<p><strong>ಬೆಂಗಳೂರು</strong>: ಬಳ್ಳಾರಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಲೋಕೋಪಯೋಗಿ ಇಲಾಖೆಯ ಸೂಪರಿಂಟೆಂಡೆಂಟ್ ಎಂಜಿನಿಯರ್ ಅಮಿನ್ ಮುಕ್ತರ್ ಅಹಮದ್ ಹೆಸರಿನಲ್ಲಿ 31 ನಿವೇಶನ, ಲೋಕೋಪಯೋಗಿ ಉತ್ತರ ವಲಯದ ಸಂಪರ್ಕ ಮತ್ತು ಕಟ್ಟಡ ವಿಭಾಗದ ಮುಖ್ಯ ಎಂಜಿನಿಯರ್ ಎಚ್.ಸುರೇಶ್ ಮತ್ತು ಕುಟುಂಬದವರ ಹೆಸರಿನಲ್ಲಿ 6 ವಾಣಿಜ್ಯ ಸಂಕೀರ್ಣಗಳು...</p>.<p>ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಸಿದ ಪ್ರಕರಣದಲ್ಲಿ ರಾಜ್ಯ ಸರ್ಕಾರದ ವಿವಿಧ ಇಲಾಖೆಗಳ ಅಧಿಕಾರಿಗಳ ಮನೆ ಮತ್ತು ಕಚೇರಿ ಮೇಲೆ ದಾಳಿ ನಡೆಸಿ ಲೋಕಾಯುಕ್ತ ಪೊಲೀಸರು ಪತ್ತೆ ಮಾಡಿರುವ ಆಸ್ತಿಗಳಲ್ಲಿ ಕೆಲ ವಿವರಗಳಿವು.</p>.<p>ಈ ಇಬ್ಬರೂ ಸೇರಿ ಒಟ್ಟು ಏಳು ಅಧಿಕಾರಿಗಳಿಗೆ ಸೇರಿದ ಒಟ್ಟು 33 ಸ್ಥಳಗಳ ಮೇಲೆ ಲೋಕಾಯುಕ್ತ ಪೊಲೀಸರು ಶನಿವಾರ ಬೆಳಿಗ್ಗೆಯೇ ದಾಳಿ ನಡೆಸಿ, ಶೋಧ ಕಾರ್ಯ ಆರಂಭಿಸಿದ್ದರು. ಲೋಕಾಯುಕ್ತ ಪೊಲೀಸರು, ಏಳೂ ಅಧಿಕಾರಿಗಳಿಗೆ ಸಂಬಂಧಿಸಿದ ಸ್ಥಳಗಳಿಂದ ₹17.92 ಕೋಟಿ ಮೌಲ್ಯದ ಸ್ಥಿರಾಸ್ತಿ, ₹2.24ಕೋಟಿ ಮೌಲ್ಯದ ಚಿನ್ನಾಭರಣಗಳು ಸೇರಿ ಒಟ್ಟು ₹24.47 ಕೋಟಿ ಮೌಲ್ಯದ ಆಸ್ತಿ ಪತ್ತೆ ಮಾಡಿದ್ದಾರೆ. </p>.<p>ಅಮಿನ್ ಮುಕ್ತರ್ ಅಹಮದ್ ಅವರಿಗೆ ಸೇರಿದ 5 ಸ್ಥಳಗಳಲ್ಲಿ ಶೋಧ ನಡೆಸಲಾಯಿತು. ಅಮಿನ್ ಮತ್ತು ಅವರ ಕುಟುಂಬದವರ ಹೆಸರಿನಲ್ಲಿ ಒಟ್ಟು ನಿವೇಶನಗಳೂ ಸೇರಿ ₹5.71 ಕೋಟಿ ಮೌಲ್ಯದ ಸ್ಥಿರಾಸ್ತಿ ಪತ್ತೆಯಾಗಿದೆ. ಶನಿವಾರದ ದಾಳಿಯಲ್ಲಿ ಅತಿಹೆಚ್ಚು ಆಸ್ತಿ (₹7.32 ಕೋಟಿ) ಪತ್ತೆಯಾಗಿದ್ದೂ ಅಮಿನ್ ಅವರ ಬಳಿಯಲ್ಲೇ. </p>.<p>ಎಚ್.ಸುರೇಶ್ ಅವರಿಗೆ ಶನಿವಾರ ನಿವೃತ್ತಿಯ ದಿನವಾಗಿತ್ತು. ಇದಕ್ಕಾಗಿ ಅವರ ಸಹೋದ್ಯೋಗಿಗಳು ಬೀಳ್ಕೊಡುಗೆ ಸಮಾರಂಭ ಏರ್ಪಡಿಸಿದ್ದರು. ಆದರೆ ಅವರ ಮನೆಗೆ ಬೆಳಿಗ್ಗೆಯೇ ಬಂದ ಲೋಕಾಯುಕ್ತ ಪೊಲೀಸರು, ಶೋಧ ಕಾರ್ಯ ಆರಂಭಿಸಿದರು. 6 ವಾಣಿಜ್ಯ ಸಂಕೀರ್ಣಗಳು, 2 ಮನೆ, 2 ನಿವೇಶನ, ₹1.65 ಕೋಟಿ ಮೊತ್ತದ ಬ್ಯಾಂಕ್ ಠೇವಣಿಗಳು ಪತ್ತೆಯಾದವು.</p>.