<p><strong>ವಿಜಯಪುರ</strong>: ಧಾರವಾಡ ಮತ್ತು ಕಲಬುರ್ಗಿಯಲ್ಲಿ ಹೈಕೋರ್ಟ್ ವಿಭಾಗೀಯ ಪೀಠಗಳಿರುವಂತೆ ಲೋಕಾಯುಕ್ತ ಪ್ರಾದೇಶಿಕ ಕಚೇರಿಗಳನ್ನು ಆರಂಭಿಸುವ ಅಗತ್ಯವಿದೆ. ಜೊತೆಗೆ ಇನ್ನೆರಡು ಉಪ ಲೋಕಾಯುಕ್ತ ಹುದ್ದೆಗಳನ್ನು ಸೃಜಿಸುವ ಅಗತ್ಯವಿದೆ ಎಂದು ಉಪಲೋಕಾಯುಕ್ತ ನ್ಯಾಯಮೂರ್ತಿ ಕೆ.ಎನ್.ಫಣೀಂದ್ರ ಹೇಳಿದರು.</p><p>ನಗರದಲ್ಲಿ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಲೋಕಾಯುಕ್ತಕ್ಕೆ ಬರುತ್ತಿರುವ ದೂರುಗಳ ಸಂಖ್ಯೆ ವರ್ಷದಿಂದ ವರ್ಷಕ್ಕೆ ಹೆಚ್ಚುತ್ತಿದ್ದು, ಇದರಿಂದ ಸಂಸ್ಥೆ ಮೇಲೆ ಒತ್ತಡ ಹೆಚ್ಚಾಗಿದೆ. ಈ ದೂರುಗಳ ತ್ವರಿತ ಇತ್ಯರ್ಥಕ್ಕೆ ಲೋಕಾಯುಕ್ತ ಪ್ರಾದೇಶಕ ಕಚೇರಿ ಮತ್ತು ಉಪ ಲೋಕಾಯುಕ್ತರ ನೇಮಕದಿಂದ ಅನುಕೂಲವಾಗಲಿದೆ ಎಂದರು.</p><p>ಲೋಕಾಯುಕ್ತ ಮುಂದೆ ಸದ್ಯ 18,886 ಪ್ರಕರಣಗಳು ನೋಂದಣಿಯಾಗಿವೆ. ಇದರಲ್ಲಿ ಲೋಕಾಯುಕ್ತರ ಎದುರು 5495 ಪ್ರಕರಣಗಳು, ಉಪ ಲೋಕಾಯುಕ್ತ(1)ರ ಬಳಿ 7028 ಮತ್ತು ಉಪ ಲೋಕಾಯುಕ್ತ(2)ರ ಬಳಿ 6363 ಹಾಗೂ 1413 ದೂರುಗಳು ಇಲಾಖಾ ವಿಚಾರಣೆಗೆ ಬಾಕಿ ಇವೆ ಎಂದರು.</p><p>ಲೋಕಾಯುಕ್ತ ಸಂಸ್ಥೆಯಲ್ಲಿ ಸಾಕಷ್ಟು ಹುದ್ದೆಗಳು ಖಾಲಿ ಇದ್ದು, ಭರ್ತಿ ಮಾಡುವಂತೆ ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಲಾಗಿದ್ದು, ಹಂತ, ಹಂತವಾಗಿ ಸರ್ಕಾರ ಖಾಲಿ ಹುದ್ದೆಗಳನ್ನು ಭರ್ತಿ ಮಾಡುತ್ತಿದೆ. ಆದರೆ, ನಿರೀಕ್ಷಿತ ಮಟ್ಟದಲ್ಲಿ ಭರ್ತಿ ಮಾಡಿಲ್ಲ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿಜಯಪುರ</strong>: ಧಾರವಾಡ ಮತ್ತು ಕಲಬುರ್ಗಿಯಲ್ಲಿ ಹೈಕೋರ್ಟ್ ವಿಭಾಗೀಯ ಪೀಠಗಳಿರುವಂತೆ ಲೋಕಾಯುಕ್ತ ಪ್ರಾದೇಶಿಕ ಕಚೇರಿಗಳನ್ನು ಆರಂಭಿಸುವ ಅಗತ್ಯವಿದೆ. ಜೊತೆಗೆ ಇನ್ನೆರಡು ಉಪ ಲೋಕಾಯುಕ್ತ ಹುದ್ದೆಗಳನ್ನು ಸೃಜಿಸುವ ಅಗತ್ಯವಿದೆ ಎಂದು ಉಪಲೋಕಾಯುಕ್ತ ನ್ಯಾಯಮೂರ್ತಿ ಕೆ.ಎನ್.ಫಣೀಂದ್ರ ಹೇಳಿದರು.</p><p>ನಗರದಲ್ಲಿ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಲೋಕಾಯುಕ್ತಕ್ಕೆ ಬರುತ್ತಿರುವ ದೂರುಗಳ ಸಂಖ್ಯೆ ವರ್ಷದಿಂದ ವರ್ಷಕ್ಕೆ ಹೆಚ್ಚುತ್ತಿದ್ದು, ಇದರಿಂದ ಸಂಸ್ಥೆ ಮೇಲೆ ಒತ್ತಡ ಹೆಚ್ಚಾಗಿದೆ. ಈ ದೂರುಗಳ ತ್ವರಿತ ಇತ್ಯರ್ಥಕ್ಕೆ ಲೋಕಾಯುಕ್ತ ಪ್ರಾದೇಶಕ ಕಚೇರಿ ಮತ್ತು ಉಪ ಲೋಕಾಯುಕ್ತರ ನೇಮಕದಿಂದ ಅನುಕೂಲವಾಗಲಿದೆ ಎಂದರು.</p><p>ಲೋಕಾಯುಕ್ತ ಮುಂದೆ ಸದ್ಯ 18,886 ಪ್ರಕರಣಗಳು ನೋಂದಣಿಯಾಗಿವೆ. ಇದರಲ್ಲಿ ಲೋಕಾಯುಕ್ತರ ಎದುರು 5495 ಪ್ರಕರಣಗಳು, ಉಪ ಲೋಕಾಯುಕ್ತ(1)ರ ಬಳಿ 7028 ಮತ್ತು ಉಪ ಲೋಕಾಯುಕ್ತ(2)ರ ಬಳಿ 6363 ಹಾಗೂ 1413 ದೂರುಗಳು ಇಲಾಖಾ ವಿಚಾರಣೆಗೆ ಬಾಕಿ ಇವೆ ಎಂದರು.</p><p>ಲೋಕಾಯುಕ್ತ ಸಂಸ್ಥೆಯಲ್ಲಿ ಸಾಕಷ್ಟು ಹುದ್ದೆಗಳು ಖಾಲಿ ಇದ್ದು, ಭರ್ತಿ ಮಾಡುವಂತೆ ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಲಾಗಿದ್ದು, ಹಂತ, ಹಂತವಾಗಿ ಸರ್ಕಾರ ಖಾಲಿ ಹುದ್ದೆಗಳನ್ನು ಭರ್ತಿ ಮಾಡುತ್ತಿದೆ. ಆದರೆ, ನಿರೀಕ್ಷಿತ ಮಟ್ಟದಲ್ಲಿ ಭರ್ತಿ ಮಾಡಿಲ್ಲ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>