<p><strong>ಬೆಂಗಳೂರು:</strong> ಗುತ್ತಿಗೆದಾರರೊಬ್ಬರ ಬಿಲ್ ಪಾಸು ಮಾಡಲು ₹10 ಲಕ್ಷ ಲಂಚ ಪಡೆಯುತ್ತಿದ್ದ ವೇಳೆ ಬಿಬಿಎಂಪಿಯ ಕಾರ್ಯಪಾಲಕ ಎಂಜಿನಿಯರ್ ಎಚ್.ವಿ.ಯರಪ್ಪ ರೆಡ್ಡಿ ಅವರನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ.</p>.<p>‘ಗುತ್ತಿಗೆದಾರ ಹೇಮಂತ್ ಜಿ.ಎಂ. ಅವರು ಬಿಬಿಎಂಪಿಯ ಸಿ.ವಿ.ರಾಮನ್ ನಗರ ವಿಭಾಗದಲ್ಲಿ ಹಲವು ಕಾಮಗಾರಿಗಳನ್ನು ನಡೆಸಿದ್ದು, ಬಿಲ್ ಪಾವತಿ ಬಾಕಿ ಇದೆ. ಬಿಲ್ ಪಾವತಿಗೆ ಕ್ರಮ ತೆಗೆದುಕೊಳ್ಳುವಂತೆ ಕಾರ್ಯಪಾಲಕ ಎಂಜಿನಿಯರ್ ಯರಪ್ಪ ರೆಡ್ಡಿ ಅವರನ್ನು ಭೇಟಿ ಮಾಡಿದಾಗ, ₹10 ಲಕ್ಷ ಲಂಚ ನೀಡುವಂತೆ ಬೇಡಿಕೆ ಸಲ್ಲಿಸಿದ್ದರು’ ಎಂದು ಲೋಕಾಯುಕ್ತದ ಪ್ರಕಟಣೆ ತಿಳಿಸಿದೆ.</p>.<p>‘ಗುತ್ತಿಗೆದಾರ ಹೇಮಂತ್ ಅವರು ನೀಡಿದ ದೂರಿನ ಆಧಾರದಲ್ಲಿ ಕಾರ್ಯಾಚರಣೆ ರೂಪಿಸಲಾಗಿತ್ತು. ಅದರಂತೆ ಹೇಮಂತ್ ಅವರು ಬುಧವಾರ ಯರಪ್ಪ ರೆಡ್ಡಿ ಅವರನ್ನು ಭೇಟಿ ಮಾಡಿ ₹10 ಲಕ್ಷ ನೀಡಿದ್ದರು. ಆಗ ದಾಳಿ ನಡೆಸಿ, ಅವರನ್ನು ಬಂಧಿಸಲಾಯಿತು’ ಎಂದು ಮಾಹಿತಿ ನೀಡಿದೆ.</p>.<p>‘ಲೋಕಾಯುಕ್ತ ಡಿವೈಎಸ್ಪಿ ಬಿ.ಎಲ್.ಶ್ರೀನಿವಾಸಮೂರ್ತಿ, ನೇತೃತ್ವದಲ್ಲಿ ಪಿ.ಐಗಳಾದ ಎಚ್.ಎಂ.ಆನಂದ್, ಗೋವಿಂದರಾಜು ಮತ್ತು ಇತರ ಸಿಬ್ಬಂದಿ ಕಾರ್ಯಾಚರಣೆ ನಡೆಸಿದ್ದರು. ಆರೋಪಿಯಿಂದ ₹10 ಲಕ್ಷ ವಶಕ್ಕೆ ಪಡೆದಿದ್ದು, ತನಿಖೆ ಮುಂದುವರಿಸಲಾಗಿದೆ’ ಎಂದು ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಗುತ್ತಿಗೆದಾರರೊಬ್ಬರ ಬಿಲ್ ಪಾಸು ಮಾಡಲು ₹10 ಲಕ್ಷ ಲಂಚ ಪಡೆಯುತ್ತಿದ್ದ ವೇಳೆ ಬಿಬಿಎಂಪಿಯ ಕಾರ್ಯಪಾಲಕ ಎಂಜಿನಿಯರ್ ಎಚ್.ವಿ.ಯರಪ್ಪ ರೆಡ್ಡಿ ಅವರನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ.</p>.<p>‘ಗುತ್ತಿಗೆದಾರ ಹೇಮಂತ್ ಜಿ.ಎಂ. ಅವರು ಬಿಬಿಎಂಪಿಯ ಸಿ.ವಿ.ರಾಮನ್ ನಗರ ವಿಭಾಗದಲ್ಲಿ ಹಲವು ಕಾಮಗಾರಿಗಳನ್ನು ನಡೆಸಿದ್ದು, ಬಿಲ್ ಪಾವತಿ ಬಾಕಿ ಇದೆ. ಬಿಲ್ ಪಾವತಿಗೆ ಕ್ರಮ ತೆಗೆದುಕೊಳ್ಳುವಂತೆ ಕಾರ್ಯಪಾಲಕ ಎಂಜಿನಿಯರ್ ಯರಪ್ಪ ರೆಡ್ಡಿ ಅವರನ್ನು ಭೇಟಿ ಮಾಡಿದಾಗ, ₹10 ಲಕ್ಷ ಲಂಚ ನೀಡುವಂತೆ ಬೇಡಿಕೆ ಸಲ್ಲಿಸಿದ್ದರು’ ಎಂದು ಲೋಕಾಯುಕ್ತದ ಪ್ರಕಟಣೆ ತಿಳಿಸಿದೆ.</p>.<p>‘ಗುತ್ತಿಗೆದಾರ ಹೇಮಂತ್ ಅವರು ನೀಡಿದ ದೂರಿನ ಆಧಾರದಲ್ಲಿ ಕಾರ್ಯಾಚರಣೆ ರೂಪಿಸಲಾಗಿತ್ತು. ಅದರಂತೆ ಹೇಮಂತ್ ಅವರು ಬುಧವಾರ ಯರಪ್ಪ ರೆಡ್ಡಿ ಅವರನ್ನು ಭೇಟಿ ಮಾಡಿ ₹10 ಲಕ್ಷ ನೀಡಿದ್ದರು. ಆಗ ದಾಳಿ ನಡೆಸಿ, ಅವರನ್ನು ಬಂಧಿಸಲಾಯಿತು’ ಎಂದು ಮಾಹಿತಿ ನೀಡಿದೆ.</p>.<p>‘ಲೋಕಾಯುಕ್ತ ಡಿವೈಎಸ್ಪಿ ಬಿ.ಎಲ್.ಶ್ರೀನಿವಾಸಮೂರ್ತಿ, ನೇತೃತ್ವದಲ್ಲಿ ಪಿ.ಐಗಳಾದ ಎಚ್.ಎಂ.ಆನಂದ್, ಗೋವಿಂದರಾಜು ಮತ್ತು ಇತರ ಸಿಬ್ಬಂದಿ ಕಾರ್ಯಾಚರಣೆ ನಡೆಸಿದ್ದರು. ಆರೋಪಿಯಿಂದ ₹10 ಲಕ್ಷ ವಶಕ್ಕೆ ಪಡೆದಿದ್ದು, ತನಿಖೆ ಮುಂದುವರಿಸಲಾಗಿದೆ’ ಎಂದು ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>