲ್ಪ ಮದ್ಯ ಉಳಿದಿತ್ತು. ಯಶವಂತಪುರ ಕಚೇರಿಯಲ್ಲಿ ಮೂರ್ತಿ ಎಂಬಾತನ ಬ್ಯಾಗ್ನಲ್ಲಿ ಒಂದು ಬಾಟಲಿ ಮದ್ಯ ಇತ್ತು. ಆ ಬಗ್ಗೆ ಕೇಳಿದರೆ, ‘ನನ್ನ ಸ್ನೇಹಿತ ಈ ಬಾಟಲಿ ಕೊಟ್ಟಿದ್ದ. ಅದನ್ನು ಬ್ಯಾಗ್ನಲ್ಲೇ ಇಟ್ಟುಕೊಂಡಿದ್ದೆ’ ಎಂದ. ಆ ಎಲ್ಲ ಬಾಟಲಿಗಳು, ಗಾಂಜಾ ಮತ್ತು ಗಾಂಜಾ ತಂಬಿದ್ದ ಸಿಗರೇಟ್ಗಳನ್ನು ವಶಕ್ಕೆ ಪಡೆಯಲಾಗಿದೆ. ಈ ಬಗ್ಗೆ ವಿವರಣೆ ನೀಡುವಂತೆ ಸೂಚಿಸಲಾಗಿದೆ’ ಎಂದು ಅವರು ಮಾಹಿತಿ ನೀಡಿದರು.</p>.<p>‘ಎರಡೂ ಕಡೆ ಹಲವು ಅಧಿಕಾರಿಗಳು ಕಚೇರಿಯಲ್ಲಿ ಇರಲಿಲ್ಲ. ಕರೆ ಮಾಡಿದರೂ ಸ್ವೀಕರಿಸಲಿಲ್ಲ, ಬದಲಿಗೆ ಫೋನ್ ಸ್ವಿಚ್ ಆಫ್ ಮಾಡಿಕೊಂಡರು. ಯಶವಂತಪುರ ಕಚೇರಿಯಲ್ಲಿ ಹಿರಿಯ ಅಧಿಕಾರಿಗಳು ಕಚೇರಿಗೆ ಬರಲೇ ಇಲ್ಲ. ಎಲ್ಲ ಕಚೇರಿಗಳಲ್ಲಿ ಕಡತಗಳನ್ನು ವಶಕ್ಕೆ ಪಡೆಯಲಾಗಿದೆ’ ಎಂದು ಮಾಹಿತಿ ನೀಡಿದರು. </p>.<p>ಎಲ್ಲ ಕಚೇರಿಗಳಲ್ಲಿ ಶೋಧಕಾರ್ಯ ಮುಂದುವರೆದಿದ್ದು, ವರದಿ ಬಂದ ನಂತರ ಅಧಿಕಾರಿಗಳನ್ನು ವಿಚಾರಣೆಗೆ ಕರೆಸಲಾಗುತ್ತದೆ ಎಂದು ಲೋಕಾಯುಕ್ತವು ಮಾಹಿತಿ ನೀಡಿದೆ. </p>.<p><strong>ಸ್ಕೂಟರ್ ಡಿಕ್ಕಿಯಲ್ಲಿ ₹1 ಲಕ್ಷ</strong> </p><p>‘ಶೋಧ ಕಾರ್ಯದ ವೇಳೆ ಬ್ಯಾಟರಾಯನಪುರ ಅಬಕಾರಿ ಕಚೇರಿಯಲ್ಲಿ ₹2 ಲಕ್ಷ ನಗದು ಪತ್ತೆಯಾಗಿದೆ. ಇದರಲ್ಲಿ ₹ 1 ಲಕ್ಷ ನಗದು ಕಚೇರಿ ಸಿಬ್ಬಂದಿಗೆ ಸೇರಿದ ಸ್ಕೂಟರ್ನ ಡಿಕ್ಕಿಯಲ್ಲಿ ಇತ್ತು’ ಎಂದು ಉಪ ಲೋಕಾಯುಕ್ತರು ಮಾಹಿತಿ ನೀಡಿದರು. ‘ಈ ನಗದಿಗೆ ಸಂಬಂಧಿಸಿದಂತೆ ಅಧಿಕಾರಿಗಳು ಯಾವುದೇ ಮಾಹಿತಿ ನೀಡಿಲ್ಲ. ಕಚೇರಿಯಲ್ಲಿ ದಾಖಲೆಗಳೂ ಇಲ್ಲ. ನಗದನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಈ ಬಗ್ಗೆ ವಿವರಣೆ ನೀಡುವಂತೆ ಸೂಚಿಸಲಾಗಿದೆ’ ಎಂದರು. ‘ಎರಡೂ ಕಚೇರಿಯಲ್ಲಿ ಲೋಕಾಯುಕ್ತಕ್ಕೆ ಸಂಬಂಧಿಸಿದ ಫಲಕಗಳನ್ನು ಪ್ರದರ್ಶಿಸಿಲ್ಲ. ಸಾರ್ವಜನಿಕರು ಲೋಕಾಯುಕ್ತಕ್ಕೆ ದೂರು ನೀಡಲು ಅಗತ್ಯವಾದ ಸಂಪರ್ಕ ಸಂಖ್ಯೆಯನ್ನೂ ಪ್ರದರ್ಶಿಸಿಲ್ಲ. ಈ ಬಗ್ಗೆಯೂ ವಿವರಣೆ ಕೇಳಲಾಗಿದೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ನಗರದ 62 ಅಬಕಾರಿ ವಿಭಾಗ ಕಚೇರಿಗಳ ಮೇಲೆ ಲೋಕಾಯುಕ್ತವು ಮಂಗಳವಾರ ಏಕಕಾಲದಲ್ಲಿ ದಾಳಿ ನಡೆಸಿದೆ. ಈ ವೇಳೆ ಹಲವು ಕಚೇರಿಗಳಲ್ಲಿ ಗಾಂಜಾ, ಗಾಂಜಾ ತುಂಬಿದ ಸಿಗರೇಟ್ ಮತ್ತು ದಾಖಲೆ ಇಲ್ಲದ ಮದ್ಯದ ಬಾಟಲಿಗಳು ಪತ್ತೆಯಾಗಿವೆ. </p>.<p>ಮದ್ಯದಂಗಡಿಗಳ ಪರವಾನಗಿ ಅರ್ಜಿ, ಪರವಾನಗಿ ನವೀಕರಣ ಅರ್ಜಿ, ಸ್ಥಳಾಂತರಕ್ಕೆ ಸಲ್ಲಿಸಿದ ಅರ್ಜಿಗಳು ವಿಲೇವಾರಿ ಆಗುವುದೇ ಇಲ್ಲ ಎಂದು 132 ದೂರುಗಳು ಬಂದಿದ್ದವು. ಈ ಸಂಬಂಧ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಳ್ಳಲಾಗಿತ್ತು. ಪರಿಶೀಲನೆಯ ಭಾಗವಾಗಿ 62 ಕಚೇರಿಗಳಲ್ಲಿ ಮಂಗಳವಾರ ಮಧ್ಯಾಹ್ನ 3 ಗಂಟೆಗೆ ದಾಳಿ ನಡೆಸಲಾಗಿದೆ ಎಂದು ಲೋಕಾಯಕ್ತವು ಮಾಹಿತಿ ನೀಡಿದೆ.</p>.<p>ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್.ಪಾಟೀಲ ಮತ್ತು ಉಪ ಲೋಕಾಯುಕ್ತ ನ್ಯಾಯಮೂರ್ತಿ ಬಿ.ವೀರಪ್ಪ ನೇತೃತ್ವದಲ್ಲಿ ಯಶವಂತಪುರ ಮತ್ತು ಬ್ಯಾಟರಾಯನಪುರ ಅಬಕಾರಿ ಕಚೇರಿಗಳಲ್ಲಿ ದಾಳಿ ನಡೆಸಲಾಗಿದೆ. ‘ಎರಡೂ ಕಚೇರಿಗಳಲ್ಲಿ, ಅಧಿಕಾರಿಗಳ ಕೊಠಡಿಗಳಲ್ಲಿ ದಾಖಲೆ ಇಲ್ಲದ ಮದ್ಯದ ಬಾಟಲಿಗಳು ಮತ್ತು ಸುಮಾರು 1 ಕೆ.ಜಿ.ಯಷ್ಟು ಗಾಂಜಾ ಪತ್ತೆಯಾಗಿದೆ. ಕೆಲವು ಅಧಿಕಾರಿಗಳ ಕೊಠಡಿಗಳಲ್ಲಿ, ಡ್ರಾಯರ್ಗಳಲ್ಲಿ ಗಾಂಜಾ ತುಂಬಿಸಿದ್ದ ಸಿಗರೇಟ್ಗಳು ಪತ್ತೆಯಾಗಿವೆ’ ಎಂದು ನ್ಯಾಯಮೂರ್ತಿ ಬಿ.ವೀರಪ್ಪ ಮಾಹಿತಿ ನೀಡಿದರು.</p>.<p>‘ಅಧಿಕಾರಿಗಳು ಮತ್ತು ನೌಕರರು ಕಚೇರಿಯಲ್ಲೇ ಮದ್ಯ ಸೇವಿಸಿರುವ ಸಾಧ್ಯತೆ ಇದೆ. ಹೀಗಾಗಿಯೇ ಕೆಲವು ಬಾಟಲಿಗಳು ಪೂರ್ತಿ ಖಾಲಿಯಾಗಿದ್ದು, ಕೆಲವು ಬಾಟಲಿಗಳಲ್ಲಿ ಅಲ್ಪ–ಸ್ವಲ್ಪ ಮದ್ಯ ಉಳಿದಿತ್ತು. ಯಶವಂತಪುರ ಕಚೇರಿಯಲ್ಲಿ ಮೂರ್ತಿ ಎಂಬಾತನ ಬ್ಯಾಗ್ನಲ್ಲಿ ಒಂದು ಬಾಟಲಿ ಮದ್ಯ ಇತ್ತು. ಆ ಬಗ್ಗೆ ಕೇಳಿದರೆ, ‘ನನ್ನ ಸ್ನೇಹಿತ ಈ ಬಾಟಲಿ ಕೊಟ್ಟಿದ್ದ. ಅದನ್ನು ಬ್ಯಾಗ್ನಲ್ಲೇ ಇಟ್ಟುಕೊಂಡಿದ್ದೆ’ ಎಂದ. ಆ ಎಲ್ಲ ಬಾಟಲಿಗಳು, ಗಾಂಜಾ ಮತ್ತು ಗಾಂಜಾ ತಂಬಿದ್ದ ಸಿಗರೇಟ್ಗಳನ್ನು ವಶಕ್ಕೆ ಪಡೆಯಲಾಗಿದೆ. ಈ ಬಗ್ಗೆ ವಿವರಣೆ ನೀಡುವಂತೆ ಸೂಚಿಸಲಾಗಿದೆ’ ಎಂದು ಅವರು ಮಾಹಿತಿ ನೀಡಿದರು.</p>.<p>‘ಎರಡೂ ಕಡೆ ಹಲವು ಅಧಿಕಾರಿಗಳು ಕಚೇರಿಯಲ್ಲಿ ಇರಲಿಲ್ಲ. ಕರೆ ಮಾಡಿದರೂ ಸ್ವೀಕರಿಸಲಿಲ್ಲ, ಬದಲಿಗೆ ಫೋನ್ ಸ್ವಿಚ್ ಆಫ್ ಮಾಡಿಕೊಂಡರು. ಯಶವಂತಪುರ ಕಚೇರಿಯಲ್ಲಿ ಹಿರಿಯ ಅಧಿಕಾರಿಗಳು ಕಚೇರಿಗೆ ಬರಲೇ ಇಲ್ಲ. ಎಲ್ಲ ಕಚೇರಿಗಳಲ್ಲಿ ಕಡತಗಳನ್ನು ವಶಕ್ಕೆ ಪಡೆಯಲಾಗಿದೆ’ ಎಂದು ಮಾಹಿತಿ ನೀಡಿದರು. </p>.<p>ಎಲ್ಲ ಕಚೇರಿಗಳಲ್ಲಿ ಶೋಧಕಾರ್ಯ ಮುಂದುವರೆದಿದ್ದು, ವರದಿ ಬಂದ ನಂತರ ಅಧಿಕಾರಿಗಳನ್ನು ವಿಚಾರಣೆಗೆ ಕರೆಸಲಾಗುತ್ತದೆ ಎಂದು ಲೋಕಾಯುಕ್ತವು ಮಾಹಿತಿ ನೀಡಿದೆ. </p>.<p><strong>ಸ್ಕೂಟರ್ ಡಿಕ್ಕಿಯಲ್ಲಿ ₹1 ಲಕ್ಷ</strong> </p><p>‘ಶೋಧ ಕಾರ್ಯದ ವೇಳೆ ಬ್ಯಾಟರಾಯನಪುರ ಅಬಕಾರಿ ಕಚೇರಿಯಲ್ಲಿ ₹2 ಲಕ್ಷ ನಗದು ಪತ್ತೆಯಾಗಿದೆ. ಇದರಲ್ಲಿ ₹ 1 ಲಕ್ಷ ನಗದು ಕಚೇರಿ ಸಿಬ್ಬಂದಿಗೆ ಸೇರಿದ ಸ್ಕೂಟರ್ನ ಡಿಕ್ಕಿಯಲ್ಲಿ ಇತ್ತು’ ಎಂದು ಉಪ ಲೋಕಾಯುಕ್ತರು ಮಾಹಿತಿ ನೀಡಿದರು. ‘ಈ ನಗದಿಗೆ ಸಂಬಂಧಿಸಿದಂತೆ ಅಧಿಕಾರಿಗಳು ಯಾವುದೇ ಮಾಹಿತಿ ನೀಡಿಲ್ಲ. ಕಚೇರಿಯಲ್ಲಿ ದಾಖಲೆಗಳೂ ಇಲ್ಲ. ನಗದನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಈ ಬಗ್ಗೆ ವಿವರಣೆ ನೀಡುವಂತೆ ಸೂಚಿಸಲಾಗಿದೆ’ ಎಂದರು. ‘ಎರಡೂ ಕಚೇರಿಯಲ್ಲಿ ಲೋಕಾಯುಕ್ತಕ್ಕೆ ಸಂಬಂಧಿಸಿದ ಫಲಕಗಳನ್ನು ಪ್ರದರ್ಶಿಸಿಲ್ಲ. ಸಾರ್ವಜನಿಕರು ಲೋಕಾಯುಕ್ತಕ್ಕೆ ದೂರು ನೀಡಲು ಅಗತ್ಯವಾದ ಸಂಪರ್ಕ ಸಂಖ್ಯೆಯನ್ನೂ ಪ್ರದರ್ಶಿಸಿಲ್ಲ. ಈ ಬಗ್ಗೆಯೂ ವಿವರಣೆ ಕೇಳಲಾಗಿದೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>