<p><strong>ಬೆಂಗಳೂರು:</strong> ಹೆಚ್ಚುವರಿ ಹುದ್ದೆ ಮಂಜೂರಾತಿ, ಭತ್ಯೆ ಹೆಚ್ಚಳ ಕೋರಿ ಲೋಕಾಯುಕ್ತ ಸಂಸ್ಥೆಯು ರಾಜ್ಯ ಸರ್ಕಾರಕ್ಕೆ ಸಲ್ಲಿಸಿದ್ದ ಹಲವು ಪ್ರಸ್ತಾವಗಳು ಆರ್ಥಿಕ ಇಲಾಖೆ ಬಳಿ ಬಾಕಿ ಉಳಿದಿವೆ. ಇದರಿಂದ ಲೋಕಾಯುಕ್ತ ಸಂಸ್ಥೆಯ ಕಾರ್ಯನಿರ್ವಹಣೆಗೆ ತೊಡಕಾಗಿದೆ.</p>.<p>ಈ ಪೈಕಿ ಕೆಲವು ಪ್ರಸ್ತಾವಗಳನ್ನು 2018–19ರಲ್ಲಿಯೇ ಸಲ್ಲಿಸಲಾಗಿತ್ತು. ಲೋಕಾಯುಕ್ತ ಸಂಸ್ಥೆ ಮತ್ತು ಆರ್ಥಿಕ ಇಲಾಖೆ ಮಧ್ಯೆ ಹಲವು ಬಾರಿ ಪತ್ರ ವ್ಯವಹಾರಗಳು ನಡೆದಿವೆ. ಆದರೆ ಪ್ರಸ್ತಾವಗಳಿಗೆ ಈವರೆಗೂ ಅನುಮೋದನೆ ಸಿಕ್ಕಿಲ್ಲ ಎಂದು ಆಕ್ಷೇಪ ವ್ಯಕ್ತಪಡಿಸಿ, ಲೋಕಾಯುಕ್ತವು ಆರ್ಥಿಕ ಇಲಾಖೆಗೆ ಪತ್ರ ಬರೆದಿದೆ.</p>.<p>ಲೋಕಾಯುಕ್ತ ಸಂಸ್ಥೆಯು 339 ಹೆಚ್ಚುವರಿ ಹುದ್ದೆಗಳನ್ನು ಕೋರಿ 2024ರಲ್ಲಿ ಪ್ರಸ್ತಾವ ಸಲ್ಲಿಸಿರುತ್ತದೆ. ಆರ್ಥಿಕ ಇಲಾಖೆಯು ಹೆಚ್ಚಿನ ಮಾಹಿತಿ ಅಗತ್ಯವಿದೆ ಎಂದು ತಿಳಿಸಿರುತ್ತದೆ. ಯಾವ ಮಾಹಿತಿ ಬೇಕು ಎಂಬ ವಿವರವನ್ನು ನೀಡಿ ಎಂದು ಆರ್ಥಿಕ ಇಲಾಖೆಗೆ ಲೋಕಾಯುಕ್ತವು ಅಕ್ಟೋಬರ್ 10ರಂದು ಪತ್ರ ಬರೆದಿದೆ. ಆ ಪತ್ರಕ್ಕೆ ಈವರೆಗೆ ಪ್ರತಿಕ್ರಿಯೆ ಬಂದಿರುವುದಿಲ್ಲ.</p>.<p>ಲೋಕಾಯುಕ್ತದಲ್ಲಿ ಗ್ರೂಪ್–ಸಿ ವೃಂದದಲ್ಲಿನ ಉಳಿಕೆ ಮೂಲ ವೃಂದದ 64 ಮತ್ತು ಕಲ್ಯಾಣ ಕರ್ನಾಟಕ ವೃಂದದ 4 ಹುದ್ದೆಗಳು ನೇಮಕಾತಿಗೆ ಬಾಕಿ ಇರುತ್ತವೆ. ಆರ್ಥಿಕ ಮಿತವ್ಯಯ ಸಡಿಲಿಸಿ, ಈ ಹುದ್ದೆಗಳ ನೇರ ನೇಮಕಾತಿಗೆ ಅನುಮತಿ ನೀಡಿ ಎಂದು ಪ್ರಸ್ತಾವ ಸಲ್ಲಿಸಿ ಹಲವು ತಿಂಗಳು ಕಳೆದಿವೆ. ಆರ್ಥಿಕ ಇಲಾಖೆಯು ಈವರೆಗೆ ಅನುಮತಿ ನೀಡಿಲ್ಲ.</p>.<p>‘ಲೋಕಾಯುಕ್ತ ಸಂಸ್ಥೆಯು ಸಾವಿರಾರು ಪ್ರಕರಣಗಳನ್ನು ನಿರ್ವಹಿಸುತ್ತಿದೆ. ಸಿಬ್ಬಂದಿ ಕೊರತೆಯಿಂದ ಕಾರ್ಯನಿರ್ವಹಣೆ ಕಷ್ಟವಾಗಿದೆ. ಸಿಬ್ಬಂದಿಯೇ ಇಲ್ಲದೆ ಸಂಸ್ಥೆಯು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸುವುದು ಹೇಗೆ’ ಎಂದು ಲೋಕಾಯುಕ್ತದ ಹಿರಿಯ ಅಧಿಕಾರಿಯೊಬ್ಬರು ಪ್ರಶ್ನಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಹೆಚ್ಚುವರಿ ಹುದ್ದೆ ಮಂಜೂರಾತಿ, ಭತ್ಯೆ ಹೆಚ್ಚಳ ಕೋರಿ ಲೋಕಾಯುಕ್ತ ಸಂಸ್ಥೆಯು ರಾಜ್ಯ ಸರ್ಕಾರಕ್ಕೆ ಸಲ್ಲಿಸಿದ್ದ ಹಲವು ಪ್ರಸ್ತಾವಗಳು ಆರ್ಥಿಕ ಇಲಾಖೆ ಬಳಿ ಬಾಕಿ ಉಳಿದಿವೆ. ಇದರಿಂದ ಲೋಕಾಯುಕ್ತ ಸಂಸ್ಥೆಯ ಕಾರ್ಯನಿರ್ವಹಣೆಗೆ ತೊಡಕಾಗಿದೆ.</p>.<p>ಈ ಪೈಕಿ ಕೆಲವು ಪ್ರಸ್ತಾವಗಳನ್ನು 2018–19ರಲ್ಲಿಯೇ ಸಲ್ಲಿಸಲಾಗಿತ್ತು. ಲೋಕಾಯುಕ್ತ ಸಂಸ್ಥೆ ಮತ್ತು ಆರ್ಥಿಕ ಇಲಾಖೆ ಮಧ್ಯೆ ಹಲವು ಬಾರಿ ಪತ್ರ ವ್ಯವಹಾರಗಳು ನಡೆದಿವೆ. ಆದರೆ ಪ್ರಸ್ತಾವಗಳಿಗೆ ಈವರೆಗೂ ಅನುಮೋದನೆ ಸಿಕ್ಕಿಲ್ಲ ಎಂದು ಆಕ್ಷೇಪ ವ್ಯಕ್ತಪಡಿಸಿ, ಲೋಕಾಯುಕ್ತವು ಆರ್ಥಿಕ ಇಲಾಖೆಗೆ ಪತ್ರ ಬರೆದಿದೆ.</p>.<p>ಲೋಕಾಯುಕ್ತ ಸಂಸ್ಥೆಯು 339 ಹೆಚ್ಚುವರಿ ಹುದ್ದೆಗಳನ್ನು ಕೋರಿ 2024ರಲ್ಲಿ ಪ್ರಸ್ತಾವ ಸಲ್ಲಿಸಿರುತ್ತದೆ. ಆರ್ಥಿಕ ಇಲಾಖೆಯು ಹೆಚ್ಚಿನ ಮಾಹಿತಿ ಅಗತ್ಯವಿದೆ ಎಂದು ತಿಳಿಸಿರುತ್ತದೆ. ಯಾವ ಮಾಹಿತಿ ಬೇಕು ಎಂಬ ವಿವರವನ್ನು ನೀಡಿ ಎಂದು ಆರ್ಥಿಕ ಇಲಾಖೆಗೆ ಲೋಕಾಯುಕ್ತವು ಅಕ್ಟೋಬರ್ 10ರಂದು ಪತ್ರ ಬರೆದಿದೆ. ಆ ಪತ್ರಕ್ಕೆ ಈವರೆಗೆ ಪ್ರತಿಕ್ರಿಯೆ ಬಂದಿರುವುದಿಲ್ಲ.</p>.<p>ಲೋಕಾಯುಕ್ತದಲ್ಲಿ ಗ್ರೂಪ್–ಸಿ ವೃಂದದಲ್ಲಿನ ಉಳಿಕೆ ಮೂಲ ವೃಂದದ 64 ಮತ್ತು ಕಲ್ಯಾಣ ಕರ್ನಾಟಕ ವೃಂದದ 4 ಹುದ್ದೆಗಳು ನೇಮಕಾತಿಗೆ ಬಾಕಿ ಇರುತ್ತವೆ. ಆರ್ಥಿಕ ಮಿತವ್ಯಯ ಸಡಿಲಿಸಿ, ಈ ಹುದ್ದೆಗಳ ನೇರ ನೇಮಕಾತಿಗೆ ಅನುಮತಿ ನೀಡಿ ಎಂದು ಪ್ರಸ್ತಾವ ಸಲ್ಲಿಸಿ ಹಲವು ತಿಂಗಳು ಕಳೆದಿವೆ. ಆರ್ಥಿಕ ಇಲಾಖೆಯು ಈವರೆಗೆ ಅನುಮತಿ ನೀಡಿಲ್ಲ.</p>.<p>‘ಲೋಕಾಯುಕ್ತ ಸಂಸ್ಥೆಯು ಸಾವಿರಾರು ಪ್ರಕರಣಗಳನ್ನು ನಿರ್ವಹಿಸುತ್ತಿದೆ. ಸಿಬ್ಬಂದಿ ಕೊರತೆಯಿಂದ ಕಾರ್ಯನಿರ್ವಹಣೆ ಕಷ್ಟವಾಗಿದೆ. ಸಿಬ್ಬಂದಿಯೇ ಇಲ್ಲದೆ ಸಂಸ್ಥೆಯು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸುವುದು ಹೇಗೆ’ ಎಂದು ಲೋಕಾಯುಕ್ತದ ಹಿರಿಯ ಅಧಿಕಾರಿಯೊಬ್ಬರು ಪ್ರಶ್ನಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>