<p><strong>ಬೆಂಗಳೂರು:</strong> ಕಿದ್ವಾಯಿ ಸ್ಮಾರಕ ಗಂಥಿ ಆಸ್ಪತ್ರೆಯಲ್ಲಿ ಅಕ್ರಮ ನಡೆಯುತ್ತಿರುವ ಆರೋಪದ ಸಂಬಂಧ ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿರುವ ಲೋಕಾಯುಕ್ತ ಸಂಸ್ಥೆಗೆ ಇನ್ನಷ್ಟು ದೂರುಗಳು ಸಲ್ಲಿಕೆಯಾಗಿದ್ದು, ತನಿಖೆ ನಡೆಸುವಂತೆ ಆಗ್ರಹಿಸಲಾಗಿದೆ.</p>.<p>ಕಿದ್ವಾಯಿ ಆಸ್ಪತ್ರೆಯಲ್ಲಿ ಕ್ಯಾನ್ಸರ್ ರೋಗಿಗಳಿಗೆ ಚಿಕಿತ್ಸೆ ನೀಡುವಲ್ಲಿ ಸಾಲು ಸಾಲು ಅಕ್ರಮಗಳು ನಡೆಯುತ್ತಿವೆ ಎಂದು ಲೋಕಾಯುಕ್ತ ಸಂಸ್ಥೆಗೆ ಈಚೆಗೆ ದೂರೊಂದು ಬಂದಿತ್ತು. ಅದರ ಆಧಾರದಲ್ಲಿ ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿದ್ದ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್.ಪಾಟೀಲ ಅವರು ಸೋಮವಾರ ಕಿದ್ವಾಯಿ ಆಸ್ಪತ್ರೆಗೆ ದಿಢೀರ್ ಭೇಟಿ ನೀಡಿ ಪರಿಶೀಲಿಸಿದ್ದರು.</p>.<p>ಆಸ್ಪತ್ರೆಯಲ್ಲಿ ಅಗತ್ಯ ಔಷಧಗಳ ಕೊರತೆ ಇರುವುದು, ತಜ್ಞವೈದ್ಯರು ಇಲ್ಲದೇ ಇರುವುದರ ಬಗ್ಗೆ ಸಂಸ್ಥೆಯ ನಿರ್ದೇಶಕ ಡಾ.ನವೀನ್ ಅವರನ್ನು ಲೋಕಾಯುಕ್ತರು ಪ್ರಶ್ನಿಸಿದ್ದರು. ಅಗತ್ಯ ಔಷಧಗಳ ಪೂರೈಕೆ ಮತ್ತು ತಜ್ಞವೈದ್ಯರ ನೇಮಕಕ್ಕೆ ತಕ್ಷಣವೇ ಕ್ರಮ ತೆಗೆದುಕೊಳ್ಳುವಂತೆ ಹಾಗೂ ಈ ಬಗ್ಗೆ ಏಪ್ರಿಲ್ 24ರಂದು ವರದಿ ಸಲ್ಲಿಸುವಂತೆ ಲೋಕಾಯುಕ್ತರು ಸೂಚಿಸಿದ್ದರು.</p>.<p>ಈ ಬಗ್ಗೆ ಮಾಧ್ಯಮಗಳಲ್ಲಿ ವರದಿಯಾದ ನಂತರ ಇನ್ನೂ ಹಲವು ದೂರಗಳು ಬಂದಿವೆ. ಕಿದ್ವಾಯಿ ಆಸ್ಪತ್ರೆಯ ಯಾವ ವಿಭಾಗಗಳಲ್ಲಿ, ಯಾವ ರೀತಿಯ ಅಕ್ರಮ ನಡೆಯುತ್ತಿದೆ ಎಂದು ವಿವರಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಕಿದ್ವಾಯಿ ಸ್ಮಾರಕ ಗಂಥಿ ಆಸ್ಪತ್ರೆಯಲ್ಲಿ ಅಕ್ರಮ ನಡೆಯುತ್ತಿರುವ ಆರೋಪದ ಸಂಬಂಧ ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿರುವ ಲೋಕಾಯುಕ್ತ ಸಂಸ್ಥೆಗೆ ಇನ್ನಷ್ಟು ದೂರುಗಳು ಸಲ್ಲಿಕೆಯಾಗಿದ್ದು, ತನಿಖೆ ನಡೆಸುವಂತೆ ಆಗ್ರಹಿಸಲಾಗಿದೆ.</p>.<p>ಕಿದ್ವಾಯಿ ಆಸ್ಪತ್ರೆಯಲ್ಲಿ ಕ್ಯಾನ್ಸರ್ ರೋಗಿಗಳಿಗೆ ಚಿಕಿತ್ಸೆ ನೀಡುವಲ್ಲಿ ಸಾಲು ಸಾಲು ಅಕ್ರಮಗಳು ನಡೆಯುತ್ತಿವೆ ಎಂದು ಲೋಕಾಯುಕ್ತ ಸಂಸ್ಥೆಗೆ ಈಚೆಗೆ ದೂರೊಂದು ಬಂದಿತ್ತು. ಅದರ ಆಧಾರದಲ್ಲಿ ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿದ್ದ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್.ಪಾಟೀಲ ಅವರು ಸೋಮವಾರ ಕಿದ್ವಾಯಿ ಆಸ್ಪತ್ರೆಗೆ ದಿಢೀರ್ ಭೇಟಿ ನೀಡಿ ಪರಿಶೀಲಿಸಿದ್ದರು.</p>.<p>ಆಸ್ಪತ್ರೆಯಲ್ಲಿ ಅಗತ್ಯ ಔಷಧಗಳ ಕೊರತೆ ಇರುವುದು, ತಜ್ಞವೈದ್ಯರು ಇಲ್ಲದೇ ಇರುವುದರ ಬಗ್ಗೆ ಸಂಸ್ಥೆಯ ನಿರ್ದೇಶಕ ಡಾ.ನವೀನ್ ಅವರನ್ನು ಲೋಕಾಯುಕ್ತರು ಪ್ರಶ್ನಿಸಿದ್ದರು. ಅಗತ್ಯ ಔಷಧಗಳ ಪೂರೈಕೆ ಮತ್ತು ತಜ್ಞವೈದ್ಯರ ನೇಮಕಕ್ಕೆ ತಕ್ಷಣವೇ ಕ್ರಮ ತೆಗೆದುಕೊಳ್ಳುವಂತೆ ಹಾಗೂ ಈ ಬಗ್ಗೆ ಏಪ್ರಿಲ್ 24ರಂದು ವರದಿ ಸಲ್ಲಿಸುವಂತೆ ಲೋಕಾಯುಕ್ತರು ಸೂಚಿಸಿದ್ದರು.</p>.<p>ಈ ಬಗ್ಗೆ ಮಾಧ್ಯಮಗಳಲ್ಲಿ ವರದಿಯಾದ ನಂತರ ಇನ್ನೂ ಹಲವು ದೂರಗಳು ಬಂದಿವೆ. ಕಿದ್ವಾಯಿ ಆಸ್ಪತ್ರೆಯ ಯಾವ ವಿಭಾಗಗಳಲ್ಲಿ, ಯಾವ ರೀತಿಯ ಅಕ್ರಮ ನಡೆಯುತ್ತಿದೆ ಎಂದು ವಿವರಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>