ಲೋಕಾಯುಕ್ತ ಪೊಲೀಸರ ದಾಳಿ: ಕೋಟಿ ಮೌಲ್ಯದ ಸ್ಥಿರಾಸ್ತಿ, ಅಗಾಧ ಚಿನ್ನಾಭರಣ ಪತ್ತೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಬಳ್ಳಾರಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಲೋಕೋಪಯೋಗಿ ಇಲಾಖೆಯ ಸೂಪರಿಂಟೆಂಡೆಂಟ್ ಎಂಜಿನಿಯರ್ ಅಮಿನ್ ಮುಕ್ತರ್ ಅಹಮದ್ ಹೆಸರಿನಲ್ಲಿ 31 ನಿವೇಶನ, ಲೋಕೋಪಯೋಗಿ ಉತ್ತರ ವಲಯದ ಸಂಪರ್ಕ ಮತ್ತು ಕಟ್ಟಡ ವಿಭಾಗದ ಮುಖ್ಯ ಎಂಜಿನಿಯರ್ ಎಚ್.ಸುರೇಶ್ ಮತ್ತು ಕುಟುಂಬದವರ ಹೆಸರಿನಲ್ಲಿ 6 ವಾಣಿಜ್ಯ ಸಂಕೀರ್ಣಗಳು...</p>.<p>ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಸಿದ ಪ್ರಕರಣದಲ್ಲಿ ರಾಜ್ಯ ಸರ್ಕಾರದ ವಿವಿಧ ಇಲಾಖೆಗಳ ಅಧಿಕಾರಿಗಳ ಮನೆ ಮತ್ತು ಕಚೇರಿ ಮೇಲೆ ದಾಳಿ ನಡೆಸಿ ಲೋಕಾಯುಕ್ತ ಪೊಲೀಸರು ಪತ್ತೆ ಮಾಡಿರುವ ಆಸ್ತಿಗಳಲ್ಲಿ ಕೆಲ ವಿವರಗಳಿವು.</p>.<p>ಈ ಇಬ್ಬರೂ ಸೇರಿ ಒಟ್ಟು ಏಳು ಅಧಿಕಾರಿಗಳಿಗೆ ಸೇರಿದ ಒಟ್ಟು 33 ಸ್ಥಳಗಳ ಮೇಲೆ ಲೋಕಾಯುಕ್ತ ಪೊಲೀಸರು ಶನಿವಾರ ಬೆಳಿಗ್ಗೆಯೇ ದಾಳಿ ನಡೆಸಿ, ಶೋಧ ಕಾರ್ಯ ಆರಂಭಿಸಿದ್ದರು. ಲೋಕಾಯುಕ್ತ ಪೊಲೀಸರು, ಏಳೂ ಅಧಿಕಾರಿಗಳಿಗೆ ಸಂಬಂಧಿಸಿದ ಸ್ಥಳಗಳಿಂದ ₹17.92 ಕೋಟಿ ಮೌಲ್ಯದ ಸ್ಥಿರಾಸ್ತಿ, ₹2.24ಕೋಟಿ ಮೌಲ್ಯದ ಚಿನ್ನಾಭರಣಗಳು ಸೇರಿ ಒಟ್ಟು ₹24.47 ಕೋಟಿ ಮೌಲ್ಯದ ಆಸ್ತಿ ಪತ್ತೆ ಮಾಡಿದ್ದಾರೆ. </p>.<p>ಅಮಿನ್ ಮುಕ್ತರ್ ಅಹಮದ್ ಅವರಿಗೆ ಸೇರಿದ 5 ಸ್ಥಳಗಳಲ್ಲಿ ಶೋಧ ನಡೆಸಲಾಯಿತು. ಅಮಿನ್ ಮತ್ತು ಅವರ ಕುಟುಂಬದವರ ಹೆಸರಿನಲ್ಲಿ ಒಟ್ಟು ನಿವೇಶನಗಳೂ ಸೇರಿ ₹5.71 ಕೋಟಿ ಮೌಲ್ಯದ ಸ್ಥಿರಾಸ್ತಿ ಪತ್ತೆಯಾಗಿದೆ. ಶನಿವಾರದ ದಾಳಿಯಲ್ಲಿ ಅತಿಹೆಚ್ಚು ಆಸ್ತಿ (₹7.32 ಕೋಟಿ) ಪತ್ತೆಯಾಗಿದ್ದೂ ಅಮಿನ್ ಅವರ ಬಳಿಯಲ್ಲೇ. </p>.<p>ಎಚ್.ಸುರೇಶ್ ಅವರಿಗೆ ಶನಿವಾರ ನಿವೃತ್ತಿಯ ದಿನವಾಗಿತ್ತು. ಇದಕ್ಕಾಗಿ ಅವರ ಸಹೋದ್ಯೋಗಿಗಳು ಬೀಳ್ಕೊಡುಗೆ ಸಮಾರಂಭ ಏರ್ಪಡಿಸಿದ್ದರು. ಆದರೆ ಅವರ ಮನೆಗೆ ಬೆಳಿಗ್ಗೆಯೇ ಬಂದ ಲೋಕಾಯುಕ್ತ ಪೊಲೀಸರು, ಶೋಧ ಕಾರ್ಯ ಆರಂಭಿಸಿದರು. 6 ವಾಣಿಜ್ಯ ಸಂಕೀರ್ಣಗಳು, 2 ಮನೆ, 2 ನಿವೇಶನ, ₹1.65 ಕೋಟಿ ಮೊತ್ತದ ಬ್ಯಾಂಕ್ ಠೇವಣಿಗಳು ಪತ್ತೆಯಾದವು.</p>.ಲೋಕಾಯುಕ್ತ ಪೊಲೀಸರ ದಾಳಿ: ಕೋಟಿ ಮೌಲ್ಯದ ಸ್ಥಿರಾಸ್ತಿ, ಅಗಾಧ ಚಿನ್ನಾಭರಣ ಪತ್ತೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>